AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕ್ಕು ಡಾರ್ಲಿಂಗ್​ ಜನ್ಮದಿನಕ್ಕೆ ‘ಪುಷ್ಪ 2’ ಸೆಟ್​ನಿಂದ ವಿಶೇಷ ಫೋಟೋ ಹಂಚಿಕೊಂಡ ಅಲ್ಲು ಅರ್ಜುನ್​

‘ಪುಷ್ಪ 2’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ನಿರ್ದೇಶಕ ಸುಕುಮಾರ್​ ಅವರ ಬರ್ತ್​ಡೇಗೆ ಅಲ್ಲು ಅರ್ಜುನ್ ವಿಶ್​ ಮಾಡಿದ್ದಾರೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ ಸೆಟ್​ನಲ್ಲಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಅವರು ನೀಡಿದ ಕ್ಯಾಪ್ಷನ್​ ಕೂಡ ಗಮನ ಸೆಳೆಯುತ್ತಿದೆ.

ಸುಕ್ಕು ಡಾರ್ಲಿಂಗ್​ ಜನ್ಮದಿನಕ್ಕೆ ‘ಪುಷ್ಪ 2’ ಸೆಟ್​ನಿಂದ ವಿಶೇಷ ಫೋಟೋ ಹಂಚಿಕೊಂಡ ಅಲ್ಲು ಅರ್ಜುನ್​
ಸುಕುಮಾರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Jan 11, 2024 | 1:09 PM

Share

ನಿರ್ದೇಶಕ ಸುಕುಮಾರ್​ (Sukumar) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ‘ಪುಷ್ಪ 2’ (Pushpa 2) ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾದ ಮೇಲೆ ಅಲ್ಲು ಅರ್ಜುನ್​ ಅವರ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಂದು (ಜನವರಿ 11) ನಿರ್ದೇಶಕ ಸುಕುಮಾರ್​ ಜನ್ಮದಿನ. ಆ ಪ್ರಯುಕ್ತ ಅಲ್ಲು ಅರ್ಜುನ್​ (Allu Arjun) ಅವರು ವಿಶ್​ ಮಾಡಿದ್ದು, ತಮ್ಮ ಸಿನಿಮಾದ ನಿರ್ದೇಶಕರನ್ನು ಸುಕ್ಕು ಡಾರ್ಲಿಂಗ್​ ಎಂದು ಕರೆದಿದ್ದಾರೆ.

ಅಲ್ಲು ಅರ್ಜುನ್​ ಅವರ ವೃತ್ತಿಜೀವನ ಈ ಮಟ್ಟಕ್ಕೆ ಬರಲು ಸುಕುಮಾರ್​ ಅವರ ಕೊಡುಗೆ ಕೂಡ ದೊಡ್ಡದಿದೆ. ‘ಆರ್ಯ’, ‘ಪುಷ್ಪ’ ರೀತಿಯ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುವ ಮೂಲಕ ಸುಕುಮಾರ್​ ಅವರು ಅಲ್ಲು ಅರ್ಜುನ್​ಗೆ ಯಶಸ್ಸು ದೊರಕಿಸಿ ಕೊಟ್ಟರು. ಈಗ ಅವರಿಬ್ಬರು ಜೊತೆಯಾಗಿ ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ನಿರತರಾಗಿದ್ದಾರೆ.

ಸುಕುಮಾರ್​ ಅವರ ಬರ್ತ್​ಡೇಗೆ ಅಲ್ಲು ಅರ್ಜುನ್ ವಿಶ್​ ಮಾಡಿದ್ದಾರೆ. ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅಲ್ಲು ಅರ್ಜುನ್​ ಮತ್ತು ಸುಕುಮಾರ್​ ಅವರು ಗಾಢವಾಗಿ ಚರ್ಚೆ ಮಾಡುತ್ತಿರುವ ಕ್ಷಣ ಸೆರೆಯಾಗಿದೆ. ‘ನನ್ನ ಜೀನಿಯಸ್​ ಸುಕ್ಕು ಡಾರ್ಲಿಂಗ್​ಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಅಲ್ಲು ಅರ್ಜುನ್​ ಅವರು ಈ ಪೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಅಲ್ಲದೇ, ತಾವೇ ಕ್ಲಿಕ್ಕಿಸಿ, ಎಡಿಟ್​ ಮಾಡಿದ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 10 ಕೋಟಿ ರೂಪಾಯಿ ಕೊಟ್ರೂ ಅಲ್ಲು ಅರ್ಜುನ್​ ಇಂಥ ಕೆಲಸ ಮಾಡಲ್ಲ; ‘ಪುಷ್ಪ 2’ ಬಳಗದಲ್ಲಿ ಆಗಿದ್ದೇನು?

‘ಪುಷ್ಪ 2’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಿಗ್ ಬಜೆಟ್​ನಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!