AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮೂವರಾಗುತ್ತಿದ್ದೇವೆ, ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಹೆಬ್ಬುಲಿ ನಟಿ

Amala Paul: ನಟಿ ಅಮಲಾ ಪೌಲ್ ತಾಯಿಯಾಗಲಿರುವ ಖುಷಿ ವಿಚಾರವನ್ನು ಹಂಚಿಕೊಂಡಿದ್ದಾರೆ. ಅಮಲಾ ಪೌಲ್​ 2023ರ ನವೆಂಬರ್​ನಲ್ಲಿ ಗೆಳೆಯ ಜಗತ್ ದೇಸಾಯಿ ಜೊತೆ ವಿವಾಹವಾಗಿದ್ದರು.

ಇಬ್ಬರು ಮೂವರಾಗುತ್ತಿದ್ದೇವೆ, ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಹೆಬ್ಬುಲಿ ನಟಿ
ಮಂಜುನಾಥ ಸಿ.
|

Updated on:Jan 03, 2024 | 9:33 PM

Share

ಕನ್ನಡದ ‘ಹೆಬ್ಬುಲಿ’ (Hebbuli) ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಅಮಲಾ ಪೌಲ್ ಖುಷಿ ವಿಚಾರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಟಿ ಅಮಲಾ ಪೌಲ್ ಶೀಘ್ರವೇ ತಾಯಿಯಾಗುತ್ತಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿರುವ ನಟಿ ಅಮಲಾ ಪೌಲ್, ‘ನಾವು ಇಬ್ಬರು ಮೂವರಾಗಲಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ನಟಿ ಅಮಲಾ ಪೌಲ್, 2023ರ ನವೆಂಬರ್ ತಿಂಗಳಲ್ಲಿ ಬಾಯ್​ಫ್ರೆಂಡ್ ಜಗತ್ ದೇಸಾಯಿ ಅವರೊಟ್ಟಿಗೆ ಕೊಚ್ಚಿಯಲ್ಲಿ ವಿವಾಹವಾಗಿದ್ದರು ಇದು ಅವರ ಎರಡನೇ ಮದುವೆಯಾಗಿತ್ತು. ಇದೀಗ ಈ ದಂಪತಿ ಪೋಷಕರಾಗುತ್ತಿದ್ದಾರೆ. ತಾಯಿಯಾಗುತ್ತಿರುವ ಖುಷಿಯ ವಿಚಾರ ಹಂಚಿಕೊಂಡಿರುವ ಇನ್​ಸ್ಟಾ ಪೋಸ್ಟ್​ನಲ್ಲಿ ತಮ್ಮ ಹಾಗೂ ಜಗತ್ ದೇಸಾಯಿಯ ಚಿತ್ರಗಳನ್ನು ಸಹ ನಟಿ ಅಮಲಾ ಪೌಲ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಎರಡನೇ ಮದುವೆಯಾದ ಹೆಬ್ಬುಲಿ ನಟಿ ಅಮಲಾ ಪೌಲ್

ಅಮಲಾ ಪೌಲ್ 2011ರಲ್ಲಿ ತಮಿಳು ಸಿನಿಮಾ ನಿರ್ದೇಶಕ ಎಎಲ್ ವಿಜಯ್ ಜೊತೆ ಪ್ರೀತಿಯಲ್ಲಿದ್ದರು. ಬಳಿಕ ಈ ಇಬ್ಬರು 2014ರಲ್ಲಿ ವಿವಾಹವಾದರು. ಆದರೆ ವಿಜಯ್​ರ ಪೋಷಕರೊಟ್ಟಿಗೆ ಅಮಲಾ ಪೌಲ್​ಗೆ ಭಿನ್ನಾಭಿಪ್ರಾಯ ಏರ್ಪಟ್ಟ ಕಾರಣ 2017ರಲ್ಲಿ ಈ ಜೋಡಿ ಬೇರಾಯಿತು. ಇವರಿಗೆ ಮಕ್ಕಳಿರಲಿಲ್ಲ. ಬಳಿಕ ಅಮಲಾ ಹಾಗೂ ಜಗತ್ ದೇಸಾಯಿ ಕೆಲ ಕಾಲ ಪ್ರೀತಿಯಲ್ಲಿದ್ದರು. ಅಂತಿಮವಾಗಿ 2023ರ ನವೆಂಬರ್ ತಿಂಗಳಲ್ಲಿ ಇಬ್ಬರೂ ಕೊಚ್ಚಿಯಲ್ಲಿ ವಿವಾಹವಾದರು.

ಮೂಲತಃ ಕೇರಳದವರಾದ ಅಮಲಾ ಪೌಲ್, ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. 2009ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅಮಲಾ, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುದೀಪ್ ನಟಿಸಿದ್ದ ‘ಹೆಬ್ಬುಲಿ’ ಸಿನಿಮಾಕ್ಕೆ ಇವರೇ ನಾಯಕಿ. ಹಲವು ವೆಬ್ ಸರಣಿಗಳಲ್ಲಿಯೂ ಸಹ ಅಮಲಾ ಪೌಲ್ ಇತ್ತೀಚೆಗೆ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Wed, 3 January 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!