AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ಹಿಂದೆ ನಟಿ ಮಾಡಿದ ಕುಹಕದ ಮಾತಿನಿಂದ ಸಿಕ್ಸ್ ಪ್ಯಾಕ್​ ಮಾಡಿದ್ದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು 20 ವರ್ಷಗಳ ಹಿಂದೆ ನಟಿಯೊಬ್ಬರ ಕುಹಕದ ಮಾತಿನಿಂದ ಪ್ರೇರಣೆ ಪಡೆದು ಸಿಕ್ಸ್ ಪ್ಯಾಕ್ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ದಕ್ಷಿಣ ಭಾರತದ ನಟರಲ್ಲಿ ಮೊದಲು ಸಿಕ್ಸ್ ಪ್ಯಾಕ್ ತೋರಿಸಿದವರು ತಾವೇ ಎಂದು ಅವರು ಹೇಳಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಅವರು ಇತ್ತೀಚೆಗೆ ವರ್ಲ್ಡ್ ಆಡಿಯೋ ವಿಶ್ಯುವಲ್ ಎಂಟರ್ಟೈನ್ಮೆಂಟ್ ಸಮ್ಮೇಳನದಲ್ಲಿ ಮಾತನಾಡಿದ್ದಾರೆ.

20 ವರ್ಷಗಳ ಹಿಂದೆ ನಟಿ ಮಾಡಿದ ಕುಹಕದ ಮಾತಿನಿಂದ ಸಿಕ್ಸ್ ಪ್ಯಾಕ್​ ಮಾಡಿದ್ದ ಅಲ್ಲು ಅರ್ಜುನ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: May 03, 2025 | 3:53 PM

Share

ನಟ ಅಲ್ಲು ಅರ್ಜುನ್ (Allu Arjun) ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ವರ್ಕೌಟ್ ವಿಚಾರಕ್ಕೆ ಬಂದರೆ ಅವರು ಎಂದಿಗೂ ಜಿಮ್​ನ ಮಿಸ್ ಮಾಡುವುದೇ ಇಲ್ಲ. ಈಗ ಅಲ್ಲು ಅರ್ಜುನ್ ಅವರು ‘ವರ್ಲ್ಡ್ ಆಡಿಯೋ ವಿಶ್ಯುವಲ್ ಎಂಟರ್​ಟೇನ್​ಮೆಂಟ್ ಸಮಿತ್’ನ (ವೇವ್ಸ್​) ಭಾಗವಾದರು. ಈ ವೇಳೆ ಅವರು ತಾವು ಸಿಕ್ಸ್ ಪ್ಯಾಕ್ ಮಾಡಿದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

2 ದಶಕಗಳ ಹಿಂದೆ ಬಾಲಿವುಡ್​ನಲ್ಲಿ ಸಿಕ್ಸ್ ಪ್ಯಾಕ್ ಮಾಡಿ ಮಿಂಚೋ ಟ್ರೆಂಡ್ ಇತ್ತು. ಅನೇಕ ಹೀರೋಗಳು ಶರ್ಟ್​ಲೆಸ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ದಕ್ಷಿಣದವರು ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಆದರೆ, ಈ ಟ್ರೆಂಡ್​ನ ದಕ್ಷಿಣದಲ್ಲಿ ಫಾಲೋ ಮಾಡಿದ ಮೊದಲಿಗರು ತಾವು ಎಂದು ಅಲ್ಲು ಅರ್ಜುನ್ ಹೇಳಿಕೊಂಡಿದ್ದಾರೆ.

‘20 ವರ್ಷಗಳ ಹಿಂದೆ ಬೇರೆ ಯಾರೊಬ್ಬರೂ ಮಾಡಿರದೇ ಇದ್ದಿದ್ದನ್ನು ನಾನು ಮಾಡಿದ್ದೆ.  ದಕ್ಷಿಣದ ಯಾವುದೇ ನಟರು ಸಿಕ್ಸ್ ಪ್ಯಾಕ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಟಿಯೊಬ್ಬರು ಹೇಳಿದ್ದರು. ಇದನ್ನು ನಾನು ಮೋಟಿವ್ ಆಗಿ ತೆಗೆದುಕೊಂಡೆ. ಸಿಕ್ಸ್ ಪ್ಯಾಕ್ ಮಾಡಿದೆ. ನಾನು ಅದನ್ನು ಮಾಡಿದ್ದು ಜನರಿಗಾಗಿ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬುಡಕಟ್ಟು ಜನಾಂಗದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ವಿಜಯ್
Image
‘ಕೆಜಿಎಫ್ 2’ ರಿಲೀಸ್ ಆಗಿ 3 ವರ್ಷವಾದರೂ ನಿಂತಿಲ್ಲ ಟಾಕ್
Image
ಅಜಯ್ ದೇವಗನ್ ನಟನೆಯ ‘ರೇಡ್ 2’ ಒಟಿಟಿಗೆ ಯಾವಾಗ? ಮೊದಲ ದಿನದ ಗಳಿಕೆ ಎಷ್ಟು?
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?

ಅಚ್ಚರಿಯ ಸಂಗತಿ ಎಂದರೆ ಈ ರೀತಿ ಹೇಳಿಕೆ ಕೊಟ್ಟಿದ್ದು ಅಲ್ಲು ಅರ್ಜುನ್ ಜೊತೆ ನಟಿಸಿದ ಹೀರೋಯಿನ್. ಆದರೆ, ಅವರು ಯಾರು ಎಂಬುದನ್ನು ಅಲ್ಲು ಅರ್ಜುನ್ ಅವರು ರಿವೀಲ್ ಮಾಡಿಲ್ಲ.  ಅಲ್ಲು ಅರ್ಜುನ್ ಅವರು ‘ಗಂಗೋತ್ರಿ’, ‘ಆರ್ಯ’, ‘ಬನ್ನಿ’ ಹ್ಯಾಪಿ ಸಿನಿಮಾಗಳಲ್ಲಿ ರೊಮ್ಯಾಂಟಿಕ್ ಹೀರೋ ಪಾತ್ರ ಮಾಡಿದ್ದರು. ಆ ಬಳಿಕದ ಪಾತ್ರಗಳಲ್ಲಿ ಅವರು ಶರ್ಟ್​ಲೆಸ್ ಆಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ‘ನಮಗೆ ಈಗ ವೇದಿಕೆ ಸಿಕ್ಕಿದೆ’; ವೇವ್ಸ್ ಬಗ್ಗೆ ಅಲ್ಲು ಅರ್ಜುನ್ ಮಾತು

ಅಲ್ಲು ಅರ್ಜುನ್ ಅವರು 2020ರಲ್ಲಿ ‘ಅಲಾ ವೈಕುಂಟಪುರಮುಲೋ’ ಸಿನಿಮಾ ಮಾಡಿದರು. ಆ ಬಳಿಕ ತಮ್ಮ ಜೀವನದ ಅತ್ಯಮೂಲ್ಯ ಐದು ವರ್ಷವರನ್ನು ‘ಪುಷ್ಪ’ ಹಾಗೂ ‘ಪುಷ್ಪ 2’ ಚಿತ್ರಕ್ಕಾಗಿ ಮೀಸಲಿಟ್ಟರು. ಈಗ ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು