AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

Pushpa 2: ‘ಪುಷ್ಪ 2’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ
ಪುಷ್ಪ 2 ಬಸ್​ ಅಪಘಾತ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on:May 31, 2023 | 2:41 PM

Share

ತೆಲುಗು ಚಿತ್ರರಂಗಕ್ಕೆ ಒಂದರಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಿದೆ. ಇತ್ತೀಚೆಗಷ್ಟೇ ಪವನ್​ ಕಲ್ಯಾಣ್​ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಅವಘಡ ಸಂಭವಿಸುತ್ತು. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ. ಈಗ ‘ಪುಷ್ಪ 2’ (Pushpa 2) ಚಿತ್ರತಂಡಕ್ಕೂ ಅದೇ ರೀತಿ ಆಗಿದೆ. ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ. ಅಪಘಾತದ (Pushpa 2 Bus Accident) ಸ್ಥಳದಲ್ಲಿನ ಫೋಟೋ ವೈರಲ್​ ಆಗಿದೆ. ಈ ಫೋಟೋ ನೋಡಿ ಅಲ್ಲು ಅರ್ಜುನ್​ (Allu Arjun) ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಅಪಘಾತ ಸಂಭವಿಸಿದ್ದು ಹೇಗೆ?

ತೆಲಂಗಾಣ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಕೆಟ್ಟು ಹೋಗಿತ್ತು. ಆ ಬಸ್​ ಅನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ‘ಪುಷ್ಪ 2’ ಸಿನಿಮಾದ ಕಲಾವಿದರನ್ನು ಕರೆದು ತರುತ್ತಿದ್ದ ಬಸ್​ನ ಚಾಲಕನಿಗೆ ಕೆಟ್ಟು ನಿಂತಿದ್ದ ಬಸ್​ ಕಾಣಿಸಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದಿದೆ ಎಂದು ವರದಿ ಆಗಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆಯ ಹೈದರಾಬಾದ್​-ವಿಜಯವಾಡ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಇದ್ದ ಇಬ್ಬರಿಗೆ ಗಾಯವಾಗಿದೆ.

ಇದನ್ನೂ ಓದಿ: ಪುಷ್ಪ 2 ಆಡಿಯೋ, ಸ್ಯಾಟಲೈಟ್ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ: ಖರೀದಿಸಿದ್ದು ಬಾಲಿವುಡ್​ನ ದೊಡ್ಡ ಕುಳ

ಅಪಘಾತದ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿರುವ ‘ಪುಷ್ಪ 2’ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಈಗ ಕಲಾವಿದರ ಬಸ್​ಗೆ ಅಪಘಾತ ಆಗಿರುವುದರಿಂದ ಶೂಟಿಂಗ್​ಗೆ ಬ್ರೇಕ್​ ಬೀಳಬಹುದಾ ಎಂಬ ಪ್ರಶ್ನೆ ಎದುರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:19 pm, Wed, 31 May 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ