AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳೆಬ್ಬಿಸುತ್ತ ಬಿಡುಗಡೆ ಆಯ್ತು ‘ಪುಷ್ಪ 2’ ಟ್ರೇಲರ್​; ನಿರೀಕ್ಷೆ ಇನ್ನಷ್ಟು ಜೋರು

ಪಟ್ನಾದಲ್ಲಿ ಅದ್ದೂರಿಯಾಗಿ ‘ಪುಷ್ಪ 2’ ಸಿನಿಮಾದ ಟ್ರೇಲರ್​ ರಿಲೀಸ್ ಮಾಡಲಾಗಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಟ್ರೇಲರ್​ ಲಾಂಚ್ ಆಗಿದೆ. ಅಲ್ಲು ಅರ್ಜುನ್​ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ. ಡಿಸೆಂಬರ್​ 5ರಂದು ಬಿಡುಗಡೆ ಆಗಲಿರುವ ‘ಪುಷ್ಪ 2’ ಸಿನಿಮಾದ ಬಗ್ಗೆ ಭಾರಿ ಹೈಪ್ ಸೃಷ್ಟಿ ಆಗಿದೆ.

ಧೂಳೆಬ್ಬಿಸುತ್ತ ಬಿಡುಗಡೆ ಆಯ್ತು ‘ಪುಷ್ಪ 2’ ಟ್ರೇಲರ್​; ನಿರೀಕ್ಷೆ ಇನ್ನಷ್ಟು ಜೋರು
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Nov 17, 2024 | 6:05 PM

Share

ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ ಮಾಡಲಾಗುತ್ತಿದೆ. ಹಿಂದಿಗೂ ಡಬ್ ಆಗಿ ತೆರೆಕಾಣಲಿದ್ದು, ಉತ್ತರ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಬಿಹಾರದ ಪಟ್ನಾದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳ ಎದುರು ‘ಪುಷ್ಪ 2’ ಚಿತ್ರತಂಡದವರು ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲು ಅರ್ಜುನ್ ಜೊತೆ ಚಿತ್ರತಂಡ ಹಲವರು ಭಾಗಿ ಆಗಿದ್ದಾರೆ.

ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾವನ್ನು ಬಹಳ ಸಮಯ ತೆಗೆದುಕೊಂಡು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಈ ಸಿನಿಮಾಗಾಗಿ ಸಾಕಷ್ಟು ಸಮಯ ಮೀಡಲಿಟ್ಟಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ನಿರ್ಮಾಣ ಸಂಸ್ಥೆ ಈ ಸಿನಿಮಾದ ಮೇಲೆ ನೂರಾರು ಕೋಟಿ ರೂಪಾಯಿ ಬಂಡವಾಳ ಹಾಕಿದೆ. ಬಿಡುಗಡೆಗೂ ಮುನ್ನವೇ ಭಾರಿ ಬಿಸ್ನೆಸ್ ಆಗಿದೆ. ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ಟ್ರೇಲರ್​ ರಿಲೀಸ್ ಕಾರ್ಯಕ್ರಮವೇ ಸಾಕ್ಷಿ.

‘ಪುಷ್ಪ 2’ ಟ್ರೇಲರ್:

ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ, ಆಂಧ್ರದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಪಟ್ನಾದಲ್ಲಿ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲು ಬಂದ ಅಲ್ಲು ಅರ್ಜುನ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಟ್ರೇಲರ್ ನೋಡಿದ ಬಳಿಕ ಪ್ರೇಕ್ಷಕರ ನಿರೀಕ್ಷೆ ಡಬಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಟ್ರೇಲರ್​ ಟ್ರೆಂಡ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾ ಡಬ್ಬಿಂಗ್; ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್, ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದವರು ನಟಿಸಿದ್ದ ‘ಪುಷ್ಪ’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ಮೂಡಿಬರುತ್ತಿರುವ ‘ಪುಷ್ಪ 2’ ಸಿನಿಮಾ ಸಾರ್ವಕಾಲಿಕ ಹಿಟ್ ಆಗಲಿದೆ ಎಂಬುದು ಅಭಿಮಾನಿಗಳ ನಂಬಿಕೆ. ಮೊದಲ ದಿನದ ಕೆಲೆಕ್ಷನ್​ನಲ್ಲಿ ಈ ಸಿನಿಮಾ ಬೇರೆ ಎಲ್ಲ ದಾಖಲೆಗಳನ್ನು ಉಡೀಸ್ ಮಾಡಲಿದೆ ಎಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್