Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ಗಾಗಿ ಮತ್ತೆ ದಕ್ಷಿಣಕ್ಕೆ ಬರುತ್ತಿರುವ ಖಾನ್​ಗಳ ಮೆಚ್ಚಿನ ನಿರ್ದೇಶಕ

Allu Arjun: ‘ಪುಷ್ಪ 2’ ಸಿನಿಮಾ ಮೂಲಕ ಭರ್ಜರಿ ಹಿಟ್ ನೀಡಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾವನ್ನು ತ್ರಿವಿಕ್ರಮ್ ಜೊತೆಗೆ ಮಾಡಲಿದ್ದಾರೆ. ಅದರ ಬಳಿಕ ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆ ಕೈಜೋಡಿಸಲಿದ್ದಾರೆ. ಇದರ ನಡುವೆ ಇದೀಗ ಬಾಲಿವುಡ್​ ಸೇರಿರುವ ಹಿಟ್ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಯಾರು ಆ ನಿರ್ದೇಶಕ?

ಅಲ್ಲು ಅರ್ಜುನ್​ಗಾಗಿ ಮತ್ತೆ ದಕ್ಷಿಣಕ್ಕೆ ಬರುತ್ತಿರುವ ಖಾನ್​ಗಳ ಮೆಚ್ಚಿನ ನಿರ್ದೇಶಕ
Allu Arjun
Follow us
ಮಂಜುನಾಥ ಸಿ.
|

Updated on: Feb 11, 2025 | 1:42 PM

‘ಪುಷ್ಪ 2’ ಸಿನಿಮಾ ಮೂಲಕ ಭರ್ಜರಿ ಹಿಟ್ ಸಿನಿಮಾ ನೀಡಿರುವ ಅಲ್ಲು ಅರ್ಜುನ್​, ತಮ್ಮ ಮುಂದಿನ ಸಿನಿಮಾಗಳನ್ನು ಬಲು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಅಲ್ಲು ಅರ್ಜುನ್, ಮುಂದಿನ ಸಿನಿಮಾವನ್ನು ತ್ರಿವಿಕ್ರಮ್ ಜೊತೆ ಮಾಡುವುದಾಗಿ ಘೋಷಣೆ ಆಗಿದೆ. ಇದೀಗ ಮತ್ತೊಬ್ಬ ಹಿಟ್ ನಿರ್ದೇಶಕನ ಜೊತೆಗೆ ಅಲ್ಲು ಅರ್ಜುನ್ ಕೈ ಜೋಡಿಸಲಿದ್ದಾರೆ. ಈಗಾಗಲೇ ಖಾನ್​ಗಳ ಜೊತೆ ಕೆಲಸ ಮಾಡುತ್ತಿರುವ ದಕ್ಷಿಣ ಭಾರತದ ಹಿಟ್ ನಿರ್ದೇಶಕರೊಟ್ಟಿಗೆ ಅಲ್ಲು ಅರ್ಜುನ್ ಕೈ ಜೋಡಿಸುತ್ತಿದ್ದಾರೆ.

ಸತತ ಸೋಲಿನ ಸುಳಿಯಲ್ಲಿದ್ದ ಶಾರುಖ್ ಖಾನ್​ಗೆ ‘ಜವಾನ್’ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟ ತಮಿಳಿನ ನಿರ್ದೇಶಕ ಅಟ್ಲಿ ಇದೀಗ ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡಲಿದ್ದಾರೆ. ಅಟ್ಲಿ, ಸಲ್ಮಾನ್ ಖಾನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡಲಿದ್ದಾರೆ. ಆ ಸಿನಿಮಾದ ಬಳಿಕ ಅಲ್ಲು ಅರ್ಜುನ್​ಗಾಗಿ ಸಿನಿಮಾ ಮಾಡಲಿದ್ದಾರೆ ನಿರ್ದೇಶಕ ಅಟ್ಲಿ. ತಮಿಳು ನಿರ್ದೇಶಕನಾದರೂ ಬಾಲಿವುಡ್​ನಲ್ಲಿ ಒಂದರ ಹಿಂದೊಂದು ಸಿನಿಮಾಗಳನ್ನು ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.

‘ಜವಾನ್’ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ವರುಣ್ ಧವನ್, ಕೀರ್ತಿ ಸುರೇಶ್ ನಟನೆಯ ‘ಬೇಬಿ’ ಹೆಸರಿನ ಸಿನಿಮಾವನ್ನು ಅಟ್ಲಿ ನಿರ್ದೇಶನ ಮಾಡಿದರು. ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾದರೂ ಸಹ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷಿತ ಪ್ರದರ್ಶನ ಕಾಣಲಿಲ್ಲ. ಅದರ ಬಳಿಕ ಅಟ್ಲಿ, ತಾವು ಸಲ್ಮಾನ್ ಖಾನ್​ ಜೊತೆ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಇದೀಗ ಸಲ್ಮಾನ್ ಖಾನ್ ‘ಸಿಖಂಧರ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಆ ಸಿನಿಮಾದ ಬಳಿಕ ಅಟ್ಲಿ ಜೊತೆಗಿನ ಸಿನಿಮಾ ಶುರು ಮಾಡಲಿದ್ದಾರೆ.

ಇದನ್ನೂ ಓದಿ:ಇಂಗ್ಲಿಷ್​ನಲ್ಲೂ ಬಂತು ‘ಪುಷ್ಪ 2’ ಸಿನಿಮಾ; ವಿಶ್ವಾದ್ಯಂತ ಅಲ್ಲು ಅರ್ಜುನ್ ಹವಾ

ಇನ್ನು ಅಲ್ಲು ಅರ್ಜುನ್ ಕೆಲವೇ ದಿನಗಳಲ್ಲಿ ತ್ರಿವಿಕ್ರಮ್ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸಲು ಆರಂಭಿಸಲಿದ್ದಾರೆ. ಆ ಸಿನಿಮಾದ ಬಳಿಕ ಬಾಲಿವುಡ್​ನ ಲೆಜಂಡರಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಎರಡೂ ಸಿನಿಮಾಗಳ ಬಳಿಕವಷ್ಟೆ ಅಲ್ಲು ಅರ್ಜುನ್, ಅಟ್ಲಿ ಕಾಂಬಿನೇಷನ್​ನ ಸಿನಿಮಾ ಸೆಟ್ಟೇರಲಿದೆ. 2019 ರ ‘ಬಿಗಿಲ್’ ಸಿನಿಮಾದ ಬಳಿಕ ಅಟ್ಲಿ ದಕ್ಷಿಣದ ಯಾವುದೇ ಸಿನಿಮಾ ನಿರ್ದೇಶಿಸಿಲ್ಲ. ಅಲ್ಲು ಅರ್ಜುನ್ ಸಿನಿಮಾ ಮೂಲಕ ಅಟ್ಲಿ ಮತ್ತೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಮರಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ