AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಲಾ ಪೌಲ್ ಮಾಜಿ ಬಾಯ್​ಫ್ರೆಂಡ್ ಅರೆಸ್ಟ್; ‘ಹೆಬ್ಬುಲಿ’ ನಟಿ ಮಾಡಿದ ಆರೋಪಗಳು ಒಂದೆರಡಲ್ಲ

ಅಮಲಾ ಅವರು 2014ರಲ್ಲಿ ನಿರ್ದೇಶಕ ಎ.ಎಲ್. ವಿಜಯ್ ಅವರನ್ನು ಮದುವೆ ಆದರು. ಆದರೆ, ಇವರ ನಡುವೆ ಹೊಂದಾಣಿಕೆ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಇಬ್ಬರೂ 2017ರಲ್ಲಿ ವಿಚ್ಛೇದನ ಪಡೆದುಕೊಂಡರು. ಅಮಲಾ ನಂತರ ಮತ್ತೆ ಡೇಟಿಂಗ್ ಆರಂಭಿಸಿದ್ದರು.

ಅಮಲಾ ಪೌಲ್ ಮಾಜಿ ಬಾಯ್​ಫ್ರೆಂಡ್ ಅರೆಸ್ಟ್; ‘ಹೆಬ್ಬುಲಿ’ ನಟಿ ಮಾಡಿದ ಆರೋಪಗಳು ಒಂದೆರಡಲ್ಲ
ಅಮಲಾ-ಭವಿಂದರ್
TV9 Web
| Edited By: |

Updated on: Aug 30, 2022 | 10:05 PM

Share

ನಟಿ ಅಮಲಾ ಪೌಲ್ (Amala Paul) ಅವರು ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಮಲಯಾಳಂ, ತಮಿಳು, ತೆಲುಗು ಸಿನಿಮಾಗಳಲ್ಲಿ ಅಮಲಾ ನಟಿಸಿದ್ದಾರೆ. ಈಗ ಅವರು ಸುದ್ದಿಯಲ್ಲಿದ್ದಾರೆ. ಹಾಗಂತ ಇದು ಸಿನಿಮಾ ವಿಚಾರ ಅಲ್ಲ. ಅಮಲಾ ಸುದ್ದಿ ಆಗೋಕೆ ಕಾರಣ ಅವರ ಮಾಜಿ ಬಾಯ್​ಫ್ರೆಂಡ್. ಅವರ ವಿರುದ್ಧ ದೂರನ್ನು ಕೂಡ ನೀಡಿದ್ದಾರೆ ಅಮಲಾ. ಈ ಸಂಬಂಧ ತಮಿಳುನಾಡು ಪೊಲೀಸರು (Tamil Nadu Police) ಪ್ರಕರಣ ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಅಮಲಾ ಅವರು 2014ರಲ್ಲಿ ನಿರ್ದೇಶಕ ಎ.ಎಲ್. ವಿಜಯ್ ಅವರನ್ನು ಮದುವೆ ಆದರು. ಆದರೆ, ಇವರ ನಡುವೆ ಹೊಂದಾಣಿಕೆ ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಇಬ್ಬರೂ 2017ರಲ್ಲಿ ವಿಚ್ಛೇದನ ಪಡೆದುಕೊಂಡರು. ಪರಸ್ಪರ ಸಮ್ಮತಿಯೊಂದಿಗೆ ಇಬ್ಬರೂ ಬೇರೆ ಆಗಿದ್ದರು. ಎರಡು ವರ್ಷಗಳ ಕಾಲ ಸೈಲೆಂಟ್ ಇದ್ದ ಅಮಲಾ ನಂತರ ಮತ್ತೆ ಡೇಟಿಂಗ್ ಆರಂಭಿಸಿದ್ದರು.

ಮುಂಬೈ ಮೂಲದ ಸಿಂಗರ್ ಭವಿಂದರ್ ಸಿಂಗ್ ಜತೆ ಅಮಲಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. 2020ರಲ್ಲಿ ಭವಿಂದರ್ ಅವರು ಅಮಲಾ ಜತೆ ಮದುವೆ ಆಗುತ್ತಿರುವ ರೀತಿಯಲ್ಲಿ ಫೋಟೋ ಪೋಸ್ಟ್ ಮಾಡಿದ್ದರು. ನಂತರ ಇದನ್ನು ಡಿಲೀಟ್ ಮಾಡಿದ್ದರು. ಆದರೆ, ಈ ವಿಚಾರ ಬೇರೆಯದೇ ತಿರುವು ಪಡೆದುಕೊಂಡಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಅಮಲಾ ಕೇಸ್ ದಾಖಲು ಮಾಡಿದ್ದರು.

‘ಭವಿಂದರ್ ನನ್ನನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾನೆ. ನನ್ನ ಅನುಮತಿ ಇಲ್ಲದೆ ಫೋಟೋ ಪೋಸ್ಟ್ ಮಾಡಲಾಗಿದೆ’ ಎಂದು ನಟಿ ಆರೋಪಿಸಿದ್ದರು. ಮದುವೆ ವಿಚಾರದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದರು. ‘ನಾನು ಮದುವೆ ಆಗಿಲ್ಲ. ಆ ಥೀಮ್​ನಲ್ಲಿ ನಾವು ಫೋಟೋಶೂಟ್ ಮಾಡಿಸಿದ್ದೆವು ಅಷ್ಟೇ’ ಎಂಬುದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: Amala Paul: ನಿಸರ್ಗದ ಮಡಿಲಿನಲ್ಲಿ ‘ಹೆಬ್ಬುಲಿ’ ಬೆಡಗಿ; ಫೋಟೋಗಳಿಗೆ ಮಸ್ತ್ ಪೋಸ್ ನೀಡಿದ ಅಮಲಾ ಪೌಲ್

ಈಗ ಅಮಲಾ ಪೌಲ್​ಗೆ ಮೋಸ ಆಗಿದೆ. ಅಮಲಾ ಹಾಗೂ ಭವಿಂದರ್ ಜತೆಯಾಗಿ ಒಂದು ನಿರ್ಮಾಣ ಸಂಸ್ಥೆ ಆರಂಭಿಸಿದ್ದರು. ಅಮಲಾ ಕೂಡ ಸಾಕಷ್ಟು ಹಣವನ್ನು ಹೂಡಿಕೆ ಮಾಡಿದ್ದರು. ಆದರೆ, ಅಮಲಾ ಪೌಲ್​ ಹಣವನ್ನು ಭವಿಂದರ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದಾಗ ಖಾಸಗಿ ಫೋಟೋಗಳನ್ನು ಲೀಕ್ ಮಾಡುವ ಬೆದರಿಕೆ ಹಾಕಿದ್ದಾರೆ ಭವಿಂದರ್. ಈ ಕಾರಣಕ್ಕೆ ಅಮಲಾ ದೂರು ದಾಖಲು ಮಾಡಿದ್ದರು. ಹೀಗಾಗಿ, ಭವಿಂದರ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ