ಆ.15ಕ್ಕೆ ರಿಲೀಸ್ ಆಗಲ್ಲ ‘ಪುಷ್ಪ 2’: ಹೊಸ ದಿನಾಂಕ ತಿಳಿಸಿದ ಚಿತ್ರತಂಡ

ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ನೋಡಲು ಕಾದಿದ್ದರು. ಆದರೆ ಈಗ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದೆ. ಆಗಸ್ಟ್ 15ರ ಬದಲು ಚಿತ್ರತಂಡದವರು ಹೊಸ ದಿನಾಂಕ ಘೋಷಣೆ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್​ ಇನ್ನೂ ಬಾಕಿ ಇದೆ. ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೂಡ ಸಾಕಷ್ಟಿವೆ. ಆದ್ದರಿಂದ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಯಿತು.

ಆ.15ಕ್ಕೆ ರಿಲೀಸ್ ಆಗಲ್ಲ ‘ಪುಷ್ಪ 2’: ಹೊಸ ದಿನಾಂಕ ತಿಳಿಸಿದ ಚಿತ್ರತಂಡ
ಅಲ್ಲು ಅರ್ಜುನ್​
Follow us
|

Updated on: Jun 17, 2024 | 10:01 PM

ಆಗಸ್ಟ್​ 15ಕ್ಕೆ ‘ಪುಷ್ಪ 2’ ಸಿನಿಮಾ (Pushpa 2 Movie) ಬಿಡುಗಡೆ ಆಗಲಿದೆ ಎಂದು ಎಲ್ಲರೂ ಕಾಯುತ್ತಿದ್ದರು. ಆದರೆ ಪ್ರೇಕ್ಷಕರ ನಿರೀಕ್ಷೆ ಸುಳ್ಳಾಗಿದೆ. ಚಿತ್ರತಂಡ ಈಗ ರಿಲೀಸ್​ ದಿನಾಂಕ (Pushpa 2 Release Date) ಮುಂದೂಡಿಕೊಂಡಿದೆ. ಆಗಸ್ಟ್​ 15ರ ಬದಲಿಗೆ ಡಿಸೆಂಬರ್​ 6ರಂದು ಸಿನಿಮಾ ಬಿಡುಗಡೆ ಮಾಡಲು ‘ಪುಷ್ಪ 2’ ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಸ್ವತಃ ಅಲ್ಲು ಅರ್ಜುನ್​ (Allu Arjun) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೊಸ ಪೋಸ್ಟರ್​ ಜೊತೆಗೆ ಅಲ್ಲು ಅರ್ಜುನ್​ ಈ ಸುದ್ದಿ ನೀಡಿದ್ದಾರೆ. ಆದಷ್ಟು ಬೇಗ ‘ಪುಷ್ಪ 2’ ಸಿನಿಮಾ ನೋಡಬೇಕು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ.

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಒಂದಷ್ಟು ತಿಂಗಳಿಂದ ಗಾಸಿಪ್​ ಕೇಳಿಬರುತ್ತಲೇ ಇತ್ತು. ಆದರೆ ಚಿತ್ರತಂಡದವರು ಆ ಗಾಸಿಪ್​ ತಳ್ಳಿ ಹಾಕುತ್ತಲೇ ಇದ್ದರು. ‘ರಿಲೀಸ್​ ದಿನಾಂಕ ಬದಲಾಗಲ್ಲ’ ಎಂದು ಭಾರಿ ಆತ್ಮವಿಶ್ವಾಸದಿಂದ ಹೇಳುತ್ತಲೇ ಇದ್ದರು. ಆದರೆ ಕಡೆಗೂ ಗಾಸಿಪ್​ ನಿಜವಾಗಿದೆ. ‘ಪುಷ್ಪ 2’ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದೆ.

ಕಾರಣಾಂತರಗಳಿಂದ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ತಡವಾಯಿತು. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ನಟಿಸುತ್ತಿದ್ದ ಜಗದೀಶ್​ ಜೈಲು ಸೇರಿದ್ದರಿಂದ ಚಿತ್ರೀಕರಣಕ್ಕೆ ತೊಂದರೆ ಆಗಿತ್ತು. ಅಲ್ಲದೇ ಇದು ದೊಡ್ಡ ಬಜೆಟ್​ನ ಸಿನಿಮಾ ಆದ್ದರಿಂದ ಬೃಹತ್​ ಸೆಟ್​ಗಳ ನಿರ್ಮಾಣ ಮಾಡಲಾಗಿದೆ. ಅದಕ್ಕೂ ಸಾಕಷ್ಟು ಸಮಯ ಹಿಡಿದಿದೆ. ಇನ್ನೂ ಹಲವು ದೃಶ್ಯಗಳ ಚಿತ್ರೀಕರಣ ಬಾಕಿ ಇದೆ. ಹಾಗಾಗಿ ಆಗಸ್ಟ್ 15ರಂದು ಬಿಡುಗಡೆ ಮಾಡುವುದು ಅಸಾಧ್ಯ ಎಂಬುದು ಚಿತ್ರತಂಡದ ಗಮನಕ್ಕೆ ಬಂದಿದ್ದು, ಡಿಸೆಂಬರ್​ 6ಕ್ಕೆ ರಿಲೀಸ್​ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​

ಆಗಸ್ಟ್​ 15ಕ್ಕೆ ‘ಪುಷ್ಪ 2’ ರಿಲೀಸ್​ ಮಾಡುವ ಉದ್ದೇಶ ಇದ್ದಿದ್ದರಿಂದ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭಿಸಲಾಗಿತ್ತು. ಟೀಸರ್​ ಬಿಡುಗಡೆ ಮಾಡಿ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳಲಾಗಿತ್ತು. ಬಳಿಕ ಬಿಡುಗಡೆ ಆದ ಹಾಡಿಗೆ ಜನಮೆಚ್ಚಿಗೆ ಸಿಕ್ಕಿತ್ತು. ದೊಡ್ಡ ಪರದೆಯಲ್ಲಿ ಸಿನಿಮಾ ನೋಡಲು ಕಾತರ ಹೆಚ್ಚಾಯಿತು. ಆದರೆ ಈಗ ಸಿನಿಮಾದ ಕೆಲಸಗಳು ಪೂರ್ಣವಾಗಿಲ್ಲ ಎಂಬ ಕಾರಣಕ್ಕೆ ರಿಲೀಸ್​ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಸುಕುಮಾರ್​ ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ