AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮೊದಲೇ ಸಂಕಷ್ಟಕ್ಕೆ ಸಿಲುಕಿದ ‘ಪುಷ್ಪ’; ಚಿಂತೆಗೀಡಾದ ಅಲ್ಲು ಅರ್ಜುನ್​?

‘ಪುಷ್ಪ’ ಸಿನಿಮಾ ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಡಬ್​ ಆಗಿ ತೆರೆಕಾಣುತ್ತಿದೆ. ಸಿನಿಮಾ ರಿಲೀಸ್​ ಆಗೋಕೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ.

ರಿಲೀಸ್​ಗೂ ಮೊದಲೇ ಸಂಕಷ್ಟಕ್ಕೆ ಸಿಲುಕಿದ ‘ಪುಷ್ಪ’; ಚಿಂತೆಗೀಡಾದ ಅಲ್ಲು ಅರ್ಜುನ್​?
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 07, 2021 | 3:40 PM

Share

ಸುಕುಮಾರ್​ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇದ್ದೇ ಇರುತ್ತದೆ. ಈ ಬಾರಿ ಅವರು ಖ್ಯಾತ ನಟ ಅಲ್ಲು ಅರ್ಜುನ್​ ಜತೆ ಕೈ ಜೋಡಿಸಿದ್ದಾರೆ. ಈ ಕಾರಣಕ್ಕೆ ನಿರೀಕ್ಷೆ ಡಬಲ್​ ಆಗಿದೆ. ಈಗಾಗಲೇ ರಿಲೀಸ್​ ಆಗಿರುವ ಟೀಸರ್​ ಹಾಗೂ ಪೋಸ್ಟರ್​ಗಳು ಸಿನಿಮಾ ನೋಡಬೇಕು ಎನ್ನುವ ಕಾತುರವನ್ನು ದ್ವಿಗುಣ ಮಾಡಿದೆ. ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಈಗ ಸಿನಿಮಾ ರಿಲೀಸ್​ಗೂ ಮೊದಲೇ ಸಂಕಷ್ಟ ಒಂದು ಎದುರಾಗಿದೆ ಎನ್ನಲಾಗುತ್ತಿದೆ.

‘ಪುಷ್ಪ’ ಸಿನಿಮಾ ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಡಬ್​ ಆಗಿ ತೆರೆಕಾಣುತ್ತಿದೆ. ಸಿನಿಮಾ ರಿಲೀಸ್​ ಆಗೋಕೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ. ಮೂಲಗಳ ಪ್ರಕಾರ ಮೈತ್ರಿ ಮೂವಿ ಮೇಕರ್ಸ್​ ಹಾಗೂ ಈ ಚಿತ್ರದ ಹಿಂದಿ ಡಬ್ಬಿಂಗ್​ ಹಕ್ಕನ್ನು ಹೊಂದಿರುವ ವ್ಯಕ್ತಿ ಜತೆ ಮನಸ್ತಾಪ ಮೂಡಿದೆ. ಇದನ್ನು ಪರಿಹಾರ ಮಾಡಬೇಕು ಎಂದು ಅಲ್ಲು ಅರ್ಜುನ್​ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಪರಿಹಾರ ಸಿಕ್ಕಿಲ್ಲ.

ಈ ಕಾರಣಕ್ಕೆ ಹಿಂದಿ ಅವತರಣಿಕೆ ತೆರೆಕಾಣೋದು ವಿಳಂಬ ಆಗಬಹುದು ಎನ್ನುವ ಅಭಿಪ್ರಾಯ ಮೂಡುತ್ತಿದೆ. ಈ ವಿಚಾರದಲ್ಲಿ ನಿರ್ದೇಶಕ ಸುಕುಮಾರ್​ ಹಾಗೂ ಅಲ್ಲು ಅರ್ಜುನ್​ ಸಾಕಷ್ಟು ಚಿಂತೆಗೀಡಾಗಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ಸುಕುಮಾರ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ರಂಗಸ್ಥಲಂ’ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  ರಶ್ಮಿಕಾ ಸಿನಿಮಾದ ನಾಯಕಿ.

ಇದನ್ನೂ ಓದಿ: Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ