AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕ್ಕು ಡಾರ್ಲಿಂಗ್​ ಜನ್ಮದಿನಕ್ಕೆ ‘ಪುಷ್ಪ 2’ ಸೆಟ್​ನಿಂದ ವಿಶೇಷ ಫೋಟೋ ಹಂಚಿಕೊಂಡ ಅಲ್ಲು ಅರ್ಜುನ್​

‘ಪುಷ್ಪ 2’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ನಿರ್ದೇಶಕ ಸುಕುಮಾರ್​ ಅವರ ಬರ್ತ್​ಡೇಗೆ ಅಲ್ಲು ಅರ್ಜುನ್ ವಿಶ್​ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ ಸೆಟ್​ನಲ್ಲಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಅವರು ನೀಡಿದ ಕ್ಯಾಪ್ಷನ್​ ಕೂಡ ಗಮನ ಸೆಳೆಯುತ್ತಿದೆ.

ಸುಕ್ಕು ಡಾರ್ಲಿಂಗ್​ ಜನ್ಮದಿನಕ್ಕೆ ‘ಪುಷ್ಪ 2’ ಸೆಟ್​ನಿಂದ ವಿಶೇಷ ಫೋಟೋ ಹಂಚಿಕೊಂಡ ಅಲ್ಲು ಅರ್ಜುನ್​
ಸುಕುಮಾರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Jan 11, 2024 | 1:09 PM

Share

ನಿರ್ದೇಶಕ ಸುಕುಮಾರ್​ (Sukumar) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಮೇಲೆ ಅಲ್ಲು ಅರ್ಜುನ್​ ಅವರ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಂದು (ಜನವರಿ 11) ನಿರ್ದೇಶಕ ಸುಕುಮಾರ್​ ಜನ್ಮದಿನ. ಆ ಪ್ರಯುಕ್ತ ಅಲ್ಲು ಅರ್ಜುನ್​ (Allu Arjun) ಅವರು ವಿಶ್​ ಮಾಡಿದ್ದು, ತಮ್ಮ ಸಿನಿಮಾದ ನಿರ್ದೇಶಕರನ್ನು ಸುಕ್ಕು ಡಾರ್ಲಿಂಗ್​ ಎಂದು ಕರೆದಿದ್ದಾರೆ.

ಅಲ್ಲು ಅರ್ಜುನ್​ ಅವರ ವೃತ್ತಿಜೀವನ ಈ ಮಟ್ಟಕ್ಕೆ ಬರಲು ಸುಕುಮಾರ್​ ಅವರ ಕೊಡುಗೆ ಕೂಡ ದೊಡ್ಡದಿದೆ. ‘ಆರ್ಯ’, ‘ಪುಷ್ಪ’ ರೀತಿಯ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುವ ಮೂಲಕ ಸುಕುಮಾರ್​ ಅವರು ಅಲ್ಲು ಅರ್ಜುನ್​ಗೆ ಯಶಸ್ಸು ದೊರಕಿಸಿ ಕೊಟ್ಟರು. ಈಗ ಅವರಿಬ್ಬರು ಜೊತೆಯಾಗಿ ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ.

ಸುಕುಮಾರ್​ ಅವರ ಬರ್ತ್​ಡೇಗೆ ಅಲ್ಲು ಅರ್ಜುನ್ ವಿಶ್​ ಮಾಡಿದ್ದಾರೆ. ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರು ಗಾಢವಾಗಿ ಚರ್ಚೆ ಮಾಡುತ್ತಿರುವ ಕ್ಷಣ ಸೆರೆಯಾಗಿದೆ. ‘ನನ್ನ ಜೀನಿಯಸ್​ ಸುಕ್ಕು ಡಾರ್ಲಿಂಗ್​ಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಅಲ್ಲು ಅರ್ಜುನ್​ ಅವರು ಈ ಪೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಅಲ್ಲದೇ, ತಾವೇ ಕ್ಲಿಕ್ಕಿಸಿ, ಎಡಿಟ್​ ಮಾಡಿದ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?

‘ಪುಷ್ಪ 2’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಿಗ್ ಬಜೆಟ್​ನಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು