AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ರಿಲೀಸ್​ ಡೇಟ್​ ಬಗ್ಗೆ ಬಿಗ್​ ಅಪ್​ಡೇಟ್​; ಮತ್ತೆ ಆ ಯಶಸ್ವಿ ದಿನಾಂಕದ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​?

ಈಗಾಗಲೇ ವರ್ಷದ ಮೊದಲ ತಿಂಗಳು ಕಳೆದಿದೆ. ‘ಪುಷ್ಪ 2’ ಚಿತ್ರದ ಸಾಕಷ್ಟು ಕೆಲಸಗಳು ಬಾಕಿ ಇವೆ. ಅಷ್ಟರೊಳಗೆ ರಿಲೀಸ್​ ಡೇಟ್​ ಕುರಿತು ಸುದ್ದಿ ಹರಿದಾಡುತ್ತಿದೆ.

‘ಪುಷ್ಪ 2’ ರಿಲೀಸ್​ ಡೇಟ್​ ಬಗ್ಗೆ ಬಿಗ್​ ಅಪ್​ಡೇಟ್​; ಮತ್ತೆ ಆ ಯಶಸ್ವಿ ದಿನಾಂಕದ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​?
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Feb 02, 2022 | 9:43 AM

Share

‘ಪುಷ್ಪ’ ಸಿನಿಮಾ ಅಲ್ಲು ಅರ್ಜುನ್​ (Allu Arjun) ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ನೀಡಿದೆ. ಅವರು ಊಹಿಸದ ರೀತಿಯಲ್ಲಿ ಈ ಸಿನಿಮಾ ಕಲೆಕ್ಷನ್​ ಮಾಡಿದೆ. ಅದರಲ್ಲೂ ಬಾಲಿವುಡ್​ ಒಂದರಲ್ಲೇ ಈ ಚಿತ್ರ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಿಂದ ಚಿತ್ರತಂಡಕ್ಕೆ ಹೊಸ ಹುರುಪು ಸಿಕ್ಕಿದೆ. ‘ಪುಷ್ಪ 2’ (Pushpa 2) ಚಿತ್ರವನ್ನೂ ಹೆಚ್ಚು ಕಾಳಜಿ ವಹಿಸಿ ಶೂಟ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈಗ ಈ ಚಿತ್ರದ ರಿಲೀಸ್​ ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬರುತ್ತಿದೆ. ‘ಪುಷ್ಪ ಪಾರ್ಟ್​ 1’ ಚಿತ್ರ 2021ರ ಡಿ.17ಕ್ಕೆ ಬಿಡುಗಡೆ ಆಗಿ ಯಶಸ್ವಿ ಆಯಿತು. ಈಗ ಮತ್ತೆ ಡಿ.17ರ ಮೇಲೆ ಚಿತ್ರತಂಡ ಕಣ್ಣಿಟ್ಟಿದೆ. ಅಂದರೆ, 2022ರ ಡಿಸೆಂಬರ್​ 17ರಂದು ಎರಡನೇ ಪಾರ್ಟ್​ ರಿಲೀಸ್​ ಮಾಡಲು ಪ್ಲ್ಯಾನ್​ ರೂಪಿಸಿದೆ ಎಂಬ ಗುಸುಗುಸು ಕೇಳಿಬಂದಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ. ‘ಪುಷ್ಪ’ (Pushpa Movie) ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿತ್ತು. ಆದರೆ, ಸಾಕಷ್ಟು ಅಡೆತಡೆಗಳನ್ನು ಚಿತ್ರ ಎದುರಿಸಿತ್ತು. ಇದರಲ್ಲಿ ಮುಖ್ಯವಾಗಿ ಚಿತ್ರತಂಡಕ್ಕೆ ಕೊವಿಡ್​ನಿಂದ ತೊಂದರೆ ಆಗಿತ್ತು. ಇದಲ್ಲದೆ, ಕೆಲವರಿಗೆ ಡೆಂಘೆ ಕಾಣಿಸಿಕೊಂಡಿದ್ದರಿಂದ ಸಿನಿಮಾ ಶೂಟಿಂಗ್​ ವಿಳಂಬವಾಗಿತ್ತು. ಕಾಡಿನಲ್ಲಿ ಶೂಟ್​ ಮಾಡುವುದು ಕೂಡ ಒಂದು ಚಾಲೆಂಜ್​ ಆಗಿತ್ತು. ಹೀಗಾಗಿ, ಚಿತ್ರತಂಡ ‘ಪುಷ್ಪ’ಕ್ಕಾಗಿ ಸಾಕಷ್ಟು ಶ್ರಮವಹಿಸಿದೆ. ಇದರ ಪರಿಣಾಮವಾಗಿಯೇ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದೆ. ಈಗ ಪಾರ್ಟ್​ 2 ಮೇಲೆ ಎಲ್ಲರ ಕಣ್ಣಿದೆ.

ಈಗಾಗಲೇ ಜನವರಿ ತಿಂಗಳು ಕಳೆದಿದೆ. ಸಿನಿಮಾವನ್ನು 2022ರ ಡಿಸೆಂಬರ್​ನಲ್ಲೇ ತೆರೆಗೆ ತರಲು ಪ್ಲ್ಯಾನ್​ ರೂಪಿಸಿದ್ದು ಹೌದಾದಲ್ಲಿ ಸಿನಿಮಾ ತಂಡಕ್ಕೆ ಉಳಿದಿದ್ದು ಕೇವಲ 10 ತಿಂಗಳು ಮಾತ್ರ. ಆ ಹತ್ತು ತಿಂಗಳಲ್ಲಿ ಶೂಟಿಂಗ್​ ಪೂರ್ಣಗೊಳ್ಳಬೇಕು. ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳು ಮುಗಿಯಬೇಕು. ಇದರ ಜತೆಗೆ ಪ್ರಚಾರದ ಕಾರ್ಯ ಕೂಡ ನಡೆಯಬೇಕು. ಇದು ಚಿತ್ರತಂಡದ ಪಾಲಿಗೆ ನಿಜಕ್ಕೂ ಚಾಲೆಂಜಿಂಗ್​. ಇದನ್ನು ಚಿತ್ರತಂಡ ಹೇಗೆ ಸ್ವೀಕರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ಪುಷ್ಪ 2’ ಸಿನಿಮಾ ಜತೆಜತೆಗೆ ಮತ್ತೊಂದು ಸಿನಿಮಾ ಒಪ್ಪಿಕೊಂಡು, ನಟಿಸಲು ಅಲ್ಲು ಅರ್ಜುನ್​ ಪ್ಲ್ಯಾನ್​ ರೂಪಿಸಿದ್ದರು. ಆದರೆ, ಡಿಸೆಂಬರ್​ 17ಕ್ಕೆ ಪಾರ್ಟ್​ 2 ತರಬೇಕು ಎನ್ನುವ ಇಚ್ಛೆಯನ್ನು ಅಲ್ಲು ಅರ್ಜುನ್​ ಮುಂದೆ ಇಟ್ಟಿದ್ದಾರೆ ನಿರ್ದೇಶಕ ಸುಕುಮಾರ್​. ಈ ಕಾರಣಕ್ಕೆ ಇದೊಂದೇ ಪ್ರಾಜೆಕ್ಟ್ ​ಮೇಲೆ ಗಮನ ಹರಿಸಲು ಅಲ್ಲು ಅರ್ಜುನ್​ ನಿರ್ಧರಿಸಿದ್ದಾರೆ.

ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಸಾಕಷ್ಟು ಬ್ಯುಸಿ ಇದ್ದಾರೆ. ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೂಡ ಈ ಸಿನಿಮಾದ ಶೂಟಿಂಗ್​ ಬೇಗ ಮುಗಿಸಲು ಕೆಲ ತ್ಯಾಗಗಳನ್ನು ಮಾಡಬೇಕಾಗುತ್ತದೆ ಎನ್ನುವ ಮಾತಿದೆ. ಆ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ:

ಹಿಂದಿ ಡಬ್ಬಿಂಗ್​​ ಮೂಲಕ 100 ಕೋಟಿ ರೂ. ಬಾಚಿದ ‘ಪುಷ್ಪ’ ಚಿತ್ರ; ಹಾಗಾದ್ರೆ ‘ಕೆಜಿಎಫ್​’ ಗಳಿಸಿದ್ದೆಷ್ಟು?

ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ