AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?  

Allu Arjun remuneration: ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?   
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Nov 27, 2023 | 9:52 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮೊದಲ ಪಾರ್ಟ್ ಯಶಸ್ಸು ಕಂಡಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರ್ದೇಶಕರು ಹೆಚ್ಚು ಗಮನ ನೀಡಿದ್ದಾರೆ. ಅಲ್ಲು ಅರ್ಜುನ್ ಅವರು ಲುಕ್ ಕೂಡ ಬದಲಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ಅಲ್ಲು ಅರ್ಜುನ್ ಅವರು ಈ ಚಿತ್ರಕ್ಕಾಗಿ ರೆಕಾರ್ಡ್ ಬ್ರೇಕಿಂಗ್ ಸಂಭಾವನೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

‘ಪುಷ್ಪ’ ಸಿನಿಮಾ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರ ಸಂಭಾವನೆ ನೂರು ಕೋಟಿ ರೂಪಾಯಿ ಇರಲಿಲ್ಲ. ಯಾವಾಗ ‘ಪುಷ್ಪ’ ಸಿನಿಮಾ ಯಶಸ್ಸು ಕಂಡಿತೋ ಅವರ ಲೆವೆಲ್ ಚೇಂಜ್ ಆಗಿದೆ. ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಮೂಲಗಳ ಪ್ರಕಾರ ಅಲ್ಲು ಅರ್ಜುನ್ ಅವರಿಗೆ ಈ ಚಿತ್ರದಿಂದ 330 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ! ಇದು ಅಚ್ಚರಿ ಎನಿಸಿದರೂ ನಿಜ.

ಅಲ್ಲು ಅರ್ಜುನ್ ಅವರು ಈವರೆಗೆ ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ. ಬದಲಿಗೆ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್, ಒಟಿಟಿ, ಸ್ಯಾಟಲೈಟ್ ಹಕ್ಕು, ಆಡಿಯೋ ರೈಟ್ಸ್ ಸೇರಿ ಎಲ್ಲಾ ಬಿಸ್ನೆಸ್​ನಿಂದ್ ಶೇ. 33 ಲಾಭ ಅಲ್ಲು ಅರ್ಜುನ್ ಪಾಲಾಗಲಿದೆ. ಈ ಚಿತ್ರ ಅನಾಯಸವಾಗಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಲಿದೆ. ಆ ಬಗ್ಗೆ ತಂಡದವರಿಗೂ ಕಾನ್ಫಿಡೆನ್ಸ್ ಇದೆ. ಹೀಗಾಗಿ, ಅಲ್ಲು ಅರ್ಜುನ್ ಅವರಿಗೆ ಕನಿಷ್ಠ 330 ಕೋಟಿ ರೂಪಾಯಿ ಸಿಗಲಿದೆ.

ಇದನ್ನೂ ಓದಿ: ಪ್ರಭಾಸ್, ಅಲ್ಲು ಅರ್ಜುನ್ ಬದಲಿಗೆ ಯಶ್ ಅನ್ನು ಆರಿಸಿದ ಬಾಲಿವುಡ್ ನಟಿ

ಅಲ್ಲು ಅರ್ಜುನ್ ಸಂಭಾವನೆ ವಿಚಾರ ಹೊಸ ದಾಖಲೆ ಎಂದು ಕರೆಯಲಾಗುತ್ತಿದೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಇಷ್ಟು ದೊಡ್ಡ ಮಟ್ಟದ ಸಂಭಾವನೆ ಪಡೆದಿಲ್ಲ ಅನ್ನೋದು ಅನೇಕರ ಅಭಿಪ್ರಾಯ. ಸದ್ಯ ರಜನಿಕಾಂತ್ ಅವವರು ಹೊಸ ಸಿನಿಮಾಗೆ 210 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಾರುಖ್ ಹಾಗೂ ಸಲ್ಲು ಸಂಭಾವನೆ 150-200 ಕೋಟಿ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:52 am, Mon, 27 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು