AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ
ಆಲ್ಟಿನಾ
ರಾಜೇಶ್ ದುಗ್ಗುಮನೆ
|

Updated on: Aug 04, 2023 | 10:05 AM

Share

ಅಮೆರಿಕದ ಡಿಸೈನರ್, ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾ ಚಿನಾಸಿಗೆ (Altina Schinasi) ಇಂದು (ಆಗಸ್ಟ್ 4) ಜನ್ಮದಿನ. ಈ ವಿಶೇಷ ದಿನದಂದು ಗೂಗಲ್​ ಕಡೆಯಿಂದ ಅವರಿಗೆ ಗೌರವ ಸಲ್ಲಿಕೆ ಆಗಿದೆ. ಡೂಡಲ್​​ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಫ್ಯಾಷನ್​ ಲೋಕಕ್ಕೆ ಅವರು ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸೋಶಿಯಲ್ ಮೀಡಿಯಾದಲ್ಲೂ (Social Media) ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. 1907ರಲ್ಲಿ ಆಲ್ಟಿನಾ ಜನಿಸಿದ್ದರು. ಅವರು ಹುಟ್ಟಿದ್ದು ಅಮೆರಿಕದ ನ್ಯೂಯಾರ್ಕ್​ ನಗರದಲ್ಲಿ.

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ‘ಜಾರ್ಜ್ ಗ್ರೋಸ್ಜ್ ಇಂಟರ್​ಗಂಮ್’ ಹೆಸರಿನ ಕಿರು ಸಾಕ್ಷ್ಯಚಿತ್ರವನ್ನು  ನಿರ್ಮಾಣ ಮಾಡಿದರು. ಈ ಕಿರುಚಿತ್ರ 1960ರಲ್ಲಿ ರಿಲೀಸ್ ಆಯಿತು. ಇದು ಅಕಾಡೆಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಕಿರುಸಾಕ್ಷ್ಯ ಚಿತ್ರವನ್ನು ಅಕಾಡೆಮಿಯವರು ಸಂರಕ್ಷಿಸಿ ಇಟ್ಟಿದ್ದಾರೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ಈ ಬಾರಿಯ ದಸರಾ ಹಬ್ಬ ಭರ್ಜರಿ; ಯಾವೆಲ್ಲ ಚಿತ್ರಗಳು ರಿಲೀಸ್?

ಮಹಿಳೆಯರಿಗೆ ಹೆಚ್ಚಿನ ಡಿಸೈನ್​ನ ಕನ್ನಡಕ ಇಲ್ಲ ಎಂಬುದು ಆಲ್ಟಿನಾ ಗಮನಿಸಿದರು. ಈ ಕಾರಣಕ್ಕೆ ಅವರು ಬೆಕ್ಕಿನ ಕಣ್ಣಿನ ಮಾದರಿಯ ಕನ್ನಡಕವನ್ನು ಕಂಡು ಹಿಡಿದರು. ಇಂದಿಗೂ ಈ ಕನ್ನಡಕ ಸಾಕಷ್ಟು ಖ್ಯಾತಿ ಪಡೆದುಕೊಂಡಿದೆ. ಇವರು ಅನೇಕ ಮಹಿಳೆಯರಿಗೆ ಸ್ಫೂರ್ತಿ ಆಗಿದ್ದಾರೆ. 1999ರಲ್ಲಿ ಆಗಸ್ಟ್ 19ರಂದು ಮೃತಪಟ್ಟರು. ಆಗ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ನಮ್ಮನ್ನು ಅಗಲಿದರೂ ಅವರು ಮಾಡಿದ ಕೆಲಸ ಹಾಗೆಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್