AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮೊದಲೇ ಸಂಕಷ್ಟಕ್ಕೆ ಸಿಲುಕಿದ ‘ಪುಷ್ಪ’; ಚಿಂತೆಗೀಡಾದ ಅಲ್ಲು ಅರ್ಜುನ್​?

‘ಪುಷ್ಪ’ ಸಿನಿಮಾ ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಡಬ್​ ಆಗಿ ತೆರೆಕಾಣುತ್ತಿದೆ. ಸಿನಿಮಾ ರಿಲೀಸ್​ ಆಗೋಕೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ.

ರಿಲೀಸ್​ಗೂ ಮೊದಲೇ ಸಂಕಷ್ಟಕ್ಕೆ ಸಿಲುಕಿದ ‘ಪುಷ್ಪ’; ಚಿಂತೆಗೀಡಾದ ಅಲ್ಲು ಅರ್ಜುನ್​?
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Nov 07, 2021 | 3:40 PM

Share

ಸುಕುಮಾರ್​ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇದ್ದೇ ಇರುತ್ತದೆ. ಈ ಬಾರಿ ಅವರು ಖ್ಯಾತ ನಟ ಅಲ್ಲು ಅರ್ಜುನ್​ ಜತೆ ಕೈ ಜೋಡಿಸಿದ್ದಾರೆ. ಈ ಕಾರಣಕ್ಕೆ ನಿರೀಕ್ಷೆ ಡಬಲ್​ ಆಗಿದೆ. ಈಗಾಗಲೇ ರಿಲೀಸ್​ ಆಗಿರುವ ಟೀಸರ್​ ಹಾಗೂ ಪೋಸ್ಟರ್​ಗಳು ಸಿನಿಮಾ ನೋಡಬೇಕು ಎನ್ನುವ ಕಾತುರವನ್ನು ದ್ವಿಗುಣ ಮಾಡಿದೆ. ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಈಗ ಸಿನಿಮಾ ರಿಲೀಸ್​ಗೂ ಮೊದಲೇ ಸಂಕಷ್ಟ ಒಂದು ಎದುರಾಗಿದೆ ಎನ್ನಲಾಗುತ್ತಿದೆ.

‘ಪುಷ್ಪ’ ಸಿನಿಮಾ ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಡಬ್​ ಆಗಿ ತೆರೆಕಾಣುತ್ತಿದೆ. ಸಿನಿಮಾ ರಿಲೀಸ್​ ಆಗೋಕೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಇದೆ. ಮೂಲಗಳ ಪ್ರಕಾರ ಮೈತ್ರಿ ಮೂವಿ ಮೇಕರ್ಸ್​ ಹಾಗೂ ಈ ಚಿತ್ರದ ಹಿಂದಿ ಡಬ್ಬಿಂಗ್​ ಹಕ್ಕನ್ನು ಹೊಂದಿರುವ ವ್ಯಕ್ತಿ ಜತೆ ಮನಸ್ತಾಪ ಮೂಡಿದೆ. ಇದನ್ನು ಪರಿಹಾರ ಮಾಡಬೇಕು ಎಂದು ಅಲ್ಲು ಅರ್ಜುನ್​ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಪರಿಹಾರ ಸಿಕ್ಕಿಲ್ಲ.

ಈ ಕಾರಣಕ್ಕೆ ಹಿಂದಿ ಅವತರಣಿಕೆ ತೆರೆಕಾಣೋದು ವಿಳಂಬ ಆಗಬಹುದು ಎನ್ನುವ ಅಭಿಪ್ರಾಯ ಮೂಡುತ್ತಿದೆ. ಈ ವಿಚಾರದಲ್ಲಿ ನಿರ್ದೇಶಕ ಸುಕುಮಾರ್​ ಹಾಗೂ ಅಲ್ಲು ಅರ್ಜುನ್​ ಸಾಕಷ್ಟು ಚಿಂತೆಗೀಡಾಗಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ಸುಕುಮಾರ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ರಂಗಸ್ಥಲಂ’ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  ರಶ್ಮಿಕಾ ಸಿನಿಮಾದ ನಾಯಕಿ.

ಇದನ್ನೂ ಓದಿ: Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ