ಕಥೆ ಬರೆಯಲಿದ್ದಾರೆ ಅಲ್ಲು ಅರ್ಜುನ್​? ಕೊನೆಗೂ ಹೊರಬಿತ್ತು ದುಬೈ ಟ್ರಿಪ್​ನ ರಹಸ್ಯ

ಅಲ್ಲು ಅರ್ಜುನ್​ ಸದ್ಯ ದುಬೈ ಟ್ರಿಪ್​ನಲ್ಲಿದ್ದಾರೆ. ಅವರು ದುಬೈನಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಕುಟುಂಬದ ಜತೆಗೆ ಅವರು ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ. ‘

ಕಥೆ ಬರೆಯಲಿದ್ದಾರೆ ಅಲ್ಲು ಅರ್ಜುನ್​? ಕೊನೆಗೂ ಹೊರಬಿತ್ತು ದುಬೈ ಟ್ರಿಪ್​ನ ರಹಸ್ಯ
ಅಲ್ಲು ಅರ್ಜುನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 29, 2022 | 1:22 PM

ಅಲ್ಲು ಅರ್ಜುನ್ (Allu Arjun)​ ಅವರು ಸದ್ಯ ‘ಪುಷ್ಪ’ ಸಿನಿಮಾ (Pushpa Movie) ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಸಿನಿಮಾ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ನೀಡಿದೆ. ಅಲ್ಲು ಅರ್ಜುನ್ ಟಾಲಿವುಡ್​ನಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ​. ಅವರು ಬಾಲಿವುಡ್​​ನಲ್ಲೂ ಗಟ್ಟಿ ನೆಲೆ ಕಂಡುಕೊಳ್ಳೋಕೆ ಈ ಸಿನಿಮಾ ಸಹಕಾರಿಯಾಗಿದೆ. ‘ಶ್ರೀವಲ್ಲಿ..’ ಹಾಡಿಗೆ ಅವರು ಹಾಕಿದ ಐಕಾನಿಕ್​ ಸ್ಟೆಪ್​ಅನ್ನು ಎಲ್ಲರೂ ಅನುಕರಣೆ ಮಾಡುತ್ತಿದ್ದಾರೆ. ವೆಸ್ಟ್​ ಇಂಡೀಸ್​ ಕ್ರಿಕೆಟ್​ ಆಟಗಾರರಿಂದ ಹಿಡಿದು ಸಾಕಷ್ಟು ಮಂದಿ ಈ ಹಾಡಿಗೆ ರೀಲ್ಸ್​ ಮಾಡಿದ್ದಾರೆ. ಈ ಮೂಲಕ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬುತ್ತಿದೆ. ಈಗ ಅಲ್ಲು ಅರ್ಜುನ್​ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ. ಅವರು ಈಗ ಸಿನಿಮಾ ಕಥೆಯೊಂದನ್ನು ಬರೆಯಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಅಚ್ಚರಿ ಎಂದರೆ, ದುಬೈ ಟ್ರಿಪ್​ಗೂ ಅಲ್ಲು ಅರ್ಜುನ್​ ಕಥೆ ಬರೆಯುವುದಕ್ಕೂ (Allu Arjun Dubai Trip) ಒಂದು ಲಿಂಕ್​ ಇದೆ.

ಅಲ್ಲು ಅರ್ಜುನ್​ ಸದ್ಯ ದುಬೈ ಟ್ರಿಪ್​ನಲ್ಲಿದ್ದಾರೆ. ಅವರು ದುಬೈನಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ. ಕುಟುಂಬದ ಜತೆಗೆ ಅವರು ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ. ‘ಪುಷ್ಪ’ ಯಶಸ್ಸಿನ ಹಿನ್ನೆಲೆಯಲ್ಲಿ ಅವರು ಪ್ರವಾಸ ತೆರಳಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ಆದರೆ, ಈ ವಿಚಾರದ ಬಗ್ಗೆ ಹೊಸದೊಂದು ಅಪ್​ಡೇಟ್​ ಬಂದಿದೆ.

ದುಬೈ ಮಾತ್ರವಲ್ಲದೆ, ಅಲ್ಲು ಅರ್ಜುನ್​ ಯುರೋಪ್​ ರಾಷ್ಟ್ರಗಳಿಗೂ ಭೇಟಿ ನೀಡಲಿದ್ದಾರೆ. ಪ್ರಕೃತಿ ಸೌಂದರ್ಯ ಸವಿಯಲು ಅಲ್ಲಿಗೆ ತೆರಳುತ್ತಾರೆ ಎಂದಾದರೆ ಈಗ ಹೇಳಿ ಮಾಡಿಸಿದ ಸಮಯ. ಈ ಕಾರಣಕ್ಕೆ ಇಲ್ಲಿಗೆ ಹೆಚ್ಚೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಅಲ್ಲು ಅರ್ಜುನ್​ ಕೂಡ ಇದೇ ಪ್ಲ್ಯಾನ್​ ಮಾಡಿದ್ದಾರೆ. ಹಾಗಾದರೆ, ಅವರು ಯುರೋಪ್​ಗೆ ಭೇಟಿ ನೀಡುತ್ತಿರುವುದು ಏಕೆ? ಅದಕ್ಕೂ ಕಾರಣವಿದೆ.

ಮೂಲಗಳ ಪ್ರಕಾರ ಯುರೋಪ್​ಗೆ ತೆರಳಿ ಕಥೆ ಬರೆಯುವ ಆಲೋಚನೆಯಲ್ಲಿ ಅಲ್ಲು ಅರ್ಜುನ್​ ಇದ್ದಾರೆ. ಈ ಸಿನಿಮಾದಲ್ಲಿ ಅವರೇ ನಟಿಸುತ್ತಾರಾ ಅಥವಾ ಬೇರೆ ಹೀರೋಗೆ ಅವಕಾಶ ನೀಡುತ್ತಾರಾ ಎಂಬುದು ಸದ್ಯದ ಕುತೂಹಲ. ಒಂದೊಮ್ಮೆ ಅವರು ಕಥೆ ಬರೆದಿದ್ದೇ ಹೌದಾದಲ್ಲಿ ಅಲ್ಲು ಅರ್ಜುನ್​ ಟಾಲಿವುಡ್​ನಲ್ಲಿ ಕಥೆಗಾರನಾಗಿಯೂ ಗುರುತಿಸಿಕೊಳ್ಳಲಿದ್ದಾರೆ.

ಚೇ ಗುವಾರ ಅವರ ಮೋಟರ್​ ಸೈಕಲ್​ ಡೈರಿ ಆಧರಿಸಿ ಕಥೆ ಒಂದು ಸಿದ್ಧಗೊಂಡಿತ್ತು. ಈ ಕಥೆಗೆ ದಿಲ್​ ರಾಜು ಬಂಡವಾಳ ಹೂಡುವವರಿದ್ದರು. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ನಟಿಸಬೇಕಿತ್ತು. ಆರಂಭದಲ್ಲಿ ಕಥೆ ಕೇಳಿ ಒಪ್ಪಿದ್ದ ಅವರು ನಂತರ ಈ ಪ್ರಾಜೆಕ್ಟ್​​​ ಅನ್ನು ಕ್ಯಾನ್ಸಲ್​ ಮಾಡಿದ್ದರು. ಈಗ ಅಲ್ಲು ಅರ್ಜುನ್​ ಅವರು ಯುರೋಪ್​ನಲ್ಲಿ ಹೆಚ್ಚು ಸಮಯ ಕಳೆದು ಕಥೆ ಬರೆಯುವ ಆಲೋಚನೆಯಲ್ಲಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಹೊಸ ಚಿತ್ರಕ್ಕೆ ಅಟ್ಲಿ ನಿರ್ದೇಶನ; ಸಂಭಾವನೆ ಎಷ್ಟು ಅಂತ ಕೇಳಿದ್ರೆ ಅಚ್ಚರಿ ಆಗತ್ತೆ

ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್