Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್

‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಕಂಗ್ರಾಜ್ಯುಲೇಷನ್’ ಎಂದಿದ್ದಾರೆ ಅಲ್ಲು ಅರ್ಜುನ್​.

ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್
ಆಹಾಗೆ ಅಲ್ಲು ಅರ್ಜುನ್ ವಿಶ್
Follow us
TV9 Web
| Updated By: ಆಯೇಷಾ ಬಾನು

Updated on:Apr 14, 2022 | 10:17 PM

ಅಲ್ಲು ಅರ್ಜುನ್ (Allu Arjun) ತಂದೆ ಅಲ್ಲು ಅರವಿಂದ್ (Allu Aravind) ಹಾಗೂ ರಾಮೇಶ್ವರ್ ರಾವ್ ಅವರು ‘ಆಹಾ’ ಒಟಿಟಿಯನ್ನು ತೆಲುಗಿನಲ್ಲಿ ಆರಂಭಿಸಿದ್ದರು. ಈಗ ಅದು ತಮಿಳಿಗೂ ವಿಸ್ತರಣೆ ಆಗಿದೆ. ಹಲವು ತಿಂಗಳ ಕಾಲ ತಮಿಳು ‘ಆಹಾ’ಗಾಗಿ ಕೆಲಸಗಳು ನಡೆದಿದ್ದವು. ಇಂದು (ಏಪ್ರಿಲ್ 14) ಚೆನ್ನೈನಲ್ಲಿ ಅದ್ದೂರಿಯಾಗಿ ಇದರ ಲಾಂಚ್​ ನಡೆದಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮಿಳು ‘ಆಹಾ’ವನ್ನು ಇಂದು ರಾತ್ರಿ ಲೋಕಾರ್ಪಣೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹಲವು ತಮಿಳು ಸಿನಿಮಾಗಳು ಈ ಒಟಿಟಿ ಮೂಲಕ ಪ್ರಸಾರ ಕಾಣಲಿದೆ.

ಅಲ್ಲು ಅರ್ಜುನ್ ಅವರು ಈ ತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಅಲ್ಲದೆ, ಮುಂದಿನ ಪಯಣಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಮಿಳು ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಧನ್ಯವಾದ’ ಎಂದಿದ್ದಾರೆ ಅಲ್ಲು ಅರ್ಜುನ್​.

‘ಆಹಾ ತಮಿಳು ವರ್ಷನ್ ಅನಾವರಣ ಮಾಡಲು ನಾವು ಉತ್ಸುಕರಾಗಿದ್ದೇವೆ. ಇಲ್ಲಿ ವೆಬ್ ಸರಣಿಗಳು ಮತ್ತು ಸಿನಿಮಾಗಳ ಸಂಗ್ರಹ ಇರಲಿದೆ. ತಮಿಳು ವರ್ಷನ್​ನಲ್ಲಿ ನಿರ್ದೇಶಕ ವೆಟ್ರಿಮಾರನ್‌ ಅವರ ‘ಪೆಟ್ಟಕಾಳೈ’, ಪ್ರಿಯಾಮಣಿ ಅವರ ‘ಭಾಮಾಕಲಾಪಂ’, ‘ಅಮ್ಮುಚಿ 2’, ‘ರಮಣಿ vs ರಮಣಿ 3’ ಮುಂತಾದ ಚಿತ್ರಗಳು ಇದರಲ್ಲಿವೆ. ಥಿಯೇಟರ್​ನಲ್ಲಿ ರಿಲೀಸ್ ಆದ ಹಲವು ಸಿನಿಮಾಗಳ ಒಟಿಟಿ ಹಕ್ಕು ತಮ್ಮ ಬಳಿ ಇವೆ. ನಮ್ಮ ಒಟಿಟಿಯಿಂದ ಹಲವು ಪ್ರತಿಭೆಗಳು ಮುನ್ನೆಲೆಗೆ ಬರುತ್ತಾರೆ’ ಎಂದಿದ್ದಾರೆ ಅಲ್ಲು ಅರವಿಂದ್.

‘ಆಹಾಗೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಲವು ಸಿನಿಮಾಗಳನ್ನು ಜನರಿಗೆ ತಲುಪಿಸಲು ಯಶಸ್ವಿ ಆಗಿದ್ದೇವೆ. ಆಹಾ ಈಗಷ್ಟೇ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತಿದೆ. ಶೀಘ್ರದಲ್ಲೇ ಜಾಗತಿಕವಾಗಿ ತಮಿಳು ಭಾಷೆಯವರಿಗೆ ಮನರಂಜನೆ ನೀಡಲು ನಮ್ಮ ವೇದಿಕೆ ಮುಂದಿರುತ್ತದೆ ಎಂದು ನಾವು ಭರವಸೆ ನೀಡುತ್ತೇವೆ’ ಎಂದಿದ್ದಾರೆ ಆಹಾ ಸಿಇಒ ಅಜಿತ್ ಠಾಕೂರ್.

ಇದನ್ನೂ ಓದಿ:  ವಿಶ್ವದಾದ್ಯಂತ ಬಿಡುಗಡೆಯಾಗಿ ಅಬ್ಬರಿಸುತ್ತಿರುವ ಕೆಜಿಎಫ್-2 ಸಿನಿಮಾ ಕೆಜಿಎಫ್ ನಲ್ಲೇ ಬಿಡುಗಡೆಯಾಗಿಲ್ಲ, ಯಾಕೆ ಗೊತ್ತಾ?

ತಮಿಳುನಾಡಿನಲ್ಲಿ ಅಂಬೇಡ್ಕರ್ ಜಯಂತಿಯನ್ನು ಸಮಾನತೆಯ ದಿನವನ್ನಾಗಿ ಆಚರಿಸಲಾಗುವುದು: ಎಂಕೆ ಸ್ಟಾಲಿನ್

Published On - 10:04 pm, Thu, 14 April 22

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್