AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ಮುಗಿಯೋದಕ್ಕೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’; ಅಲ್ಲು ಅರ್ಜುನ್​ ಸಿನಿಮಾದ ಸಾಧನೆ ಏನು?

ಪ್ರತಿಷ್ಠಿತ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಪುಷ್ಪ 2’ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಸಿನಿಮಾದ ಪೋಸ್ಟರ್​ಗೆ 70 ಲಕ್ಷ ಲೈಕ್ಸ್​ ಸಿಕ್ಕಿದೆ. ಆ ಖುಷಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ. ಈ ಸಿನಿಮಾ ಮೇಲೆ ಅಲ್ಲು ಅರ್ಜುನ್​ ಅಭಿಮಾನಿಗಳು ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ ನೀಡುತ್ತಿದೆ.

ಶೂಟಿಂಗ್​ ಮುಗಿಯೋದಕ್ಕೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’; ಅಲ್ಲು ಅರ್ಜುನ್​ ಸಿನಿಮಾದ ಸಾಧನೆ ಏನು?
ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Aug 13, 2023 | 7:16 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳದೇ ಬಹಳ ಸಮಯ ಆಗಿದೆ. 2021ರ ಡಿಸೆಂಬರ್​ನಲ್ಲಿ ರಿಲೀಸ್​ ಆದ ‘ಪುಷ್ಪ’ ಸಿನಿಮಾದಿಂದ ಅವರಿಗೆ ಬಹು ದೊಡ್ಡ ಗೆಲುವು ಸಿಕ್ಕಿತು. ಆದರೆ ಆ ಬಳಿಕ ಅವರು ಹೊಸ ಸಿನಿಮಾ ಮಾಡುವಲ್ಲಿ ಅವಸರ ತೋರಿಸುತ್ತಿಲ್ಲ. ಪುಷ್ಪ 2’ (Pushpa 2) ಚಿತ್ರದ ಕೆಲಸಗಳು ಚಾಲ್ತಿಯಲ್ಲಿವೆ. ಆದರೆ ಬಹಳ ನಿಧಾನವಾಗಿ ಶೂಟಿಂಗ್​ ನಡೆಯುತ್ತಿದೆ. ಈ ಚಿತ್ರಕ್ಕೆ ಇನ್ನೂ ಚಿತ್ರೀಕರಣ ಪ್ರಗತಿಯಲ್ಲಿ ಇರುವಾಗಲೇ ಒಂದು ಹೊಸ ದಾಖಲೆ ಬರೆದಿದೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಸಿನಿಮಾದ ಪೋಸ್ಟರ್​ ಬರೋಬ್ಬರಿ 7 ಮಿಲಿಯನ್​ (70 ಲಕ್ಷ) ಲೈಕ್ಸ್​ ಪಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಬೇರೆ ಯಾವುದೇ ಸಿನಿಮಾದ ಪೋಸ್ಟರ್​ ಕೂಡ ಈ ಪರಿ ಲೈಕ್ಸ್​ ಪಡೆದಿಲ್ಲ. ಈ ಖುಷಿಯಲ್ಲಿ ‘ಪುಷ್ಪ 2’ ಚಿತ್ರತಂಡ ಸಂಭ್ರಮಿಸಿದೆ. ನಿರ್ದೇಶಕ ಸುಕುಮಾರ್​ (Sukumar) ಅವರು ಈ ಸಿನಿಮಾಗೆ ಬಹಳ ಕಾಳಜಿಯಿಂದ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಪ್ರತಿಷ್ಠಿತ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಪುಷ್ಪ 2’ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಸಿನಿಮಾದ ಪೋಸ್ಟರ್​ಗೆ 70 ಲಕ್ಷ ಲೈಕ್ಸ್​ ಸಿಕ್ಕಿದೆ. ಆ ಖುಷಿಯ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ. ಈ ಸಿನಿಮಾ ಮೇಲೆ ಅಲ್ಲು ಅರ್ಜುನ್​ ಅಭಿಮಾನಿಗಳು ಎಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ ನೀಡುತ್ತಿದೆ. ಈ ವರ್ಷ ಏಪ್ರಿಲ್​ 7ರಂದು ‘ಪುಷ್ಪ 2’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿತ್ತು.

ಮೈತ್ರಿ ಮೂವೀ ಮೇಕರ್ಸ್ ಟ್ವೀಟ್​ ಇಲ್ಲಿದೆ:

ಫಸ್ಟ್​ ಲುಕ್​ನಲ್ಲಿ ಅಲ್ಲು ಅರ್ಜುನ್​ ಅವರ ಗೆಟಪ್​ ವಿಶೇಷವಾಗಿದೆ. ಅದರ ಕ್ರೇಜ್​ ಎಷ್ಟರಮಟ್ಟಿಗೆ ಇದೆ ಎಂದರೆ, ಆ ಪೋಸ್ಟರ್​ ರೀತಿಯೇ ಕೆಲವರು ವೇಷ ಧರಿಸಿಕೊಂಡು ಪೋಸ್ ನೀಡಿದ ಉದಾಹರಣೆ ಕೂಡ ಇದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ನಟಿಸುತ್ತಿದ್ದಾರೆ. ಈ ಮೊದಲು ಬಿಡುಗಡೆ ಆದ ಫಸ್ಟ್​ ಗ್ಲಿಂಪ್ಸ್​ ವಿಡಿಯೋ ಕೂಡ ಸಖತ್​ ವೈರಲ್​ ಆಗಿತ್ತು.

ಇದನ್ನೂ ಓದಿ: ಪುಷ್ಪರಾಜ್​ ವಿರುದ್ಧ ಸೇಡಿನಿಂದ ಕುದಿಯುವ ಬನ್ವರ್​ ಸಿಂಗ್​ ಶೆಖಾವತ್​​; ‘ಪುಷ್ಪ 2’ ತಂಡದಿಂದ ಫಹಾದ್​ ಫಾಸಿಲ್​ ಲುಕ್​ ಬಿಡುಗಡೆ

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಅದರ ಸೀಕ್ವೆಲ್​ ಮೇಲೆ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮಾಡಲು ನಿರ್ದೇಶಕ ಸುಕುಮಾರ್​ ಪ್ರಯತ್ನಿಸುತ್ತಿದ್ದಾರೆ. ದೇವಿಶ್ರೀ ಪ್ರಸಾದ್​ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರದಲ್ಲಿ ಒಂದು ಸ್ಪೆಷಲ್​ ಸಾಂಗ್​ ಇರಲಿದ್ದು, ಅದರಲ್ಲಿ ಯಾರು ನಟಿಸಲಿದ್ದಾರೆ ಎಂಬ ಕೌತುಕ ಎಲ್ಲರಲ್ಲೂ ಮೂಡಿದೆ. ‘ಪುಷ್ಪ’ ಚಿತ್ರಕ್ಕಿಂತಲೂ ಅದ್ದೂರಿಯಾಗಿ ‘ಪುಷ್ಪ 2’ ಚಿತ್ರ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?