AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು.

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​
ಅಕ್ಕಿನೇನಿ ನಾಗಾರ್ಜುನ-ಅಮಲಾ
TV9 Web
| Edited By: |

Updated on: Oct 22, 2021 | 1:50 PM

Share

ಅಕ್ಕಿನೇನಿ ನಾಗಾರ್ಜುನ ವಯಸ್ಸು 60 ದಾಟಿದೆ. ಆದರೆ, ಇನ್ನೂ ಅವರು ಯಂಗ್​ ಆಗಿದ್ದಾರೆ. ತೆರೆಮೇಲೆ ಯುವ ಕಲಾವಿದರನ್ನೂ ನಾಚಿಸುವಂತೆ ನಟಿಸುತ್ತಾರೆ. ಅವರ ಸಿನಿಮಾದಲ್ಲಿ ಹೀರೋಯಿನ್​ ಆಯ್ಕೆಗೂ ಮಹತ್ವ ನೀಡಲಾಗುತ್ತದೆ. ಈಗ ‘ಗೋಸ್ಟ್​’​  ಸಿನಿಮಾದಿಂದ ಕಾಜಲ್​ ಅಗರ್​ವಾಲ್​ ಹಿಂದೆ ಸರಿದಿದ್ದಾರೆ. ಇದಕ್ಕೆ ಈಗ ಅಮಲಾ ಪೌಲ್​ ಎಂಟ್ರಿ ಆಗಿದೆ. ಈ ಸಿನಿಮಾದಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ಅವರು ದೊಡ್ಡ ಮೊತ್ತದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು. ಈ ಕಾರಣಕ್ಕೆ ಹೊಸ ನಟಿಯ ಆಯ್ಕೆ ಚಿತ್ರತಂಡಕ್ಕೆ ಅನಿವಾರ್ಯವಾಗಿತ್ತು. ಈ ವೇಳೆ ನಿರ್ದೇಶಕ ಪ್ರವೀಣ್​ ಅವರು ಅಮಾಲಾಗೆ ಆಫರ್​ ನೀಡಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ನಾಯಕ-ನಾಯಕಿ ಉಳಿದುಕೊಳ್ಳುವ ಪರಿಸ್ಥಿತಿ ಬಂದೊದಗುತ್ತದೆ. ಈ ವೇಳೆ ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದನ್ನು ಹಾಡಿನ ಮೂಲಕ ತೋರಿಸೋಕೆ ನಿರ್ದೇಶಕರು ನಿರ್ಧರಿಸಿದ್ದಾರೆ. ಲಿಪ್​ ಲಾಕ್​ ಸೇರಿ ಕೆಲ ಇಂಟಿಮೇಟ್​ ದೃಶ್ಯಗಳು ಇದರಲ್ಲಿ ಇರಲಿದೆ. ಸಿನಿಮಾ ಸಂಭಾವನೆಯ ಜತೆಗೆ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ಅಮಲಾ ಹೆಚ್ಚಿನ ಹಣ ಕೇಳಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಈಗಾಗಲೇ ‘ಗೋಸ್ಟ್​’ ಸಿನಿಮಾದ ಶೂಟಿಂಗ್​ ಪ್ರಾರಂಭಗೊಂಡಿದೆ. ಅಕ್ಕಿನೇನಿ ನಾಗಾರ್ಜುನ ಅವರು ಬಿಗ್​ ಬಾಸ್​ ಸೀಸನ್​ 5ರ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಹೈದರಾಬಾದ್​ನಲ್ಲಿ ಈ ಚಿತ್ರದ ಶೂಟಿಂಗ್​ನಲ್ಲಿಯೂ ಪಾಲ್ಗೊಳ್ಳುತ್ತಿದ್ದಾರೆ. ಹೀರೋಯಿನ್​ ಬದಲಾದ ಕಾರಣಕ್ಕೆ ಸಿನಿಮಾದ ಶೂಟಿಂಗ್​ ವಿಳಂಬವಾಗಿದೆ. ಮುಂದಿನ ಎರಡು ತಿಂಗಳಲ್ಲಿ ಸಂಪೂರ್ಣವಾಗಿ ಸಿನಿಮಾ ಶೂಟಿಂಗ್​ ಮುಗಿಸುವ ಆಲೋಚನೆ ಚಿತ್ರತಂಡಕ್ಕೆ ಇದೆ. ಅದಕ್ಕೆ ತಕ್ಕಂತೆಯೇ ಶೆಡ್ಯೂಲ್​ ಫಿಕ್ಸ್​ ಮಾಡಲಾಗಿದೆ.

ಇದನ್ನೂ ಓದಿ: ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಪ್ರೆಗಾ ನ್ಯೂಸ್​ ಹಿಡಿದು ಪೋಸ್​ ನೀಡಿದ ಕಾಜಲ್​; ಏನಿದು ಹೊಸ ಸುದ್ದಿ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ