AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್-ತ್ರಿವಿಕ್ರಂ ಶ್ರೀನಿವಾಸ್ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್​

ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಂ ಶ್ರೀನಿವಾಸ್ ಅವರ ಮುಂಬರುವ ಚಿತ್ರ ‘AA22’ಪೌರಾಣಿಕ ಕಥಾವಸ್ತುವನ್ನು ಹೊಂದಿದೆ. ತ್ರಿವಿಕ್ರಂ ಅವರು ಪ್ರಮುಖ ಪಾತ್ರಗಳಿಗಾಗಿ ತೆಲುಗು ಮತ್ತು ಇತರ ಭಾಷೆಯ ಕಲಾವಿದರನ್ನು ಸಂಪರ್ಕಿಸುತ್ತಿದ್ದಾರೆ. ಈ ಜೋಡಿಯ ಹಿಂದಿನ ಯಶಸ್ಸುಗಳನ್ನು ಗಮನಿಸಿದರೆ, ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇದೆ.

ಅಲ್ಲು ಅರ್ಜುನ್-ತ್ರಿವಿಕ್ರಂ ಶ್ರೀನಿವಾಸ್ ಸಿನಿಮಾ ಬಗ್ಗೆ ಸಿಕ್ತು ದೊಡ್ಡ ಅಪ್​ಡೇಟ್​
ತ್ರಿವಿಕ್ರಂ-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Feb 24, 2025 | 6:59 AM

Share

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಬಳಿಕ ಸೈಲೆಂಟ್ ಆಗಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಅವರ ಬಾಳಲ್ಲಿ ಕಪ್ಪು ಚುಕ್ಕೆ ಆಗಿದೆ. ಈ ಘಟನೆಯಿಂದ ಅವರು ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಕೂಡ ಬಂತು. ಈಗ ಅಲ್ಲು ಅರ್ಜುನ್ ಅವರು ಈ ಘಟನೆ ಮರೆತು ಮುಂದಿನ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್ ಒಂದು ಹೊರ ಬಿದ್ದಿದೆ.

ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಸಿನಿಮಾ ಮಾಡೋದು ಗೊತ್ತೇ ಇದೆ. ಇದಕ್ಕೆ ತಾತ್ಕಾಲಿಕವಾಗಿ ‘AA22’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಈ ಕಾಂಬಿನೇಷನ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಚಿತ್ರದ ಕಡೆಯಿಂದ ಯಾವುದೇ ಅಪ್​ಡೇಟ್ ಬಂದಿರಲಿಲ್ಲ. ಈಗ ನಿರ್ದೇಶಕರು ಸಿನಿಮಾದ ಪ್ರಮುಖ ಕೆಲಸ ಒಂದನ್ನು ಆರಂಭಿಸಿದ್ದಾರೆ ಎನ್ನಲಾಗಿದೆ.

ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರದ ಪಾತ್ರವರ್ಗ ಆಯ್ಕೆಯಲ್ಲಿ ತೊಡಗಿದ್ದಾರೆ. ಹೌದು, ತ್ರಿವಿಕ್ರಂ ಅವರು ಬೇರೆ ಭಾಷೆಯ ಹಾಗೂ ತೆಲುಗು ಭಾಷೆಯ ಕೆಲವು ಕಲಾವಿದರನ್ನು ಭೇಟಿ ಮಾಡಿ ಕಥೆ ಹೇಳಿದ್ದಾರೆ ಎನ್ನಲಾಗಿದೆ. ಈ ಪೈಕಿ ಕೆಲವರು ಸಿನಿಮಾಗೆ ಒಪ್ಪಿಗೆ ಸೂಚಿಸಿದ್ದಾರೆ.

ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಪೌರಾಣಿಕ ಕಥಾ ಹಂದರವನ್ನು ಹೊಂದಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ದೊಡ್ಡ ಕಲಾವಿದರನ್ನು ಆಯ್ಕೆ ಮಾಡುವುದರಲ್ಲಿ ಸದಾ ಮುಂದೆ ಇರುತ್ತಾರೆ. ಈ ಬಾರಿಯೂ ಅದೇ ಟ್ರೆಂಡ್​ನ ಫಾಲೋ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಬಳಿಕ ರಾಮ್ ಚರಣ್​ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ

ತ್ರಿವಿಕ್ರಂ ಶ್ರೀನಿವಾಸ್ ಅವರು ಇತ್ತೀಚೆಗೆ ಲಯ ಕಳೆದುಕೊಂಡಿದ್ದಾರೆ. ಅವರ ನಿರ್ದೇಶನದ ‘ಗುಂಟೂರು ಖಾರಂ’ ಗೆಲುವು ಕಂಡಿಲ್ಲ. ಜುಲಾಯಿ, ಸನ್ ಆಫ್ ಸತ್ಯಮೂರ್ತಿ, ಅಲಾ ವೈಕುಂಠಪುರಮುಲೋ ಸಿನಿಮಾಗಳಲ್ಲಿ ತ್ರಿವಿಕ್ರಂ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ ಎಂದಾಗ ನಿರೀಕ್ಷೆ ಬೆಳೆಯೋದು ಸಹಜ. ಆ ನಿರೀಕ್ಷೆಯನ್ನು ಸಿನಿಮಾ ತಲುಪುತ್ತದೆಯೇ ಎಂಬುದನ್ನು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 24 February 25

Follow Us
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ