AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್

Allu Arjun: ‘ಪುಷ್ಪ 2’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ 300 ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಅದರ ಬೆನ್ನಲ್ಲೆ ಅಲ್ಲು ಅರ್ಜುನ್ ಈ ಸಿನಿಮಾಕ್ಕಾಗಿ ದಾಖಲೆ ಮೊತ್ತದ ಸಂಭಾವನೆಯನ್ನೂ ಸಹ ಪಡೆದಿದ್ದಾರೆ.

ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್
ಮಂಜುನಾಥ ಸಿ.
|

Updated on: Nov 08, 2024 | 12:33 PM

Share

ಸ್ಟಾರ್ ನಟರ ಸಿನಿಮಾಗಳಿಗೆ ಈಗ ಸಾವಿರ ಕೋಟಿ ಎನ್ನುವುದು ಸಹ ಸುಲಭವಾಗಿಬಿಟ್ಟಿದೆ. ಕಲೆಕ್ಷನ್ ಹೆಚ್ಚಾದಂತೆ ನಟರ ಸಂಭಾವನೆಗಳೂ ಸಹ ಭಾರಿ ಏರಿಕೆ ಆಗಿವೆ. ಕೆಲ ವರ್ಷಗಳ ಹಿಂದೆ ಸಹ ಸಿನಿಮಾಗಳು ನೂರು ಕೋಟಿ ಕಲೆಕ್ಷನ್ ಮಾಡುವುದೇ ಕಷ್ಟವಾಗಿತ್ತು. ನೂರು ಕೋಟಿ ಕಲೆಕ್ಷನ್ ಮಾಡಿದರೆ ಅದು ಭಾರಿ ದೊಡ್ಡ ಸುದ್ದಿ, ಈಗ ಸಿನಿಮಾದಲ್ಲಿ ನಟಿಸುವ ನಾಯಕರಿಗೆ ನೂರು ಕೋಟಿಗೂ ಹೆಚ್ಚು ಸಂಭಾವನೆ ಕೊಡಲಾಗುತ್ತಿದೆ. ಹೆಚ್ಚು ಸಂಭಾವನೆ ತೆಗೆದುಕೊಳ್ಳುವುದು ಸಹ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ವರೆಗೆ ಪ್ರಭಾಸ್, ಶಾರುಖ್ ಖಾನ್ ಹಾಗೂ ರಜನೀಕಾಂತ್ ಅವರುಗಳು ಅತಿ ಹೆಚ್ಚು ಸಂಭಾವನೆ ಪಡೆವ ನಟರಾಗಿದ್ದರು. ಆದರೆ ಈ ಮೂವರನ್ನೂ ಮೀರಿಸಿದ್ದಾರೆ ನಟ ಅಲ್ಲು ಅರ್ಜುನ್.

‘ಪುಷ್ಪ’ ಸಿನಿಮಾ ಮೂಲಕ ಮೋಡಿ ಮಾಡಿರುವ ಅಲ್ಲು ಅರ್ಜುನ್, ‘ಪುಷ್ಪ’ ಮೂಲಕ ಕೋವಿಡ್ ಬಳಿಕ ದಕ್ಷಿಣದ ಸಿನಿಮಾಗಳಿಗೆ ಉತ್ತರ ಭಾರತದ ಸಿನಿಮಾ ಮಾರುಕಟ್ಟೆಯ ವಿಶಾಲತೆಯನ್ನು ಪರಿಚಯ ಮಾಡಿಸಿದರು. ‘ಬಾಹುಬಲಿ’ ಬಳಿಕ ದಕ್ಷಿಣ ಭಾರತದ ಯಾವುದೇ ಸಿನಿಮಾ ಉತ್ತರ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿರಲಿಲ್ಲ. ಆದರೆ ಕೋವಿಡ್ ಬಳಿಕ ಬಿಡುಗಡೆ ಆದ ‘ಪುಷ್ಪ’ ಸಿನಿಮಾ ಉತ್ತರ ಭಾರತದಲ್ಲಿ ಭಾರಿ ದೊಡ್ಡ ಹಿಟ್ ಆಗಿದ್ದು ಮಾತ್ರವಲ್ಲದೆ, ಆ ನಂತರ ಬಂದ ಸಿನಿಮಾಗಳೆಲ್ಲವೂ ಉತ್ತರ ಭಾರತದ ಮಾರುಕಟ್ಟೆ ಮೇಲೆ ಹೆಚ್ಚು ಗಮನವಹಿಸುವಂತೆ ಮಾಡಿತು.

ಇದೀಗ ‘ಪುಷ್ಪ 2’ ಬಿಡುಗಡೆಗೆ ಸಜ್ಜಾಗಿದ್ದು, ‘ಪುಷ್ಪ’ ಸಿನಿಮಾದ ಅಭೂತಪೂರ್ವ ಗೆಲುವಿನಿಂದಾಗಿ ಈಗಾಗಲೇ ಭಾರಿ ದೊಡ್ಡ ಮಟ್ಟದ ಹೈಪ್ ಈ ಸಿನಿಮಾಕ್ಕೆ ಸೃಷ್ಟಿಯಾಗಿದೆ. ಈ ಸಿನಿಮಾ ಬಿಡುಗಡೆಗೆ ಮುಂಚೆಯೇ 1000 ಕೋಟಿ ವ್ಯವಹಾರ ನಡೆಸಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಸಿನಿಮಾ ಬಿಡುಗಡೆ ಆದ ಮೊದಲ ದಿನ ಸುಮಾರು 270 ರಿಂದ 300 ಕೋಟಿ ಕಲೆಕ್ಷನ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ತಕ್ಕಂತೆ ಅಲ್ಲು ಅರ್ಜುನ್ ಸಹ ಈ ಸಿನಿಮಾಕ್ಕಾಗಿ ಭಾರಿ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಚಿತ್ರದ ಮೊದಲ ದಿನದ ಗಳಿಕೆ 270 ಕೋಟಿ ರೂಪಾಯಿ? ಕರ್ನಾಟಕದಲ್ಲೆಷ್ಟು?

‘ಪುಷ್ಪ 2’ ಸಿನಿಮಾಕ್ಕಾಗಿ ಅಲ್ಲು ಅರ್ಜುನ್ ಬರೋಬ್ಬರಿ 350 ಕೋಟಿ ಸಂಭಾವನೆ ಪಡೆದಿದ್ದಾರೆ. ಇಷ್ಟು ದೊಡ್ಡ ಮೊತ್ತದ ಸಂಭಾವನೆಯನ್ನು ಭಾರತದ ಇನ್ಯಾವುದೇ ನಟ ಈ ವರೆಗೆ ಪಡೆದುಕೊಂಡಿಲ್ಲ. ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅವರುಗಳು ಸಹ 100-150 ಕೋಟಿ ಸಂಭಾವನೆಗಿಂತಲೂ ಹೆಚ್ಚು ಪಡೆದುಕೊಂಡಿಲ್ಲ. ಆದರೆ ಅಲ್ಲು ಅರ್ಜುನ್ ಒಮ್ಮೆಲೆ 350 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ.

ಅಲ್ಲು ಅರ್ಜುನ್ 350 ಕೋಟಿ ಸಂಭಾವನೆ ಪಡೆಯುತ್ತಿದ್ದಾರಾದರೂ ಸಹ ಇದು ಕೇವಲ ಎರಡು ದಿನದ ಕಲೆಕ್ಷನ್ ಮೊತ್ತ ಎನ್ನಲಾಗುತ್ತಿದೆ. ಸಿನಿಮಾದ ದೇಶದಾದ್ಯಂತ ಭಾರಿ ದೊಡ್ಡ ಮಟ್ಟದ ನಿರೀಕ್ಷೆಗಳಿದ್ದು, ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ. ‘ಪುಷ್ಪ 2’ ತಂಡ ಸಹ ಸಿನಿಮಾವನ್ನು ಭಾರಿ ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಈಗಾಗಲೇ ಮಾತುಕತೆ ಮುಗಿಸಿದೆ. ಅನಿಲ್ ತಂಡಾನಿ ಉತ್ತರ ಪ್ರದೇಶದಲ್ಲಿ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ದಕ್ಷಿಣದ ಈ ವರೆಗಿನ ಯಾವುದೇ ಸಿನಿಮಾಕ್ಕೂ ಸಿಗದಷ್ಟು ಸಂಖ್ಯೆಯ ಚಿತ್ರಮಂದಿರಗಳು ಹಾಗೂ ಸ್ಕ್ರೀನ್​ಗಳನ್ನು ‘ಪುಷ್ಪ 2’ ಸಿನಿಮಾಕ್ಕೆ ಮೀಸಲಿಡಲಾಗಿದೆಯಂತೆ. ‘ಪುಷ್ಪ 2’ ಸಿನಿಮಾ ಡಿಸೆಂಬರ್ 05 ರಂದು ತೆರೆಗೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!