AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್

‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಕಂಗ್ರಾಜ್ಯುಲೇಷನ್’ ಎಂದಿದ್ದಾರೆ ಅಲ್ಲು ಅರ್ಜುನ್​.

ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್
ಆಹಾಗೆ ಅಲ್ಲು ಅರ್ಜುನ್ ವಿಶ್
TV9 Web
| Edited By: |

Updated on:Apr 14, 2022 | 10:17 PM

Share

ಅಲ್ಲು ಅರ್ಜುನ್ (Allu Arjun) ತಂದೆ ಅಲ್ಲು ಅರವಿಂದ್ (Allu Aravind) ಹಾಗೂ ರಾಮೇಶ್ವರ್ ರಾವ್ ಅವರು ‘ಆಹಾ’ ಒಟಿಟಿಯನ್ನು ತೆಲುಗಿನಲ್ಲಿ ಆರಂಭಿಸಿದ್ದರು. ಈಗ ಅದು ತಮಿಳಿಗೂ ವಿಸ್ತರಣೆ ಆಗಿದೆ. ಹಲವು ತಿಂಗಳ ಕಾಲ ತಮಿಳು ‘ಆಹಾ’ಗಾಗಿ ಕೆಲಸಗಳು ನಡೆದಿದ್ದವು. ಇಂದು (ಏಪ್ರಿಲ್ 14) ಚೆನ್ನೈನಲ್ಲಿ ಅದ್ದೂರಿಯಾಗಿ ಇದರ ಲಾಂಚ್​ ನಡೆದಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮಿಳು ‘ಆಹಾ’ವನ್ನು ಇಂದು ರಾತ್ರಿ ಲೋಕಾರ್ಪಣೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹಲವು ತಮಿಳು ಸಿನಿಮಾಗಳು ಈ ಒಟಿಟಿ ಮೂಲಕ ಪ್ರಸಾರ ಕಾಣಲಿದೆ.

ಅಲ್ಲು ಅರ್ಜುನ್ ಅವರು ಈ ತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಅಲ್ಲದೆ, ಮುಂದಿನ ಪಯಣಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಮಿಳು ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಧನ್ಯವಾದ’ ಎಂದಿದ್ದಾರೆ ಅಲ್ಲು ಅರ್ಜುನ್​.

‘ಆಹಾ ತಮಿಳು ವರ್ಷನ್ ಅನಾವರಣ ಮಾಡಲು ನಾವು ಉತ್ಸುಕರಾಗಿದ್ದೇವೆ. ಇಲ್ಲಿ ವೆಬ್ ಸರಣಿಗಳು ಮತ್ತು ಸಿನಿಮಾಗಳ ಸಂಗ್ರಹ ಇರಲಿದೆ. ತಮಿಳು ವರ್ಷನ್​ನಲ್ಲಿ ನಿರ್ದೇಶಕ ವೆಟ್ರಿಮಾರನ್‌ ಅವರ ‘ಪೆಟ್ಟಕಾಳೈ’, ಪ್ರಿಯಾಮಣಿ ಅವರ ‘ಭಾಮಾಕಲಾಪಂ’, ‘ಅಮ್ಮುಚಿ 2’, ‘ರಮಣಿ vs ರಮಣಿ 3’ ಮುಂತಾದ ಚಿತ್ರಗಳು ಇದರಲ್ಲಿವೆ. ಥಿಯೇಟರ್​ನಲ್ಲಿ ರಿಲೀಸ್ ಆದ ಹಲವು ಸಿನಿಮಾಗಳ ಒಟಿಟಿ ಹಕ್ಕು ತಮ್ಮ ಬಳಿ ಇವೆ. ನಮ್ಮ ಒಟಿಟಿಯಿಂದ ಹಲವು ಪ್ರತಿಭೆಗಳು ಮುನ್ನೆಲೆಗೆ ಬರುತ್ತಾರೆ’ ಎಂದಿದ್ದಾರೆ ಅಲ್ಲು ಅರವಿಂದ್.

‘ಆಹಾಗೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಲವು ಸಿನಿಮಾಗಳನ್ನು ಜನರಿಗೆ ತಲುಪಿಸಲು ಯಶಸ್ವಿ ಆಗಿದ್ದೇವೆ. ಆಹಾ ಈಗಷ್ಟೇ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತಿದೆ. ಶೀಘ್ರದಲ್ಲೇ ಜಾಗತಿಕವಾಗಿ ತಮಿಳು ಭಾಷೆಯವರಿಗೆ ಮನರಂಜನೆ ನೀಡಲು ನಮ್ಮ ವೇದಿಕೆ ಮುಂದಿರುತ್ತದೆ ಎಂದು ನಾವು ಭರವಸೆ ನೀಡುತ್ತೇವೆ’ ಎಂದಿದ್ದಾರೆ ಆಹಾ ಸಿಇಒ ಅಜಿತ್ ಠಾಕೂರ್.

ಇದನ್ನೂ ಓದಿ:  ವಿಶ್ವದಾದ್ಯಂತ ಬಿಡುಗಡೆಯಾಗಿ ಅಬ್ಬರಿಸುತ್ತಿರುವ ಕೆಜಿಎಫ್-2 ಸಿನಿಮಾ ಕೆಜಿಎಫ್ ನಲ್ಲೇ ಬಿಡುಗಡೆಯಾಗಿಲ್ಲ, ಯಾಕೆ ಗೊತ್ತಾ?

ತಮಿಳುನಾಡಿನಲ್ಲಿ ಅಂಬೇಡ್ಕರ್ ಜಯಂತಿಯನ್ನು ಸಮಾನತೆಯ ದಿನವನ್ನಾಗಿ ಆಚರಿಸಲಾಗುವುದು: ಎಂಕೆ ಸ್ಟಾಲಿನ್

Published On - 10:04 pm, Thu, 14 April 22

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?