AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

ಪುಷ್ಪರಾಜ್ ಅವತಾರ ಎಲ್ಲರಿಗೂ ಗೊತ್ತು. ಮೊದಲ ಭಾಗದಲ್ಲಿ ಉದ್ದನೆಯ ಗಡ್ಡದಲ್ಲಿ ಅವರು ಕಾಣಿಸಿಕೊಂಡಿದ್ದರು. ಎರಡನೇ ಪಾರ್ಟ್​ನಲ್ಲೂ ಅವರು ಹಾಗೆಯೇ ಕಾಣಿಸಿಕೊಂಡಿದ್ದಾರೆ. ಅವರ ಉದ್ದನೆಯ ಗಡ್ಡ ಮಗಳಿಗೆ ಇಷ್ಟ ಆಗಿಲ್ಲವಂತೆ. ಈ ಬಗ್ಗೆ ಅಲ್ಲು ಅರ್ಜುನ್ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 02, 2024 | 7:54 AM

Share

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ನಾನಾ ಕಡೆಗಳಿಗೆ ಅವರು ತೆರಳುತ್ತಿದ್ದಾರೆ. ಅವರ ಲುಕ್ ಅನೇಕರಿಗೆ ಇಷ್ಟ ಆಗಿದೆ. ಉದ್ದ ಕೂದಲು ಹಾಗೂ ಉದ್ದನೆಯ ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದರು ಅಲ್ಲು ಅರ್ಜುನ್. ಇದು ಅವರ ಅಭಿಮಾನಿಗಳಿಗೆ ಇಷ್ಟ ಆಗಿರಬಹುದು. ಆದರೆ, ಮನೆಯ ಸದಸ್ಯರಿಗೆ ಇಷ್ಟ ಆಗಿರಲಿಲ್ಲ. ಇದು ಅವರಿಗೆ ಬೇಸರ ಮೂಡಿಸಿದೆ.

ಪುಷ್ಪರಾಜ್ ಅವತಾರ ಎಲ್ಲರಿಗೂ ಗೊತ್ತು. ಮೊದಲ ಭಾಗದಲ್ಲಿ ಉದ್ದನೆಯ ಗಡ್ಡದಲ್ಲಿ ಅವರು ಕಾಣಿಸಿಕೊಂಡಿದ್ದರು. ಎರಡನೇ ಪಾರ್ಟ್​ನಲ್ಲೂ ಅವರು ಹಾಗೆಯೇ ಕಾಣಿಸಿಕೊಂಡಿದ್ದಾರೆ. ಅವರ ಉದ್ದನೆಯ ಗಡ್ಡ ಮಗಳಿಗೆ ಇಷ್ಟ ಆಗಿಲ್ಲವಂತೆ. ಈ ಬಗ್ಗೆ ಅಲ್ಲು ಅರ್ಜುನ್ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ‘ಮಗಳು ನನ್ನಿಂದ ಅಂತರ ಕಾಯ್ದುಕೊಂಡಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ನನು ಸಿನಿಮಾ ಮುಗಿಯಲಿ ಎಂದು ಕಾಯುತ್ತಿದ್ದೇನೆ. ನಾನು ಕ್ಲೀನ್ ಶೇವ್ ಮಾಡಿಕೊಳ್ಳಬೇಕು. ಏಕೆಂದರೆ ನನ್ನ ಮಗಳು ಹತ್ತಿರ ಬರಲೇ ಇಲ್ಲ. ನನಗೆ ಗಡ್ಡ ಇದೆ ಎಂಬ ಕಾರಣಕ್ಕೆ ಅವಳಿಗೆ ಮುತ್ತು ಕೊಡಲು ಸಾಧ್ಯವಾಗಿಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದ ಅವಳಿಗೆ ಸರಿಯಾಗಿ ಮುತ್ತು ಕೊಡೋಕೆ ಆಗಿಲ್ಲ’ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಅಲ್ಲು ಅರ್ಜುನ್ ಅವರು ಮಗಳಿಗಾಗಿ ಗಡ್ಡ ತೆಗೆಸಿದರೆ ಸಿನಿಮಾ ಶೂಟ್ ಮಾಡೋಕೆ ಆಗೋದಿಲ್ಲ. ಒಂದೊಮ್ಮೆ ಗಡ್ಡ ತೆಗೆಯದೇ ಇದ್ದರೆ ಮಗಳು ಹತ್ತಿರ ಬರೋದಿಲ್ಲ. ಒಟ್ಟಾರೆಯಾಗಿ ಅವರು ಈ ಸಿನಿಮಾಗಾಗಿ ಅವರು ಕುಟುಂಬದಿಂದ ದೂರವೇ ಉಳಿಯಬೇಕಾದ ಪರಿಸ್ಥಿತಿ ಬಂದಿತ್ತು.

ಈ ಮೊದಲು ಕುಟುಂಬದ ಜೊತೆ ಅಮೆರಿಕ ತೆರಳಲು ಅಲ್ಲು ಅರ್ಜುನ್ ಅವರು ಗಡ್ಡ ಟ್ರಿಮ್ ಮಾಡಿದ್ದರು. ಸಿನಿಮಾ ಮಾಡಲು ಇಷ್ಟ ಇಲ್ಲದ ಕಾರಣಕ್ಕೆ ಈ ರೀತಿ ಆಗಿದೆ ಎಂದಲ್ಲ ಸುದ್ದಿ ಆಗಿತ್ತು. ಆದರೆ, ಅವರು ಮಗಳಿಗೋಸ್ಕರ ಗಡ್ಡ ಟ್ರಿಮ್ ಮಾಡಿಕೊಂಡಿದ್ದಿರಬಹುದು ಎಂದು ಎಲ್ಲರೂ ಹೇಳುತ್ತಿದ್ದಾರೆ.

ಇದನ್ನೂ ಓದಿ: ‘ನಿನ್ನ ಬಿಟ್ಟು ಯಾರನ್ನೂ ನೋಡಿಲ್ಲ’: ರಶ್ಮಿಕಾ ಬಗ್ಗೆ ಅಲ್ಲು ಅರ್ಜುನ್ ರೊಮ್ಯಾಂಟಿಕ್ ಮಾತು

ಅಲ್ಲು ಅರ್ಜುನ್ ನಟನೆಯ, ಸುಕುಮಾರ್ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ‘ಪುಷ್ಪ 2’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗುತ್ತಿದೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಜಗಪತಿ ಬಾಬು, ಧನಂಜಯ,  ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ