Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ವಿವಾದದ ಮಧ್ಯೆಯೇ ಅಲ್ಲು ಅರ್ಜುನ್ ದಿಟ್ಟ ನಿರ್ಧಾರ; ಐದು ವರ್ಷಗಳ ತಪಸ್ಸಿಗೆ ಬ್ರೇಕ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಯಶಸ್ಸಿನ ನಂತರ ಐದು ವರ್ಷಗಳ ಕಾಲ ಬೆಳೆಸಿದ್ದ ಉದ್ದ ಕೂದಲು ಮತ್ತು ಗಡ್ಡವನ್ನು ಕತ್ತರಿಸಲು ನಿರ್ಧರಿಸಿದ್ದಾರೆ. ಇದು ಅವರ ಮಗಳೊಂದಿಗಿನ ಬಾಂಧವ್ಯಕ್ಕೂ ತೊಂದರೆ ಮಾಡಿದೆ ಎಂದು ಅವರು ಹೇಳಿದ್ದರು. ಈಗ ಅವರು ಹೊಸ ಚಿತ್ರಗಳಲ್ಲಿ ಕೆಲಸ ಮಾಡಲಿದ್ದಾರೆ ಮತ್ತು ಹೊಸ ಲುಕ್ ನೊಂದಿಗೆ ಪ್ರೇಕ್ಷಕರ ಮುಂದೆ ಕಾಣಿಸಿಕೊಳ್ಳಲಿದ್ದಾರೆ.

‘ಪುಷ್ಪ 2’ ವಿವಾದದ ಮಧ್ಯೆಯೇ ಅಲ್ಲು ಅರ್ಜುನ್ ದಿಟ್ಟ ನಿರ್ಧಾರ; ಐದು ವರ್ಷಗಳ ತಪಸ್ಸಿಗೆ ಬ್ರೇಕ್
ಅಲ್ಲು ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 31, 2024 | 2:47 PM

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದೆ. ಚಿತ್ರದ ಗಳಿಕೆ 1,800 ಕೋಟಿ ರೂಪಾಯಿ ಆಗುತ್ತಿದೆ. ಅದೇ ರೀತಿ ‘ಪುಷ್ಪ 2’ ಸಿನಿಮಾ ವಿವಾದಗಳ ಮೂಲಕವೂ ಸುದ್ದಿ ಆಗುತ್ತಿದೆ. ಇವುಗಳ ಮಧ್ಯೆ ಅಲ್ಲು ಅರ್ಜುನ್ ಐದು ವರ್ಷಗಳ ತಪಸ್ಸಿಗೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ. ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರಕ್ಕಾಗಿ ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಈಗ ಅಲ್ಲು ಅರ್ಜುನ್ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಈ ಲುಕ್​ಗೆ ಬ್ರೇಕ್ ಹಾಕಬೇಕಿದೆ. ಹೀಗಾಗಿ ಅವರು ಗಡ್ಡ ಟ್ರಿಮ್ ಮಾಡಿ, ಉದ್ದನೆಯ ಕೂದಲಿಗೆ ಕತ್ತರಿ ಪ್ರಯೋಗ ಮಾಡಲಿದ್ದಾರೆ. ಅವರು ಶೀಘ್ರವೇ ಸೋಶಿಯಲ್ ಮೀಡಿಯಾದಲ್ಲಿ ಹೊಸ ಲುಕ್​ನ ಫೋಟೋ ಪೋಸ್ಟ್ ಮಾಡಲಿದ್ದಾರೆ ಎನ್ನಲಾಗಿದೆ.

ಅಲ್ಲು ಅರ್ಜುನ್ ಅವರು ಉದ್ದನೆಯ ಗಡ್ಡ ಹಾಗೂ ಕೂದಲನ್ನು ಬಿಡಲು ಸಾಕಷ್ಟು ಶ್ರಮ ಹಾಕಿದ್ದರು. ಇದು ಅವರಿಗೆ ತಪಸ್ಸಿನ ರೀತಿಯೇ ಆಗಿತ್ತು. ಉದ್ದನೆಯ ಗಡ್ಡ ಬಿಟ್ಟಾಗ ಹೆಚ್ಚಿನ ಕಾಳಜಿ ಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಅದು ಅವರಿಗೆ ಅಭ್ಯಾಸ ಇಲ್ಲದ ಕಾರಣ ಕಿರಿಕಿರಿ ಉಂಟು ಮಾಡಿದ್ದೂ ಇದೆ. ಇದನ್ನು ಅವರು ಸಹಿಸಿಕೊಂಡಿದ್ದಾರೆ. ಈಗ ಆ ಲುಕ್​ಗೆ ಅವರು ಬ್ರೇಕ್ ಹಾಕುತ್ತಿದ್ದಾರೆ.

ಇದನ್ನೂ ಓದಿ: ‘ಅವರನ್ನು ಮಾತ್ರ ಅಪರಾಧಿಯನ್ನಾಗಿ ಮಾಡುವುದು ಸರಿಯಲ್ಲ’; ಅಲ್ಲು ಅರ್ಜುನ್ ಪರ ಬ್ಯಾಟ್ ಬೀಸಿದ ಪವನ್ ಕಲ್ಯಾಣ್

ಅಲ್ಲು ಅರ್ಜುನ್ ಅವರು ಗಡ್ಡಕ್ಕೆ ಕತ್ತರಿ ಹಾಕಲೇಬೇಕಾದ ಅನಿವಾರ್ಯತೆ ಏಕಿದೆ ಎಂಬುದನ್ನು ವಿವರಿಸಿದ್ದರು. ‘ನಾನು ಗಡ್ಡ ಬಿಟ್ಟಿರುವುದರಿಂದ ನನ್ನ ಮಗಳು ನನ್ನ ಹತ್ತಿರಕ್ಕೂ ಬರುತ್ತಿಲ್ಲ. ಅವಳಿಗೆ ಸರಿಯಾಗಿ ಕಿಸ್ ಮಾಡೋಕೂ ಆಗಿಲ್ಲ. ಕಳೆದ ಕೆಲ ವರ್ಷಗಳಿಂದ ಅವಳಿಗೆ ನಾನು ಸರಿಯಾಗಿ ಮುತ್ತು ಕೊಡಲೇ ಇಲ್ಲ. ಹೀಗಾಗಿ, ಮೊದಲು ಗಡ್ಡಕ್ಕೆ ಕತ್ತರಿ ಹಾಕಬೇಕು’ ಎಂದಿದ್ದರು ಅವರು. ಈಗ ‘ಪುಷ್ಪ 2’ ಕೆಲಸಗಳು ಪೂರ್ಣ ಪ್ರಮಾಣದಲ್ಲಿ ಪೂರ್ಣಗೊಂಡಿರುವುದರಿಂದ ಅಲ್ಲು ಅರ್ಜುನ್ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲುಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲುಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ