AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ
ಆಲ್ಟಿನಾ
ರಾಜೇಶ್ ದುಗ್ಗುಮನೆ
|

Updated on: Aug 04, 2023 | 10:05 AM

Share

ಅಮೆರಿಕದ ಡಿಸೈನರ್, ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾ ಚಿನಾಸಿಗೆ (Altina Schinasi) ಇಂದು (ಆಗಸ್ಟ್ 4) ಜನ್ಮದಿನ. ಈ ವಿಶೇಷ ದಿನದಂದು ಗೂಗಲ್​ ಕಡೆಯಿಂದ ಅವರಿಗೆ ಗೌರವ ಸಲ್ಲಿಕೆ ಆಗಿದೆ. ಡೂಡಲ್​​ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಫ್ಯಾಷನ್​ ಲೋಕಕ್ಕೆ ಅವರು ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸೋಶಿಯಲ್ ಮೀಡಿಯಾದಲ್ಲೂ (Social Media) ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. 1907ರಲ್ಲಿ ಆಲ್ಟಿನಾ ಜನಿಸಿದ್ದರು. ಅವರು ಹುಟ್ಟಿದ್ದು ಅಮೆರಿಕದ ನ್ಯೂಯಾರ್ಕ್​ ನಗರದಲ್ಲಿ.

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ‘ಜಾರ್ಜ್ ಗ್ರೋಸ್ಜ್ ಇಂಟರ್​ಗಂಮ್’ ಹೆಸರಿನ ಕಿರು ಸಾಕ್ಷ್ಯಚಿತ್ರವನ್ನು  ನಿರ್ಮಾಣ ಮಾಡಿದರು. ಈ ಕಿರುಚಿತ್ರ 1960ರಲ್ಲಿ ರಿಲೀಸ್ ಆಯಿತು. ಇದು ಅಕಾಡೆಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಕಿರುಸಾಕ್ಷ್ಯ ಚಿತ್ರವನ್ನು ಅಕಾಡೆಮಿಯವರು ಸಂರಕ್ಷಿಸಿ ಇಟ್ಟಿದ್ದಾರೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ಈ ಬಾರಿಯ ದಸರಾ ಹಬ್ಬ ಭರ್ಜರಿ; ಯಾವೆಲ್ಲ ಚಿತ್ರಗಳು ರಿಲೀಸ್?

ಮಹಿಳೆಯರಿಗೆ ಹೆಚ್ಚಿನ ಡಿಸೈನ್​ನ ಕನ್ನಡಕ ಇಲ್ಲ ಎಂಬುದು ಆಲ್ಟಿನಾ ಗಮನಿಸಿದರು. ಈ ಕಾರಣಕ್ಕೆ ಅವರು ಬೆಕ್ಕಿನ ಕಣ್ಣಿನ ಮಾದರಿಯ ಕನ್ನಡಕವನ್ನು ಕಂಡು ಹಿಡಿದರು. ಇಂದಿಗೂ ಈ ಕನ್ನಡಕ ಸಾಕಷ್ಟು ಖ್ಯಾತಿ ಪಡೆದುಕೊಂಡಿದೆ. ಇವರು ಅನೇಕ ಮಹಿಳೆಯರಿಗೆ ಸ್ಫೂರ್ತಿ ಆಗಿದ್ದಾರೆ. 1999ರಲ್ಲಿ ಆಗಸ್ಟ್ 19ರಂದು ಮೃತಪಟ್ಟರು. ಆಗ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ನಮ್ಮನ್ನು ಅಗಲಿದರೂ ಅವರು ಮಾಡಿದ ಕೆಲಸ ಹಾಗೆಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ