AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರಿಪ್ಟ್​ನಲ್ಲಿರುವುದಕ್ಕಿಂತಲೂ ಉತ್ತಮವಾಗಿ ಮೂಡಿಬಂದಿದೆ ‘ಪುಷ್ಪ 2’?

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಸಿನಿಮಾದಲ್ಲಿ ಫಹಾದ್ ಫಾಸಿಲ್, ಧನಂಜಯ್ ಮೊದಲಾದವರು ನಟಿಸುತ್ತಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಸ್ಕ್ರಿಪ್ಟ್​ನಲ್ಲಿರುವುದಕ್ಕಿಂತಲೂ ಉತ್ತಮವಾಗಿ ಮೂಡಿಬಂದಿದೆ ‘ಪುಷ್ಪ 2’?
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
| Edited By: |

Updated on:Oct 15, 2024 | 5:09 PM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಚಿತ್ರದ ರಿಲೀಸ್​ಗೆ ಇನ್ನು ಉಳಿದಿರೋದು ಒಂದೂವರೆ ತಿಂಗಳು ಮಾತ್ರ. ಇದು ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ಚಿತ್ರದ ಬಗ್ಗೆ ಈಗಾಗಲೇ ಹೈಪ್ ಕೊಡೋ ಕೆಲಸ ಆಗುತ್ತಿದೆ. ಈ ಸಿನಿಮಾ ಡಿಸೆಂಬರ್ 5ಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀ ಪ್ರಸಾದ್ ನೀಡಿರುವ ಹೈಪ್​ಗೆ ಎಲ್ಲರೂ ಅಚ್ಚರಿ ಹೊರಹಾಕಿದ್ದಾರೆ.

ಇತ್ತೀಚೆಗೆ ದೇವಿಶ್ರೀ ಪ್ರಸಾದ್ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರು ‘ಪುಷ್ಪ 2’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅವರು ಸಿನಿಮಾದ ಮೊದಲಾರ್ಧ ನೋಡಿ ಥ್ರಿಲ್ ಆಗಿದ್ದಾರೆ. ‘ನಾನು ಪುಷ್ಪ ಸೀಕ್ವೆಲ್​ನ ಮೊದಲಾರ್ಧ ನೋಡಿದ್ದೇನೆ. ನಾನು ಮ್ಯೂಸಿಕ್ ಬಗ್ಗೆ ಮಾತನಾಡುತ್ತಿಲ್ಲ. ಸಿನಿಮಾ ಬಗ್ಗೆ ಮಾತನಾಡುತ್ತಿದ್ದೇನೆ’ ಎಂದಿದ್ದಾರೆ ಶ್ರೀದೇವಿ ಪ್ರಸಾದ್.

‘ಸುಕುಮಾರ್ ಅವರು ಸ್ಕ್ರಿಪ್ಟ್ ಹೇಳುವಾಗಲೇ ಥ್ರಿಲ್ ಆಗಿದ್ದೆವು. ಪ್ರತಿ ದೃಶ್ಯಕ್ಕೂ ಇದು ಇಂಟರ್​ವಲ್ಲಾ ಇದು ಇಂಟರ್​ವಲ್ಲಾ ಎಂದು ಕೇಳುತ್ತಿದ್ದೆವು. ಸುಕುಮಾರ್ ಅವರು ಮಾಡಿದ ಸ್ಕ್ರಿಪ್ಟ್​, ಅವರು ಸಿನಿಮಾ ಮಾಡಿದ ರೀತಿ, ಅಲ್ಲು ಅರ್ಜುನ್ ಅವರ ನಟನೆ ಅದ್ಭುತವಾಗಿದೆ. ಮೊದಲಾರ್ಧದಲ್ಲೇ ಮೈಂಡ್​ಬ್ಲೋಯಿಂಗ್ ಆಗಿದೆ’ ಎಂದಿದ್ದಾರೆ ಅವರು.

‘ಪುಷ್ಪ’ ಚಿತ್ರ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ‘ಪುಷ್ಪ 2’ ಸಿನಿಮಾ ಬಗ್ಗೆ ದೇವಿಶ್ರೀ ಪ್ರಸಾದ್ ಹೇಳುವುದು ನಿಜವೇ ಆದಲ್ಲಿ ಅನಾಯಾಸವಾಗಿ ಈ ಸಿನಿಮಾ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಲಿದೆ. ಇತ್ತೀಚಿನ ವರ್ಷಗಳಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡುವುದು ದೊಡ್ಡ ಚಾಲೆಂಜ್ ಆಗಿ ಉಳಿದಿಲ್ಲ. ‘ಪುಷ್ಪ’ ಚಿತ್ರವನ್ನು ಜನರು ಈಗಾಗಲೇ ನೋಡಿರುವುದರಿಂದ ‘ಪುಷ್ಪ 2’ ಬಗ್ಗೆ ಮತ್ತಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ‘ಪುಷ್ಪ ನಾನು ಮಾಡಬೇಕಿತ್ತು, ಅಲ್ಲು ಅರ್ಜುನ್ ಸರ್ ಗ್ರೇಟ್ ಬಿಡಿ’: ಶಾರುಖ್ ಖಾನ್

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಸಿನಿಮಾದಲ್ಲಿ ಫಹಾದ್ ಫಾಸಿಲ್, ಧನಂಜಯ್ ಮೊದಲಾದವರು ನಟಿಸುತ್ತಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Tue, 15 October 24

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?