AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದು ಬಟ್ಟೆಯ ತಪ್ಪಲ್ಲ, ಕ್ಯಾಮೆರಾಮೆನ್ ತಪ್ಪು’; ಬೋಲ್ಡ್ ಫೋಟೋ ಟೀಕೆಗೆ ಅಮಲಾ ಪೌಲ್ ಉತ್ತರ

ಹೀರೋಯಿನ್​ಗಳು ಸುದ್ದಿಗೋಷ್ಠಿಗೆ ಸ್ವಲ್ಪ ಬೋಲ್ಡ್ ಆಗಿ ಬಂದರೂ ಕೆಲವರು ಅವರನ್ನು ಬೇರೆ ಬೇರೆ ರೀತಿಯ ಆ್ಯಂಗಲ್​ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಾರೆ ಎನ್ನುವ ಆರೋಪ ಇದೆ. ಬಾಲಿವುಡ್ ಮಂದಿಯೂ ಈ ಆರೋಪ ಮಾಡುತ್ತಲೇ ಬರುತ್ತಾರೆ. ಈ ಬಗ್ಗೆ ಅಮಲಾ ಪೌಲ್​ಗೂ ತಕರಾರು ಇದೆ.

‘ಅದು ಬಟ್ಟೆಯ ತಪ್ಪಲ್ಲ, ಕ್ಯಾಮೆರಾಮೆನ್ ತಪ್ಪು’; ಬೋಲ್ಡ್ ಫೋಟೋ ಟೀಕೆಗೆ ಅಮಲಾ ಪೌಲ್ ಉತ್ತರ
ಅಮಲಾ ಪೌಲ್
ರಾಜೇಶ್ ದುಗ್ಗುಮನೆ
|

Updated on:Jul 26, 2024 | 10:57 AM

Share

ನಟಿ ಅಮಲಾ ಪೌಲ್ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಹಾಕುವ ಬಟ್ಟೆಯ ಬಗ್ಗೆ ಕೆಲವರು ತಕರಾರು ತೆಗೆದಿದ್ದು ಇದೆ. ಅವರು ಬೋಲ್ಡ್ ಆದ ಬಟ್ಟೆ ಹಾಕುತ್ತಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ. ಈಗ ಅವರು ಈ ವಿಚಾರದಲ್ಲಿ ಮೌನ ಮುರಿದಿದ್ದಾರೆ. ಮುಂಬರುವ ‘ಲೆವೆಲ್ ಕ್ರಾಸ್’ ಚಿತ್ರದ ಪ್ರಚಾರದ ವೇಳೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಡ್ರೆಸ್ಸಿಂಗ್ ಸ್ಟೈಲ್​ನ ಹೇಗೆ ತೋರಿಸುತ್ತಾರೆ ಎಂಬುದರಲ್ಲೇ ಸಮಸ್ಯೆ ಇದೆ’ ಎಂದಿದ್ದಾರೆ ಅವರು.

ಹೀರೋಯಿನ್​ಗಳು ಸುದ್ದಿಗೋಷ್ಠಿಗೆ ಸ್ವಲ್ಪ ಬೋಲ್ಡ್ ಆಗಿ ಬಂದರೂ ಕೆಲವರು ಅವರನ್ನು ಬೇರೆ ಬೇರೆ ರೀತಿಯ ಆ್ಯಂಗಲ್​ನಲ್ಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಾರೆ ಎನ್ನುವ ಆರೋಪ ಇದೆ. ಬಾಲಿವುಡ್ ಮಂದಿಯೂ ಈ ಆರೋಪ ಮಾಡುತ್ತಲೇ ಬರುತ್ತಾರೆ. ಈ ಬಗ್ಗೆ ಅಮಲಾ ಪೌಲ್​ಗೂ ತಕರಾರು ಇದೆ. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿದ್ದಾರೆ.

‘ಸಮಸ್ಯೆ ಇರೋದು ಕ್ಯಾಮೆರಾಗಳು ಹೇಗೆ ನನ್ನ ಉಡುಗೆ ಶೈಲಿಯನ್ನು ತೋರಿಸುತ್ತಾರೆ ಎಂಬುದರಲ್ಲಿ. ನನಗೆ ಖುಷಿ ನೀಡೋದನ್ನು ನಾನು ಧರಿಸುತ್ತೇನೆ. ಫಂಕ್ಷನ್​ಗಳಿಗೆ ನಾನು ಧರಿಸೋ ಡ್ರೆಸ್ ಅಸಹಜವಾಗಿ ಇರುವುದಿಲ್ಲ. ಅವರು ನನ್ನನ್ನು ಹೇಗೆ ಬಿಂಬಿಸುತ್ತಾರೆ ಎಂಬುದರಲ್ಲಿ ಸಮಸ್ಯೆ ಇದೆ. ಅದನ್ನು ನಿಯಂತ್ರಿಸೋದು ನನ್ನ ಕೈಯಲ್ಲಿ ಇಲ್ಲ’ ಎಂದಿದ್ದಾರೆ ಅವರು.

‘ನಾನು ಎಲ್ಲ ರೀತಿಯ ಡ್ರೆಸ್​ನ ಹಾಕುತ್ತೇನೆ. ಪಾಶ್ಚಾತ್ಯ ಹಾಗೂ ಸಾಂಪ್ರದಾಯಿಕ ಉಡುಗೆಯನ್ನೂ ಧರಿಸುತ್ತೇನೆ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ಮೂಲಕ ಟ್ರೋಲ್​ಗಳ ಬಾಯಿಯನ್ನು ಅವರು ಮುಚ್ಚಿಸಿದ್ದಾರೆ.

ಇದನ್ನೂ ಓದಿ: ಡಿಫರೆಂಟ್​ ಆಗಿದೆ ಅಮಲಾ ಪೌಲ್​ ಪ್ರೆಗ್ನೆನ್ಸಿ ಫೋಟೋಶೂಟ್​

ಅಮಲಾ ಪೌಲ್ ಅವರು ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಆಡುಜೀವಿತಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರ ಪಾತ್ರ ಹೀಗೆ ಬಂದು ಹಾಗೆ ಹೋಗುತ್ತದೆ. ಅವರು ಕಥಾ ನಾಯಕನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇತ್ತೀಚೆಗೆ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:48 am, Fri, 26 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ