AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್

Pushpa 2 The Rule Teaser: ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ.

Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್
ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on:Apr 08, 2024 | 11:29 AM

ಇಂದು (ಏಪ್ರಿಲ್ 8) ಅಲ್ಲು ಅರ್ಜುನ್ (Allu Arjun) ಬರ್ತ್​ಡೇ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಸಿನಿಮಾ ‘ಪುಷ್ಪ 2’ ಚಿತ್ರದ ಟೀಸರ್​ನ ತಂಡ ಫ್ಯಾನ್ಸ್​ಗೆ ಗಿಫ್ಟ್ ಆಗಿ ಕೊಟ್ಟಿದೆ. ಪೋಸ್ಟರ್​ಗಳ ಮೂಲಕ ಟೀಸರ್ ಯಾವ ರೀತಿಯಲ್ಲಿ ಇರಬಹುದು ಎಂಬ ಬಗ್ಗೆ ತಂಡ ಸೂಚನೆ ಕೊಟ್ಟಿತ್ತು. ಅದೇ ರೀತಿಯಲ್ಲಿ ಈ ಟೀಸರ್ ಮೂಡಿ ಬಂದಿದೆ. ಅಲ್ಲು ಅರ್ಜುನ್ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ.

ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ. ಇದಕ್ಕಾಗಿ ಹಾಕಲಾದ ಬೃಹತ್ ಸೆಟ್​ಗಳು ಗಮನ ಸೆಳೆದಿವೆ.

ಒಂದು ನಿಮಿಷದ ಎಂಟು ಸೆಕೆಂಡ್ ಈ ಟೀಸರ್ ಇದೆ. ಇದರಲ್ಲಿ ಹೆಚ್ಚು ಭಾಗ ಅಲ್ಲು ಅರ್ಜುನ್ ಅವರ ಎಂಟ್ರಿಯನ್ನೇ ತೋರಿಸಲಾಗಿದೆ. ನಂತರ ಒಂದೆರಡು ಫೈಟಿಂಗ್ ದೃಶ್ಯ ಇದೆ. ಅಲ್ಲಿಗೆ ಇಡೀ ಟೀಸರ್ ಪೂರ್ಣಗೊಂಡಿದೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇನ್ನೂ ಏನಾದರೂ ಹೆಚ್ಚಿನದ್ದನ್ನು ತೋರಿಸಬಹುದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪವರ್​ಫುಲ್ ಪೋಸ್ಟರ್ ರಿಲೀಸ್ ಮಾಡಿದ ‘ಪುಷ್ಪ 2’ ತಂಡ; ಟೀಸರ್​ಗೆ ಕೌಂಟ್​ಡೌನ್

‘ಪುಷ್ಪ 2’ ಚಿತ್ರವನ್ನು ಸುಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಪಾರ್ಟ್​ಗೆ ಹೋಲಿಕೆ ಮಾಡಿದರೆ ಎರಡನೇ ಪಾರ್ಟ್​ನಲ್ಲಿ ಅವರು ಮತ್ತಷ್ಟು ಪಳಗಿದಂತೆ ಕಾಣುತ್ತಿದೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ‘ಪುಷ್ಪ 2’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ದುಪ್ಪಟ್ಟಾಗಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Mon, 8 April 24

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್