AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರ ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್ ಹೈದರಾಬಾದ್‌ನಲ್ಲಿ ಶುರುವಾಗಿದೆ. ಅತ್ಯಾಧುನಿಕ ಸೌಲಭ್ಯಗಳಿರುವ ಈ ಥಿಯೇಟರ್‌ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಚಾಲನೆ ನೀಡಿದರು. ವಿಶೇಷವೆಂದರೆ, ಇಲ್ಲಿನ ವಾಲ್ ಆಫ್ ಫೇಮ್‌ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋಗಳಿವೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ
ಆಲ್ಲು ಅರ್ಜುನ್ ಸಿನಿಮಾಸ್
ರಾಜೇಶ್ ದುಗ್ಗುಮನೆ
|

Updated on: Mar 13, 2026 | 8:35 AM

Share

ಅಲ್ಲು ಅರ್ಜುನ್ ಅವರು (Allu Arjun) ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್​​ನ ಹೈದರಾಬಾದ್​​ನಲ್ಲಿ ಆರಂಭಿಸಿದ್ದಾರೆ. ಐಷಾರಾಮಿ ಆಸನ ವ್ಯವಸ್ಥೆ ಹಾಗೂ ಅದ್ಭುತ ಸಿನಿಮಾ ವೀಕ್ಷಣೆ ಅನುಭವ ನೀಡುವ ಈ ಮಲ್ಟಿಪ್ಲೆಕ್ಸ್ ಗುರುವಾರ (ಮಾರ್ಚ್ 12) ಉದ್ಘಾಟನೆ ಆಯಿತು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಈ ಥಿಯೇಟರ್​​ನ ವಾಲ್​​ ಆಫ್ ಫೇಮ್​ ಅಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರು ಹೈದರಾಬಾದ್​​ನವರು. ಅಲ್ಲಿಯ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಟಾಲಿವುಡ್​​ನ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮವನ್ನು ಅಲ್ಲು ಅರ್ಜುನ್ ಆರಂಭಿಸಿದ್ದಾರೆ. ಇದು ಹೈದರಾಬಾದ್​ನಲ್ಲಿರೋ ವಿಜಯ್ ದೇವರಕೊಂಡ ಒಡೆತನದ ಎವಿಡಿ ಸಿನಿಮಾಸ್​​ ಹಾಗೂ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​ಗೆ ಸ್ಪರ್ಧೆ ಒಡ್ಡಲಿದೆ.

ಇನ್ನು, ಅಲ್ಲು ಅರ್ಜುನ್ ಅವರು ‘ಅಲ್ಲು ಸಿನಿಮಾಸ್’ ಅಲ್ಲಿ ವಾಲ್ ಆಫ್ ಫೇಮ್ ನಿರ್ಮಿಸಿದ್ದಾರೆ. ಇದರಲ್ಲಿ ಹಲವು ನಿರ್ದೇಶಕರ ಫೋಟೋಗಳನ್ನು ಹಾಕಲಾಗಿದೆ. ತೆಲುಗು ನಿರ್ದೇಶಕರಾದ ಸುಕುಮಾರ್, ತ್ರಿವಿಕ್ರಂ ಶ್ರೀನಿವಾಸ್, ರಾಜಮೌಳಿ, ತಮಿಳಿನ ವೆಟ್ರಿ ಮಾರನ್, ಮಣಿ ರತ್ನಂ, ಅಟ್ಲಿ, ಹಿಂದಿಯಲ್ಲಿ ಸಂದೀಪ್ ರೆಡ್ಡಿ ವಂಗ, ರಾಜ್​​ಕುಮಾರ್ ಹಿರಾನಿ ಇದ್ದಾರೆ.

ಇದನ್ನೂ ಓದಿ: ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಕನ್ನಡದ ಇಬ್ಬರು ನಿರ್ದೇಶಕರ ಫೋಟೋಗಳನ್ನು ಹಾಕಲಾಗಿದೆ. ಅದುವೇ ಪ್ರಶಾಂತ್ ನೀಲ್ ಹಾಗೂ ರಿಷಬ್ ಶೆಟ್ಟಿ. ಇದು ಕನ್ನಡಿಗರ ಪಾಲಿಗೆ ಹೆಮ್ಮೆ ಎನಿಸಿದೆ. ಇಬ್ಬರೂ ನಿರ್ದೇಶಕರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿರುವುದರಿಂದ ಇವರ ಫೋಟೋಗಳನ್ನು ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ