AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?  

Allu Arjun remuneration: ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?   
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Nov 27, 2023 | 9:52 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮೊದಲ ಪಾರ್ಟ್ ಯಶಸ್ಸು ಕಂಡಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರ್ದೇಶಕರು ಹೆಚ್ಚು ಗಮನ ನೀಡಿದ್ದಾರೆ. ಅಲ್ಲು ಅರ್ಜುನ್ ಅವರು ಲುಕ್ ಕೂಡ ಬದಲಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ಅಲ್ಲು ಅರ್ಜುನ್ ಅವರು ಈ ಚಿತ್ರಕ್ಕಾಗಿ ರೆಕಾರ್ಡ್ ಬ್ರೇಕಿಂಗ್ ಸಂಭಾವನೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

‘ಪುಷ್ಪ’ ಸಿನಿಮಾ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರ ಸಂಭಾವನೆ ನೂರು ಕೋಟಿ ರೂಪಾಯಿ ಇರಲಿಲ್ಲ. ಯಾವಾಗ ‘ಪುಷ್ಪ’ ಸಿನಿಮಾ ಯಶಸ್ಸು ಕಂಡಿತೋ ಅವರ ಲೆವೆಲ್ ಚೇಂಜ್ ಆಗಿದೆ. ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಮೂಲಗಳ ಪ್ರಕಾರ ಅಲ್ಲು ಅರ್ಜುನ್ ಅವರಿಗೆ ಈ ಚಿತ್ರದಿಂದ 330 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ! ಇದು ಅಚ್ಚರಿ ಎನಿಸಿದರೂ ನಿಜ.

ಅಲ್ಲು ಅರ್ಜುನ್ ಅವರು ಈವರೆಗೆ ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ. ಬದಲಿಗೆ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್, ಒಟಿಟಿ, ಸ್ಯಾಟಲೈಟ್ ಹಕ್ಕು, ಆಡಿಯೋ ರೈಟ್ಸ್ ಸೇರಿ ಎಲ್ಲಾ ಬಿಸ್ನೆಸ್​ನಿಂದ್ ಶೇ. 33 ಲಾಭ ಅಲ್ಲು ಅರ್ಜುನ್ ಪಾಲಾಗಲಿದೆ. ಈ ಚಿತ್ರ ಅನಾಯಸವಾಗಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಲಿದೆ. ಆ ಬಗ್ಗೆ ತಂಡದವರಿಗೂ ಕಾನ್ಫಿಡೆನ್ಸ್ ಇದೆ. ಹೀಗಾಗಿ, ಅಲ್ಲು ಅರ್ಜುನ್ ಅವರಿಗೆ ಕನಿಷ್ಠ 330 ಕೋಟಿ ರೂಪಾಯಿ ಸಿಗಲಿದೆ.

ಇದನ್ನೂ ಓದಿ: ಪ್ರಭಾಸ್, ಅಲ್ಲು ಅರ್ಜುನ್ ಬದಲಿಗೆ ಯಶ್ ಅನ್ನು ಆರಿಸಿದ ಬಾಲಿವುಡ್ ನಟಿ

ಅಲ್ಲು ಅರ್ಜುನ್ ಸಂಭಾವನೆ ವಿಚಾರ ಹೊಸ ದಾಖಲೆ ಎಂದು ಕರೆಯಲಾಗುತ್ತಿದೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಇಷ್ಟು ದೊಡ್ಡ ಮಟ್ಟದ ಸಂಭಾವನೆ ಪಡೆದಿಲ್ಲ ಅನ್ನೋದು ಅನೇಕರ ಅಭಿಪ್ರಾಯ. ಸದ್ಯ ರಜನಿಕಾಂತ್ ಅವವರು ಹೊಸ ಸಿನಿಮಾಗೆ 210 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಾರುಖ್ ಹಾಗೂ ಸಲ್ಲು ಸಂಭಾವನೆ 150-200 ಕೋಟಿ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:52 am, Mon, 27 November 23

ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ