ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್

‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಕಂಗ್ರಾಜ್ಯುಲೇಷನ್’ ಎಂದಿದ್ದಾರೆ ಅಲ್ಲು ಅರ್ಜುನ್​.

ತಮಿಳಿಗೆ ಕಾಲಿಟ್ಟ ‘ಆಹಾ’ ಒಟಿಟಿ; ವಿಶ್ ಮಾಡಿದ ನಟ ಅಲ್ಲು ಅರ್ಜುನ್, ಸಿಎಂ ಸ್ಟಾಲಿನ್
ಆಹಾಗೆ ಅಲ್ಲು ಅರ್ಜುನ್ ವಿಶ್
Follow us
| Updated By: ಆಯೇಷಾ ಬಾನು

Updated on:Apr 14, 2022 | 10:17 PM

ಅಲ್ಲು ಅರ್ಜುನ್ (Allu Arjun) ತಂದೆ ಅಲ್ಲು ಅರವಿಂದ್ (Allu Aravind) ಹಾಗೂ ರಾಮೇಶ್ವರ್ ರಾವ್ ಅವರು ‘ಆಹಾ’ ಒಟಿಟಿಯನ್ನು ತೆಲುಗಿನಲ್ಲಿ ಆರಂಭಿಸಿದ್ದರು. ಈಗ ಅದು ತಮಿಳಿಗೂ ವಿಸ್ತರಣೆ ಆಗಿದೆ. ಹಲವು ತಿಂಗಳ ಕಾಲ ತಮಿಳು ‘ಆಹಾ’ಗಾಗಿ ಕೆಲಸಗಳು ನಡೆದಿದ್ದವು. ಇಂದು (ಏಪ್ರಿಲ್ 14) ಚೆನ್ನೈನಲ್ಲಿ ಅದ್ದೂರಿಯಾಗಿ ಇದರ ಲಾಂಚ್​ ನಡೆದಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮಿಳು ‘ಆಹಾ’ವನ್ನು ಇಂದು ರಾತ್ರಿ ಲೋಕಾರ್ಪಣೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ಹಲವು ತಮಿಳು ಸಿನಿಮಾಗಳು ಈ ಒಟಿಟಿ ಮೂಲಕ ಪ್ರಸಾರ ಕಾಣಲಿದೆ.

ಅಲ್ಲು ಅರ್ಜುನ್ ಅವರು ಈ ತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಅಲ್ಲದೆ, ಮುಂದಿನ ಪಯಣಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಎಲ್ಲರಿಗೂ ತಮಿಳು ಹೊಸ ವರ್ಷದ ಶುಭಾಶಯ. ‘ಆಹಾ’ ತಮಿಳು ತಂಡಕ್ಕೆ ಶುಭಾಶಯ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಧನ್ಯವಾದ’ ಎಂದಿದ್ದಾರೆ ಅಲ್ಲು ಅರ್ಜುನ್​.

‘ಆಹಾ ತಮಿಳು ವರ್ಷನ್ ಅನಾವರಣ ಮಾಡಲು ನಾವು ಉತ್ಸುಕರಾಗಿದ್ದೇವೆ. ಇಲ್ಲಿ ವೆಬ್ ಸರಣಿಗಳು ಮತ್ತು ಸಿನಿಮಾಗಳ ಸಂಗ್ರಹ ಇರಲಿದೆ. ತಮಿಳು ವರ್ಷನ್​ನಲ್ಲಿ ನಿರ್ದೇಶಕ ವೆಟ್ರಿಮಾರನ್‌ ಅವರ ‘ಪೆಟ್ಟಕಾಳೈ’, ಪ್ರಿಯಾಮಣಿ ಅವರ ‘ಭಾಮಾಕಲಾಪಂ’, ‘ಅಮ್ಮುಚಿ 2’, ‘ರಮಣಿ vs ರಮಣಿ 3’ ಮುಂತಾದ ಚಿತ್ರಗಳು ಇದರಲ್ಲಿವೆ. ಥಿಯೇಟರ್​ನಲ್ಲಿ ರಿಲೀಸ್ ಆದ ಹಲವು ಸಿನಿಮಾಗಳ ಒಟಿಟಿ ಹಕ್ಕು ತಮ್ಮ ಬಳಿ ಇವೆ. ನಮ್ಮ ಒಟಿಟಿಯಿಂದ ಹಲವು ಪ್ರತಿಭೆಗಳು ಮುನ್ನೆಲೆಗೆ ಬರುತ್ತಾರೆ’ ಎಂದಿದ್ದಾರೆ ಅಲ್ಲು ಅರವಿಂದ್.

‘ಆಹಾಗೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಲವು ಸಿನಿಮಾಗಳನ್ನು ಜನರಿಗೆ ತಲುಪಿಸಲು ಯಶಸ್ವಿ ಆಗಿದ್ದೇವೆ. ಆಹಾ ಈಗಷ್ಟೇ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತಿದೆ. ಶೀಘ್ರದಲ್ಲೇ ಜಾಗತಿಕವಾಗಿ ತಮಿಳು ಭಾಷೆಯವರಿಗೆ ಮನರಂಜನೆ ನೀಡಲು ನಮ್ಮ ವೇದಿಕೆ ಮುಂದಿರುತ್ತದೆ ಎಂದು ನಾವು ಭರವಸೆ ನೀಡುತ್ತೇವೆ’ ಎಂದಿದ್ದಾರೆ ಆಹಾ ಸಿಇಒ ಅಜಿತ್ ಠಾಕೂರ್.

ಇದನ್ನೂ ಓದಿ:  ವಿಶ್ವದಾದ್ಯಂತ ಬಿಡುಗಡೆಯಾಗಿ ಅಬ್ಬರಿಸುತ್ತಿರುವ ಕೆಜಿಎಫ್-2 ಸಿನಿಮಾ ಕೆಜಿಎಫ್ ನಲ್ಲೇ ಬಿಡುಗಡೆಯಾಗಿಲ್ಲ, ಯಾಕೆ ಗೊತ್ತಾ?

ತಮಿಳುನಾಡಿನಲ್ಲಿ ಅಂಬೇಡ್ಕರ್ ಜಯಂತಿಯನ್ನು ಸಮಾನತೆಯ ದಿನವನ್ನಾಗಿ ಆಚರಿಸಲಾಗುವುದು: ಎಂಕೆ ಸ್ಟಾಲಿನ್

Published On - 10:04 pm, Thu, 14 April 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ