AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಬರೋ ಈ ಜಾಗಕ್ಕೆ ಅಭಿಮಾನಿಗಳಿಗೆ ಇಲ್ಲ ಎಂಟ್ರಿ

ಅಲ್ಲು ಅರ್ಜುನ್ ಅವರು ತಮ್ಮ ತಂದೆ ಅಲ್ಲು ಅರವಿಂದ್ ನಿರ್ಮಿಸಿರುವ "ತಾಂಡೇಲ್" ಚಿತ್ರದ ಪ್ರಿ-ರಿಲೀಸ್ ಈವೆಂಟ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, "ಸಂಧ್ಯಾ" ಘಟನೆಯ ನಂತರ ಭದ್ರತಾ ಕಾರಣಗಳಿಂದ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯ ನಡುವೆ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಅಲ್ಲು ಅರ್ಜುನ್ ಬರೋ ಈ ಜಾಗಕ್ಕೆ ಅಭಿಮಾನಿಗಳಿಗೆ ಇಲ್ಲ ಎಂಟ್ರಿ
Thandel Movie
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 01, 2025 | 2:40 PM

Share

ಅಲ್ಲು ಅರ್ಜುನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದವರು. ಆದರೆ, ‘ಸಂಧ್ಯಾ’ ಥಿಯೇಟರ್ ಕಾಲ್ತುಳಿತ ಪ್ರಕರಣ ಅವರ ಜೀವನಕ್ಕೆ ಕಪ್ಪು ಚುಕ್ಕೆ ಆಗಿ ಉಳಿದು ಹೋಗಿದೆ. ಈ ಬಗ್ಗೆ ಅವರಿಗೆ ಬೇಸರ ಇದೆ. ಈ ಘಟನೆ ಬಳಿಕ ಅವರು ಪೊಲೀಸ್ ಠಾಣೆಗೆ ತೆರಳಿದ್ದು ಬಿಟ್ಟರೆ ಮತ್ಯಾವುದೇ ಈವೆಂಟ್ನಲ್ಲಿ ಪಾಲ್ಗೊಂಡಿಲ್ಲ. ಈಗ ಅವರು ‘ತಾಂಡೇಲ್’ ಚಿತ್ರದ ಪ್ರೀ ರಿಲೀಸ್ ಈವೆಂಟ್ನಲ್ಲಿ ಭಾಗವಹಿಸಲು ರೆಡಿ ಆಗಿದ್ದಾರೆ. ಆದರೆ, ಇಲ್ಲಿ ಅಭಿಮಾನಿಗಳಿಗೆ ಎಂಟ್ರಿ ಇಲ್ಲ ಎನ್ನಲಾಗಿದೆ

ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ‘ತಾಂಡೇಲ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಾಗ ಚೈತನ್ಯ ಹೀರೋ ಆದರೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರದ ಪ್ರೀ ರಿಲೀಸ್ ಈವೆಂಟ್ಗೆ ಮಗನಿಗೆ ಆಹ್ವಾನ ನೀಡಿದ್ದಾರೆ ಅಲ್ಲು ಅರವಿಂದ್. ಇದಕ್ಕೆ ಅವರು ಕೂಡ ಒಪ್ಪಿದ್ದು, ಈವೆಂಟ್ಗೆ ಬರಲು ರೆಡಿ ಆಗಿದ್ದಾರೆ. ಇಂದು (ಫೆಬ್ರವರಿ 1) ಸಂಜೆ ಈವೆಂಟ್ ನಡೆಯಲಿದೆ.

‘ತಾಂಡೇಲ್’ಗೆ ಅಲ್ಲು ಅರ್ಜುನ್ ಅವರು ಅತಿಥಿ. ಹೀಗಾಗಿ, ಪೊಲೀಸರು ಈ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾ ಇದ್ದಾರೆ. ಹೊರಗೆ ಮಾಡಿದರೆ ಸಮಸ್ಯೆ ಆಗುತ್ತದೆ ಎಂಬ ಕಾರಣಕ್ಕೆ ಇದನ್ನು ಅನ್ನಪೂರ್ಣ ಸ್ಟುಡಿಯೋ ಒಳಗೆ ಮಾಡಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದರು. ಆದರೆ, ಇದಕ್ಕೆ ಅಭಿಮಾನಿಗಳಿಗೆ ಎಂಟ್ರಿ ಇಲ್ಲ ಎಂಬ ವಿಚಾರ ಅವರ ತಿಳಿದ ಬಳಿಕ ಅವರಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ:ಆಮಿರ್ ಖಾನ್ ಜತೆ ‘ಗಜಿನಿ 2’ ಸಿನಿಮಾ ಮಾಡಲು ಮುಂದಾದ ಅಲ್ಲು ಅರ್ಜುನ್ ತಂದೆ

ಅಭಿಮಾನಿಗಳನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ಮಾಡೋದು ಎಂದರೆ ಅಲ್ಲು ಅರ್ಜುನ್ ಅವರಿಗೆ ಚಿಂತೆಯ ವಿಚಾರ ಆಗಿದೆ. ಅವರು ಈ ಬಗ್ಗೆ ಭಯ ಬೀಳುತ್ತಿದ್ದಾರೆ. ಈ ಕಾರಣದಿಂದಲೇ ಯಾವುದೇ ಅಭಿಮಾನಿಗಳಿಗೆ ಒಳಗೆ ಬರೋಕೆ ಅವಕಾಶ ಇಲ್ಲ ಎನ್ನಲಾಗಿದೆ. ಪೊಲೀಸರ ಸಹಾಯ ಕೂಡ ಕೇಳಲಾಗಿದ್ದು, ಹೊರಗೆ ಅಭಿಮಾನಿಗಳು ನೆರೆಯದಂತೆ ನೋಡಿಕೊಳ್ಳಲಾಗುತ್ತಿದೆ.

ಅಲ್ಲು ಅರವಿಂದ್ ನಿರ್ಮಾಣದ ‘ತಾಂಡೇಲ್’ ಚಿತ್ರ ನಾಗ ಚೈತನ್ಯ ವೃತ್ತಿ ಜೀವನಕ್ಕೂ ಮುಖ್ಯ ಎನಿಸಿದೆ. ಅವರಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಫೆಬ್ರವರಿ 7ರಂದು ಸಿನಿಮಾ ರಿಲೀಸ್ ಆಗಲಿದೆ. ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿನ ಒಟ್ಟಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ