AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

Pushpa 2: ‘ಪುಷ್ಪ 2’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ
ಪುಷ್ಪ 2 ಬಸ್​ ಅಪಘಾತ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on:May 31, 2023 | 2:41 PM

Share

ತೆಲುಗು ಚಿತ್ರರಂಗಕ್ಕೆ ಒಂದರಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಿದೆ. ಇತ್ತೀಚೆಗಷ್ಟೇ ಪವನ್​ ಕಲ್ಯಾಣ್​ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಅವಘಡ ಸಂಭವಿಸುತ್ತು. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ. ಈಗ ‘ಪುಷ್ಪ 2’ (Pushpa 2) ಚಿತ್ರತಂಡಕ್ಕೂ ಅದೇ ರೀತಿ ಆಗಿದೆ. ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ. ಅಪಘಾತದ (Pushpa 2 Bus Accident) ಸ್ಥಳದಲ್ಲಿನ ಫೋಟೋ ವೈರಲ್​ ಆಗಿದೆ. ಈ ಫೋಟೋ ನೋಡಿ ಅಲ್ಲು ಅರ್ಜುನ್​ (Allu Arjun) ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಅಪಘಾತ ಸಂಭವಿಸಿದ್ದು ಹೇಗೆ?

ತೆಲಂಗಾಣ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಕೆಟ್ಟು ಹೋಗಿತ್ತು. ಆ ಬಸ್​ ಅನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ‘ಪುಷ್ಪ 2’ ಸಿನಿಮಾದ ಕಲಾವಿದರನ್ನು ಕರೆದು ತರುತ್ತಿದ್ದ ಬಸ್​ನ ಚಾಲಕನಿಗೆ ಕೆಟ್ಟು ನಿಂತಿದ್ದ ಬಸ್​ ಕಾಣಿಸಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದಿದೆ ಎಂದು ವರದಿ ಆಗಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆಯ ಹೈದರಾಬಾದ್​-ವಿಜಯವಾಡ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಇದ್ದ ಇಬ್ಬರಿಗೆ ಗಾಯವಾಗಿದೆ.

ಇದನ್ನೂ ಓದಿ: ಪುಷ್ಪ 2 ಆಡಿಯೋ, ಸ್ಯಾಟಲೈಟ್ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ: ಖರೀದಿಸಿದ್ದು ಬಾಲಿವುಡ್​ನ ದೊಡ್ಡ ಕುಳ

ಅಪಘಾತದ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿರುವ ‘ಪುಷ್ಪ 2’ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಈಗ ಕಲಾವಿದರ ಬಸ್​ಗೆ ಅಪಘಾತ ಆಗಿರುವುದರಿಂದ ಶೂಟಿಂಗ್​ಗೆ ಬ್ರೇಕ್​ ಬೀಳಬಹುದಾ ಎಂಬ ಪ್ರಶ್ನೆ ಎದುರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:19 pm, Wed, 31 May 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ