AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬದಲಾಯಿತು ‘ಪುಷ್ಪ 2’ ರಿಲೀಸ್ ದಿನಾಂಕ; ಈ ಬಾರಿ ಗುಡ್ ನ್ಯೂಸ್

‘ಪುಷ್ಪ 2’ ಸಿನಿಮಾ ರಿಲೀಸ್​ಗೆ ಕೆಲವು ವಾರಗಳು ಬಾಕಿ ಇವೆ.ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಹೀರೋ ಆದರೆ, ರಶ್ಮಿಕಾ ಮಂದಣ್ಣ ಅವರು ಈ ಚಿತ್ರದ ನಾಯಕಿ ಆಗಿದ್ದಾರೆ. ‘ಪುಷ್ಪ 2’ ಚಿತ್ರದ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಈ ಚಿತ್ರದ ರಿಲೀಸ್ ದಿನಾಂಕ ಬದಲಾಗಿದೆ.

ಮತ್ತೆ ಬದಲಾಯಿತು ‘ಪುಷ್ಪ 2’ ರಿಲೀಸ್ ದಿನಾಂಕ; ಈ ಬಾರಿ ಗುಡ್ ನ್ಯೂಸ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Oct 24, 2024 | 3:58 PM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾದ ರಿಲೀಸ್ ದಿನಾಂಕ ಸಾಕಷ್ಟು ಬಾರಿ ಬದಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷ ಆಗಸ್ಟ್ 15ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ಮುಗಿಯದ ಕಾರಣ ಸಿನಿಮಾ ರಿಲೀಸ್ ದಿನಾಂಕ ಡಿಸೆಂಬರ್ 6ಕ್ಕೆ ಮುಂದೂಡಲ್ಪಟ್ಟಿತು. ಈಗ ಚಿತ್ರದ ರಿಲೀಸ್ ದಿನಾಂಕ ಮತ್ತೆ ಬದಲಾಗಿದೆ. ಈ ಬಗ್ಗೆ ಅಲ್ಲು ಅರ್ಜುನ್ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಹಾಗಂತ ಫ್ಯಾನ್ಸ್ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ.

‘ಪುಷ್ಪ 2’ ಚಿತ್ರ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂದು ತಂಡ ಘೋಷಣೆ ಮಾಡಿತ್ತು. ಇದಕ್ಕಾಗಿ ಫ್ಯಾನ್ಸ್ ಕಾದಿದ್ದರು. ಇತ್ತೀಚಿಗಿನವರೆಗೂ ಡಿಸೆಂಬರ್ 6ರಂದು ಎಂದೇ ಇತ್ತು. ಆದರೆ, ಈಗ ತಂಡ ಹೊಸ ರಿಲೀಸ್ ದಿನಾಂಕ ಘೋಷಣೆ ಮಾಡಿದೆ. ಇದರ ಪ್ರಕಾರ ಒಂದು ದಿನ ಮೊದಲು ಅಂದರೆ ಡಿಸೆಂಬರ್ 5ರಂದು ಚಿತ್ರ ತೆರೆಗೆ ಬರಲಿದೆ.

ಸಿನಿಮಾ ರಿಲೀಸ್​ ದಿನಾಂಕವನ್ನು ಒಂದು ದಿನ ಹಿಂದಕ್ಕೆ ಹಾಕಲು ಒಂದು ಕಾರಣವೂ ಇದೆ. ಡಿಸೆಂಬರ್ 6 ಶುಕ್ರವಾರ. ಅದರ ಬದಲು ಒಂದು ದಿನ ಮೊದಲು ಅಂದರೆ ಗುರುವಾರ ಚಿತ್ರ ರಿಲೀಸ್ ಮಾಡಿದರೆ ಲಾಭ ಜಾಸ್ತಿ. ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳು ಮೊದಲ ದಿನ ಭರ್ಜರಿ ಕಮಾಯಿ ಮಾಡುತ್ತವೆ. ಹೀಗಾಗಿ, ‘ಪುಷ್ಪ 2’ ಚಿತ್ರಕ್ಕೆ ಗುರುವಾರ (ಡಿಸೆಂಬರ್ 5) ದೊಡ್ಡ ಗಳಿಕೆ ಆಗಲಿದೆ. ಶುಕ್ರವಾರದ ಸೆಂಟಿಮೆಂಟ್​ಮೇಲೆ ಒಂದಷ್ಟು ಜನರು ಸಿನಿಮಾ ನೋಡುತ್ತಾರೆ. ಶನಿವಾರ ಹಾಗೂ ಭಾನುವಾರ ವೀಕೆಂಡ್ ಆದ್ದರಿಂದ ಜನರು ಸಹಜವಾಗಿಯೇ ಸಿನಿಮಾ ವೀಕ್ಷಣೆ ಮಾಡುತ್ತಾರೆ. ನಾಲ್ಕೇ ದಿನಕ್ಕೆ ಚಿತ್ರ ಭರ್ಜರಿ ಗಳಿಕೆ ಮಾಡಲಿದೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟಾಗಲಿದೆ? ‘ಕೆಜಿಎಫ್ 2’ ದಾಖಲೆ ಕಥೆ ಏನು?

‘ಪುಷ್ಪ 2’ ಚಿತ್ರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಸುದ್ದಿ ಬಿತ್ತರ ಆಗಿತ್ತು. ಪದೇ ಪದೇ ಹೊಸ ಪೋಸ್ಟರ್​ಗಳನ್ನು ರಿಲೀಸ್ ಮಾಡುವ ಮೂಲಕ ತಂಡ ಸ್ಪಷ್ಟನೆ ನೀಡುತ್ತಲೇ ಬರುತ್ತಿತ್ತು. ಈಗ ಸಿನಿಮಾದ ರಿಲೀಸ್ ದಿನಾಂಕ ಒಂದು ದಿನ ಹಿಂದಕ್ಕೆ ಬಂದಿದ್ದು, ಸಿನಿಮಾ ಡಿಸೆಂಬರ್​ನಲ್ಲಿ ತೆರೆಗೆ ಬರೋದು ಪಕ್ಕಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್