AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾದರ್ಸ್​ ಡೇ’ ದಿನ ಅಲ್ಲು ಅರ್ಜುನ್​ಗೆ ಮಕ್ಕಳಿಂದ ಸರ್​ಪ್ರೈಸ್​; ಭಾವುಕರಾದ ನಟ

ಅಲ್ಲು ಅರ್ಜುನ್ ಅವರ ಮಕ್ಕಳಾದ ಅಯಾನ್ ಮತ್ತು ಅರ್ಹ, ತಮ್ಮ ತಂದೆಗೆ ಫಾದರ್ಸ್ ಡೇ ಹಬ್ಬದಂದು ಚಾಕೊಲೇಟ್ ಕೇಕ್‌ನಿಂದ ಸರ್‌ಪ್ರೈಸ್ ನೀಡಿದ್ದಾರೆ. ಅಲ್ಲು ಅರ್ಜುನ್ ಈ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ಮಕ್ಕಳಿಗೆ ಧನ್ಯವಾದ ಹೇಳಿದ್ದಾರೆ ಮತ್ತು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದೂ ಹೇಳಿದ್ದಾರೆ. ಅಲ್ಲು ಅರ್ಜುನ್ 'AA22 X A6' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಕಾರಣಕ್ಕಾಗಿ ಮಕ್ಕಳಿಂದ ದೂರವಿದ್ದಾರೆ ಎಂದು ತಿಳಿದುಬಂದಿದೆ.

‘ಫಾದರ್ಸ್​ ಡೇ’ ದಿನ ಅಲ್ಲು ಅರ್ಜುನ್​ಗೆ ಮಕ್ಕಳಿಂದ ಸರ್​ಪ್ರೈಸ್​; ಭಾವುಕರಾದ ನಟ
ಅಲ್ಲು ಅರ್ಜುನ್ ಮತ್ತು ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 15, 2025 | 2:18 PM

Share

ಇಂದು (ಜೂನ್ 15) ವಿಶ್ವ ತಂದೆಯರ ದಿನ. ಈ ವೇಳೆ ಜನ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ತಂದೆಯನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್ (Allu Arjun) ಮಕ್ಕಳಾದ ಅಯಾನ್ ಮತ್ತು ಅರ್ಹ ಕೂಡ ಇದಕ್ಕೆ ಭಿನ್ನವಾಗಿಲ್ಲ. ಅವರು ತಂದೆಗೆ ‘ಫಾದರ್ಸ್ ಡೇ’ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ತಂದೆಗೆ ಒಂದು ಸರ್​ಪ್ರೈಸ್ ಕೊಟ್ಟಿದ್ದಾರೆ. ಈ ವಿಚಾರವನ್ನು ಅಲ್ಲು ಅರ್ಜುನ್ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡು ಧನ್ಯವಾದ ಹೇಳಿದ್ದಾರೆ.

ಅಲ್ಲು ಅರ್ಜುನ್ ಮಕ್ಕಳು ತಂದೆಗಾಗಿ ಚಾಕೋಲೇಟ್ ಕೇಕ್​ನ ಇಟ್ಟಿದ್ದಾರೆ. ಈ ಕೇಕ್​ ಮೇಲೆ ಚೆರಿ ಹಣ್ಣುಗಳನ್ನು ಇಟ್ಟಿದ್ದಾರೆ. ಈ ಕೇಕ್​ನ ಅವರ ತಂದೆಗಾಗಿ ಅವರೇ ಮಾಡಿದಂತೆ ಕಾಣುತ್ತದೆ. ಈ ಕೇಕ್ ಮೇಲೆ ‘ಹ್ಯಾಪಿ ಫಾದರ್ಸ್ ಡೇ’ ಎಂದು ಅವರು ಹೇಳಿದ್ದಾರೆ. ಈ ಫೋಟೋನ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಹಂಚಿಕೊಂಡಿರುವ ಅವರು, ‘ಥ್ಯಾಂಕ್​ ಯೂ ಅಯಾನ್ ಮತ್ತು ಅರ್ಹ. ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಅಲ್ಲು ಅರ್ಜುನ್ ಅವರು ಮಕ್ಕಳನ್ನು ತುಂಬಾನೇ ಪ್ರೀತಿ ಮಾಡುತ್ತಾರೆ. ಅವರು ಆಗಾಗ ಮಕ್ಕಳ ಜೊತೆ ವೆಕೇಶ್ ತೆರಳುತ್ತಾರೆ. ಸಿನಿಮಾ ಕೆಲಸಗಳಲ್ಲಿ ಬಿಡುವು ಮಾಡಿಕೊಂಡು ಅವರು ವಿದೇಶಕ್ಕೆ ತೆರಳುತ್ತಾರೆ. ಈ ವೇಳೆ ಅವರ ಪತ್ನಿ ಸ್ನೇಹಾ ರೆಡ್ಡಿ ಕೂಡ ಸಾಥ್ ನೀಡುತ್ತಾರೆ. ಈಗ ಅಲ್ಲು ಅರ್ಜುನ್ ಅವರು ಸಿನಿಮಾ ಕೆಲಸಗಳ ಕಾರಣಕ್ಕೆ ಮಕ್ಕಳ ಜೊತೆ ಇಲ್ಲ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಅವರು ಮಿಸ್ ಯೂ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಸಲ್ಮಾನ್ ಖಾನ್​ ವೃತ್ತಿ ಜೀವನದ ಅತಿ ಕೆಟ್ಟ ಚಿತ್ರಗಳಿವು..
Image
ದಾಖಲೆ ಬೆಲೆಗೆ ‘ಘಾಟಿ’ ಚಿತ್ರದ ಹಕ್ಕು ಮಾರಾಟ
Image
‘ಸರಿಗಮಪ’ ಗೆಲುವಿನ ಬಳಿಕೆ ಮರೆಯದೇ ಪುನೀತ್ ಸಮಾಧಿಗೆ ಭೇಟಿ ನೀಡಿದ ಶಿವಾನಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

ಈ ಮೊದಲು ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ ಅವರು ಉದ್ದನೆಯ ಗಡ್ಡ ಬಿಟ್ಟಿದ್ದರು. ಈ ಗಡ್ಡದಿಂದ ಅವರಿಗೆ ಸಾಕಷ್ಟು ಸಮಸ್ಯೆ ಆಗಿತ್ತಂತೆ. ಏಕೆಂದರೆ ಮಕ್ಕಳು ಮುತ್ತು ಕೊಡಲು ತಮ್ಮ ಬಳಿ ಬರುತ್ತಲೇ ಇರಲಿಲ್ಲ ಎಂದು ಹೇಳಿದ್ದರು. ಈ ಕಾರಣದಿಂದಲೇ ಗಡ್ಡ ಶೇವ್ ಮಾಡಲು ಅವರು ಬಯಸಿದ್ದರು.

ಇದನ್ನೂ ಓದಿ: ಮಲಯಾಳಂ ಯುವ ನಿರ್ದೇಶಕನಿಗೆ ಕಾಲ್​ಶೀಟ್ ಕೊಟ್ಟ ಅಲ್ಲು ಅರ್ಜುನ್?

ಅಲ್ಲು ಅರ್ಜುನ್ ಅವರು ‘AA22 X A6’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ಟ್ರಾನ್ಸ್​ಫಾರ್ಮೇಷನ್ ಮಾಡಿಕೊಳ್ಳುತ್ತಿದ್ದಾರೆ. ಅವರು ಈ ಚಿತ್ರಕ್ಕಾಗಿ ತಮ್ಮ ಬಾಡಿಯನ್ನು ಬಲ್ಕ್ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಈ ಸಿನಿಮಾಗಾಗಿ ದೀಪಿಕಾ ಪಡುಕೋಣೆ ಎಂಟ್ರಿಕೊಟ್ಟಿದ್ದಾರೆ. ಈ ವಿಡಿಯೋನ ಅವರು ಇತ್ತೀಚೆಗೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:17 pm, Sun, 15 June 25

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್