AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್

Pushpa 2 The Rule Teaser: ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ.

Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Apr 08, 2024 | 11:29 AM

Share

ಇಂದು (ಏಪ್ರಿಲ್ 8) ಅಲ್ಲು ಅರ್ಜುನ್ (Allu Arjun) ಬರ್ತ್​ಡೇ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಸಿನಿಮಾ ‘ಪುಷ್ಪ 2’ ಚಿತ್ರದ ಟೀಸರ್​ನ ತಂಡ ಫ್ಯಾನ್ಸ್​ಗೆ ಗಿಫ್ಟ್ ಆಗಿ ಕೊಟ್ಟಿದೆ. ಪೋಸ್ಟರ್​ಗಳ ಮೂಲಕ ಟೀಸರ್ ಯಾವ ರೀತಿಯಲ್ಲಿ ಇರಬಹುದು ಎಂಬ ಬಗ್ಗೆ ತಂಡ ಸೂಚನೆ ಕೊಟ್ಟಿತ್ತು. ಅದೇ ರೀತಿಯಲ್ಲಿ ಈ ಟೀಸರ್ ಮೂಡಿ ಬಂದಿದೆ. ಅಲ್ಲು ಅರ್ಜುನ್ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ.

ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ. ಇದಕ್ಕಾಗಿ ಹಾಕಲಾದ ಬೃಹತ್ ಸೆಟ್​ಗಳು ಗಮನ ಸೆಳೆದಿವೆ.

ಒಂದು ನಿಮಿಷದ ಎಂಟು ಸೆಕೆಂಡ್ ಈ ಟೀಸರ್ ಇದೆ. ಇದರಲ್ಲಿ ಹೆಚ್ಚು ಭಾಗ ಅಲ್ಲು ಅರ್ಜುನ್ ಅವರ ಎಂಟ್ರಿಯನ್ನೇ ತೋರಿಸಲಾಗಿದೆ. ನಂತರ ಒಂದೆರಡು ಫೈಟಿಂಗ್ ದೃಶ್ಯ ಇದೆ. ಅಲ್ಲಿಗೆ ಇಡೀ ಟೀಸರ್ ಪೂರ್ಣಗೊಂಡಿದೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇನ್ನೂ ಏನಾದರೂ ಹೆಚ್ಚಿನದ್ದನ್ನು ತೋರಿಸಬಹುದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪವರ್​ಫುಲ್ ಪೋಸ್ಟರ್ ರಿಲೀಸ್ ಮಾಡಿದ ‘ಪುಷ್ಪ 2’ ತಂಡ; ಟೀಸರ್​ಗೆ ಕೌಂಟ್​ಡೌನ್

‘ಪುಷ್ಪ 2’ ಚಿತ್ರವನ್ನು ಸುಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಪಾರ್ಟ್​ಗೆ ಹೋಲಿಕೆ ಮಾಡಿದರೆ ಎರಡನೇ ಪಾರ್ಟ್​ನಲ್ಲಿ ಅವರು ಮತ್ತಷ್ಟು ಪಳಗಿದಂತೆ ಕಾಣುತ್ತಿದೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ‘ಪುಷ್ಪ 2’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ದುಪ್ಪಟ್ಟಾಗಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Mon, 8 April 24

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು