AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ

4 ವರ್ಷದ ಪುಟಾಣಿ ಅಲ್ಲು ಅರ್ಹಾ ಶೂಟಿಂಗ್​ ಸೆಟ್​ನಲ್ಲಿ ತಂದೆ ಅಲ್ಲು ಅರ್ಜುನ್​ ಅವರ ಕ್ಯಾರವ್ಯಾನ್​ ಬಳಸುತ್ತಿದ್ದಾಳೆ. ಬಹುಕೋಟಿ ರೂ. ಬೆಲೆಬಾಳುವ ಈ ದುಬಾರಿ ವಾಹನದಲ್ಲೇ ಅರ್ಹಾ ಮೇಕಪ್​ ಮಾಡಿಕೊಳ್ಳುತ್ತಿದ್ದಾಳೆ.

ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ
ಮಗಳ ಸಿನಿಮಾ ಶೂಟಿಂಗ್​ ನೋಡಲು ಸೆಟ್​ಗೆ ಬಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ
TV9 Web
| Edited By: |

Updated on: Aug 07, 2021 | 4:11 PM

Share

ಟಾಲಿವುಡ್​ನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun) ಅವರ ಪುತ್ರಿ ಅಲ್ಲು ಅರ್ಹಾ  (Allu Arha) ಚಿತ್ರರಂಗಕ್ಕೆ ಕಾಲಿಟ್ಟಿದ್ದಾಳೆ. ಮೊದಲ ಸಿನಿಮಾದಲ್ಲಿ ನಟಿ ಸಮಂತಾ ಅಕ್ಕಿನೇನಿ (Samantha Akkineni) ಜೊತೆ ಅಭಿನಯಿಸುವ ಅವಕಾಶ ಅರ್ಹಾಗೆ ಸಿಕ್ಕಿದೆ. ಇದು ಅಲ್ಲು ಅರ್ಜುನ್​ ಕುಟುಂಬದ ಎಲ್ಲರಿಗೂ ಖುಷಿ ನೀಡಿದೆ. ಈಗಾಗಲೇ ಅರ್ಹಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾಳೆ. ಇದು ಅಲ್ಲು ಅರ್ಜುನ್​ಗೆ ಹೆಚ್ಚು ಎಗ್ಸೈಟ್​ ಆಗಿರುವಂತಹ ವಿಚಾರ. ಹಾಗಾಗಿ ತಮ್ಮ ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡಿರುವ ಅವರು ಮಗಳ ಶೂಟಿಂಗ್​ ನೋಡಲು ಚಿತ್ರೀಕರಣದ ಸೆಟ್​ಗೆ ತೆರಳಿದ್ದಾರೆ. ಇದು ಪುತ್ರಿಯ ಮೊದಲ ಸಿನಿಮಾ ಆದ್ದರಿಂದ ಅಲ್ಲು ಅರ್ಜುನ್​ಗೆ ಖುಷಿಯೋ ಖುಷಿ.

ಸಮಂತಾ ಅಕ್ಕಿನೇನಿ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಶಾಕುಂತಲಂ’ ಚಿತ್ರದಲ್ಲಿ ಶಕುಂತಲೆಯ ಪುತ್ರ ಭರತನ ಪಾತ್ರದಲ್ಲಿ ಅಲ್ಲು ಅರ್ಹಾ ನಟಿಸುತ್ತಿದ್ದಾಳೆ. ಇದು ವಿಶೇಷ ಪಾತ್ರ ಆಗಿರುವುದರಿಂದ ತಮ್ಮ ಪುತ್ರಿ ಹೇಗೆ ನಟಿಸುತ್ತಾಳೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಲ್ಲು ಅರ್ಜುನ್​ ಅವರದ್ದು. ಅರ್ಹಾ ಕ್ಯಾಮೆರಾ ಎದುರಿಸುತ್ತಿರುವಾಗ ಮಾನಿಟರ್​ ಮುಂದೆ ಕುಳಿತು ಮಗಳ ಅಭಿನಯವನ್ನು ನೋಡಿ ಅವರು ಖುಷಿಪಟ್ಟಿದ್ದಾರೆ. ಆ ಕ್ಷಣದ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಅಲ್ಲು ಅರ್ಹಾ ಶೂಟಿಂಗ್​ ಸೆಟ್​ನಲ್ಲಿ ತಂದೆಯ ಕ್ಯಾರವ್ಯಾನ್​ ಬಳಸುತ್ತಿದ್ದಾಳೆ. ಬಹುಕೋಟಿ ರೂ. ಬೆಲೆಬಾಳುವ ಈ ದುಬಾರಿ ವಾಹನದಲ್ಲೇ ಅರ್ಹಾ ಮೇಕಪ್​ ಮಾಡಿಕೊಳ್ಳುತ್ತಿದ್ದಾಳೆ. ಶೂಟಿಂಗ್​ ನಡುವಿನ ಬ್ರೇಕ್​ನಲ್ಲಿ ಇದರಲ್ಲೇ ಆಕೆ ಕಾಲ ಕಳೆಯುತ್ತಿದ್ದಾಳೆ. ಒಟ್ಟಿನಲ್ಲಿ ಮಗಳ ಸಿನಿಮಾ ಶೂಟಿಂಗ್​ ನೋಡುತ್ತ ಅಲ್ಲು ಅರ್ಜುನ್​ ಮತ್ತು ಅವರ ಪತ್ನಿ ಸ್ನೇಹಾ ರೆಡ್ಡಿ ಮುಖ ಖುಷಿಯಿಂದ ಅರಳಿದೆ.

ಈ ಸಿನಿಮಾಗೆ ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಾಳಿದಾಸ ಬರೆದ ಶಕುಂತಲೆ ನಾಟಕವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ‘ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಧನ್ಯವಾದಗಳು. ನನ್ನ ಮಗಳು ಮೊದಲ ಸಿನಿಮಾದಲ್ಲೇ ಸಮಂತಾ ಅಕ್ಕಿನೇನಿ ಜೊತೆ ಅಭಿನಯಿಸಿದ್ದನ್ನು ನೋಡಲು ಖುಷಿ ಆಗುತ್ತದೆ. ಶಾಕುಂತಲಂ ತಂಡದ ಎಲ್ಲ ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅಲ್ಲು ಅರ್ಜುನ್​ ಅವರು ಕಳೆದ ತಿಂಗಳು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

Pushpa: ‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​

‘ಅವರು ಪರ್ಫೆಕ್ಷನಿಸ್ಟ್​’; ಅಲ್ಲು ಅರ್ಜುನ್​ ಬಗ್ಗೆ ಡಾಲಿ ಧನಂಜಯ ಮನಸ್ಸಿನ ಮಾತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್