AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ಪುತ್ರಿ ಜತೆ ಬಂದು ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್​ ಮಾಡಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ

Allu Arjun Allu Arha Viral Video: ಅಲ್ಲು ಅರ್ಜುನ್​ ಮಗಳ ಈ ವಿಡಿಯೋ ವೈರಲ್​ ಆಗುತ್ತಿದೆ. ಕ್ಯೂಟ್​ ಆಗಿ ಕಾಣಿಸಿಕೊಂಡ ಅಲ್ಲು ಅರ್ಹಾಗೆ ಎಲ್ಲರೂ ಹಬ್ಬದ ಶುಭಾಶಯ ಕೋರುತ್ತಿದ್ದಾರೆ.

Allu Arjun: ಪುತ್ರಿ ಜತೆ ಬಂದು ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್​ ಮಾಡಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
ಅಲ್ಲು ಅರ್ಜುನ್, ಅಲ್ಲು ಅರ್ಹಾ
TV9 Web
| Edited By: |

Updated on:Sep 06, 2022 | 12:03 PM

Share

ಗಣೇಶ ಚತುರ್ಥಿ ಹಬ್ಬವನ್ನು (Ganesh Chaturthi 2022) ಸಡಗರದಿಂದ ಆಚರಿಸಲಾಗಿದೆ. ಪ್ರತಿ ಗಲ್ಲಿಯಲ್ಲೂ ಗಣಪತಿ ಮೂರ್ತಿ ಕೂರಿಸಿ ಹಬ್ಬ ಮಾಡಲಾಗಿದೆ. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಏನೋ ಒಂಥರಾ ಜೋಶ್​ ಇರುತ್ತದೆ. ಎಲ್ಲರೂ ಜೊತೆಯಾಗಿ ಸೇರಿ ಇದರಲ್ಲಿ ಭಾಗಿ ಆಗುತ್ತಾರೆ. ಜನಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ವರ್ಷದ ಹಬ್ಬವನ್ನು ಸಂಭ್ರಮಿಸಿದ್ದಾರೆ. ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​ (Allu Arjun) ಕೂಡ ಈ ಸಡಗರದಲ್ಲಿ ಭಾಗಿ ಆಗಿದ್ದಾರೆ. ಗಣೇಶ ವಿಸರ್ಜನೆ ವೇಳೆ ಅವರು ಮಗಳು ಅಲ್ಲು ಅರ್ಹಾ (Allu Arha) ಜೊತೆ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಅಭಿಮಾನಿಗಳು ಇದನ್ನು ನೋಡಿ ಖುಷಿಪಟ್ಟಿದ್ದಾರೆ. ನಾನಾ ಬಗೆಯ ಕಮೆಂಟ್​ಗಳ ಮೂಲಕ ಜನರ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಪುತ್ರಿ ಅರ್ಹಾಳ ಫೋಟೋ ಮತ್ತು ವಿಡಿಯೋಗಳನ್ನು ಅಲ್ಲು ಅರ್ಜುನ್ ಅವರು ಆಗಾಗ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಗಣೇಶ ವಿಸರ್ಜನೆಯ ವಿಡಿಯೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಸೇರಿ ಅವರು ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ. ತೆಂಗಿನ ಕಾಯಿ ಒಡೆದು, ಗಣಪತಿ ಬಪ್ಪ ಮೋರ್ಯ ಎಂದು ಜೈಕಾರ ಕೂಗಿ ಇಡೀ ವಾತಾವರಣಕ್ಕೆ ಅವರು ಹೊಸ ರಂಗು ತುಂಬಿದ್ದಾರೆ. ಮಗಳನ್ನು ಎತ್ತಿಕೊಂಡು ಡ್ಯಾನ್ಸ್​ ಮಾಡಿದ್ದಾರೆ. ಡೋಲು, ತಮಟೆ ಸದ್ದಿಗೆ ಹೆಜ್ಜೆ ಹಾಕಿದ್ದಾರೆ. ಡ್ಯಾನ್ಸ್​ ಮಾಡುವಂತೆ ಮಗಳಿಗೂ ಪ್ರೋತ್ಸಾಹ ನೀಡಿದ್ದಾರೆ.

ಇದನ್ನೂ ಓದಿ
Image
Ganesh Chaturthi: ‘ಕನ್ನಡದ ಕೋಟ್ಯಧಿಪತಿ’ ಗೆಟಪ್​ನಲ್ಲಿ ಅಪ್ಪು ಪ್ರತಿಮೆ; ಹಾಟ್​ ಸೀಟ್​ನಲ್ಲಿ ಕುಳಿತ ಗಣಪ
Image
Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ
Image
Puneeth Rajkumar: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
Image
Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

ಹಬ್ಬದಲ್ಲಿ ಭಾಗಿ ಆಗಬೇಕು ಎಂಬುದನ್ನು ಪುತ್ರಿಗೆ ಕಲಿಸಿಕೊಟ್ಟ ಅವರ ಗುಣವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಅರ್ಹಾ ಸೆಲೆಬ್ರಿಟಿ ಕಿಡ್​ ಆಗಿದ್ದರೂ ಕೂಡ ಆಕೆ ಜನರ ಜೊತೆ ಬೆರೆಯುವಂತೆ ಅಲ್ಲು ಅರ್ಜುನ್​ ವಾತಾವರಣ ಕಲ್ಪಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಈ ವಿಡಿಯೋ ವೈರಲ್​ ಆಗುತ್ತಿದೆ. ಕ್ಯೂಟ್​ ಆಗಿ ಕಾಣಿಸಿಕೊಂಡ ಅಲ್ಲು ಅರ್ಹಾಗೆ ಎಲ್ಲರೂ ಹಬ್ಬದ ಶುಭಾಶಯ ಕೋರುತ್ತಿದ್ದಾರೆ.

ಮಗಳನ್ನು ಬಣ್ಣದ ಲೋಕಕ್ಕೆ ಪರಿಚಯಿಸಲು ಅಲ್ಲು ಅರ್ಜುನ್​ ಅವರಿಗೆ ಹೆಚ್ಚು ಆಸಕ್ತಿ ಇದೆ. ಈಗಾಗಲೇ ಆಕೆ ಕ್ಯಾಮೆರಾ ಎದುರಿಸಿದ್ದಾಳೆ. ಸಮಂತಾ ರುತ್​ ಪ್ರಭು ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ತೆಲುಗಿನ ‘ಶಾಕುಂತಲಂ’ ಸಿನಿಮಾದಲ್ಲಿ ಅರ್ಹಾ ಕೂಡ ಒಂದು ಪಾತ್ರ ಮಾಡಿದ್ದಾಳೆ. ಆ ಚಿತ್ರದ ಶೂಟಿಂಗ್​ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ಚಿತ್ರೀಕರಣದ ಸೆಟ್​ಗೆ ಭೇಟಿ ನೀಡಿದ್ದರು. ಮಗಳು ನಟಿಸುವುದನ್ನು ನೋಡಿ ಅವರು ಖುಷಿಪಟ್ಟಿದ್ದರು. ಅಲ್ಲದೇ ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:03 pm, Tue, 6 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ