AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರಿಪ್ಟ್​ನಲ್ಲಿರುವುದಕ್ಕಿಂತಲೂ ಉತ್ತಮವಾಗಿ ಮೂಡಿಬಂದಿದೆ ‘ಪುಷ್ಪ 2’?

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಸಿನಿಮಾದಲ್ಲಿ ಫಹಾದ್ ಫಾಸಿಲ್, ಧನಂಜಯ್ ಮೊದಲಾದವರು ನಟಿಸುತ್ತಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಸ್ಕ್ರಿಪ್ಟ್​ನಲ್ಲಿರುವುದಕ್ಕಿಂತಲೂ ಉತ್ತಮವಾಗಿ ಮೂಡಿಬಂದಿದೆ ‘ಪುಷ್ಪ 2’?
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
| Edited By: |

Updated on:Oct 15, 2024 | 5:09 PM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಚಿತ್ರದ ರಿಲೀಸ್​ಗೆ ಇನ್ನು ಉಳಿದಿರೋದು ಒಂದೂವರೆ ತಿಂಗಳು ಮಾತ್ರ. ಇದು ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ಚಿತ್ರದ ಬಗ್ಗೆ ಈಗಾಗಲೇ ಹೈಪ್ ಕೊಡೋ ಕೆಲಸ ಆಗುತ್ತಿದೆ. ಈ ಸಿನಿಮಾ ಡಿಸೆಂಬರ್ 5ಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀ ಪ್ರಸಾದ್ ನೀಡಿರುವ ಹೈಪ್​ಗೆ ಎಲ್ಲರೂ ಅಚ್ಚರಿ ಹೊರಹಾಕಿದ್ದಾರೆ.

ಇತ್ತೀಚೆಗೆ ದೇವಿಶ್ರೀ ಪ್ರಸಾದ್ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರು ‘ಪುಷ್ಪ 2’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅವರು ಸಿನಿಮಾದ ಮೊದಲಾರ್ಧ ನೋಡಿ ಥ್ರಿಲ್ ಆಗಿದ್ದಾರೆ. ‘ನಾನು ಪುಷ್ಪ ಸೀಕ್ವೆಲ್​ನ ಮೊದಲಾರ್ಧ ನೋಡಿದ್ದೇನೆ. ನಾನು ಮ್ಯೂಸಿಕ್ ಬಗ್ಗೆ ಮಾತನಾಡುತ್ತಿಲ್ಲ. ಸಿನಿಮಾ ಬಗ್ಗೆ ಮಾತನಾಡುತ್ತಿದ್ದೇನೆ’ ಎಂದಿದ್ದಾರೆ ಶ್ರೀದೇವಿ ಪ್ರಸಾದ್.

‘ಸುಕುಮಾರ್ ಅವರು ಸ್ಕ್ರಿಪ್ಟ್ ಹೇಳುವಾಗಲೇ ಥ್ರಿಲ್ ಆಗಿದ್ದೆವು. ಪ್ರತಿ ದೃಶ್ಯಕ್ಕೂ ಇದು ಇಂಟರ್​ವಲ್ಲಾ ಇದು ಇಂಟರ್​ವಲ್ಲಾ ಎಂದು ಕೇಳುತ್ತಿದ್ದೆವು. ಸುಕುಮಾರ್ ಅವರು ಮಾಡಿದ ಸ್ಕ್ರಿಪ್ಟ್​, ಅವರು ಸಿನಿಮಾ ಮಾಡಿದ ರೀತಿ, ಅಲ್ಲು ಅರ್ಜುನ್ ಅವರ ನಟನೆ ಅದ್ಭುತವಾಗಿದೆ. ಮೊದಲಾರ್ಧದಲ್ಲೇ ಮೈಂಡ್​ಬ್ಲೋಯಿಂಗ್ ಆಗಿದೆ’ ಎಂದಿದ್ದಾರೆ ಅವರು.

‘ಪುಷ್ಪ’ ಚಿತ್ರ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ‘ಪುಷ್ಪ 2’ ಸಿನಿಮಾ ಬಗ್ಗೆ ದೇವಿಶ್ರೀ ಪ್ರಸಾದ್ ಹೇಳುವುದು ನಿಜವೇ ಆದಲ್ಲಿ ಅನಾಯಾಸವಾಗಿ ಈ ಸಿನಿಮಾ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಲಿದೆ. ಇತ್ತೀಚಿನ ವರ್ಷಗಳಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡುವುದು ದೊಡ್ಡ ಚಾಲೆಂಜ್ ಆಗಿ ಉಳಿದಿಲ್ಲ. ‘ಪುಷ್ಪ’ ಚಿತ್ರವನ್ನು ಜನರು ಈಗಾಗಲೇ ನೋಡಿರುವುದರಿಂದ ‘ಪುಷ್ಪ 2’ ಬಗ್ಗೆ ಮತ್ತಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ‘ಪುಷ್ಪ ನಾನು ಮಾಡಬೇಕಿತ್ತು, ಅಲ್ಲು ಅರ್ಜುನ್ ಸರ್ ಗ್ರೇಟ್ ಬಿಡಿ’: ಶಾರುಖ್ ಖಾನ್

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಸಿನಿಮಾದಲ್ಲಿ ಫಹಾದ್ ಫಾಸಿಲ್, ಧನಂಜಯ್ ಮೊದಲಾದವರು ನಟಿಸುತ್ತಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Tue, 15 October 24

Follow Us
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ