AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಎಎಂಬಿ ಸಿನಿಮಾಸ್ ಆಫರ್; ಬೆಳಗಿನ ಶೋನಲ್ಲಿ ಉಚಿತ ಪಾಪ್​ಕಾರ್ನ್

ಯುಗಾದಿ ಪ್ರಯುಕ್ತ ‘ಧುರಂಧರ್ 2’, ‘ಲವ್ ಮಾಕ್ಟೇಲ್ 3’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಸಿನಿಮಾವನ್ನು ಬೆಳಗಿನ ಶೋಗಳಲ್ಲಿ ನೋಡಲು ಬರುವವರಿಗೆ ‘ಎಎಂಬಿ ಸಿನಿಮಾಸ್’ ಕೆಲವು ಆಫರ್​ ನೀಡುತ್ತಿದೆ. ಈ ಆಫರ್​ಗಳಿಂದ ಸಿನಿಪ್ರಿಯರಿಗೆ ಉತ್ತೇಜನ ಸಿಗಲಿದೆ. ಸಿನಿಮಾ ನೋಡಲು ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚಲಿದೆ.

ಯುಗಾದಿ ಹಬ್ಬಕ್ಕೆ ಎಎಂಬಿ ಸಿನಿಮಾಸ್ ಆಫರ್; ಬೆಳಗಿನ ಶೋನಲ್ಲಿ ಉಚಿತ ಪಾಪ್​ಕಾರ್ನ್
Amb Cinemas
ಮದನ್​ ಕುಮಾರ್​
|

Updated on: Mar 18, 2026 | 12:48 PM

Share

ಬೆಂಗಳೂರಿನ ಗಾಂಧಿನಗರದಲ್ಲಿರುವ ಹೊಚ್ಚ ಹೊಸ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್’ (AMB Cinemas) ಕಡೆಯಿಂದ ಸಿನಿಮಾ ಪ್ರೇಮಿಗಳಿಗಾಗಿ ಯುಗಾದಿ ಹಬ್ಬದ ವಿಶೇಷ ಆಫರ್ ನೀಡಲಾಗುತ್ತಿದೆ. ಕೆಲವೇ ತಿಂಗಳುಗಳ ಹಿಂದೆ ‘ಕಪಾಲಿ’ ಚಿತ್ರಮಂದಿರವನ್ನು ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ಆಗಿ ಪರಿವರ್ತಿಸಿದ ಎಎಂಬಿ ಸಿನಿಮಾಸ್ ನೀಡಲಿರುವ ಆಫರ್​​ಗಳು ಪ್ರೇಕ್ಷಕರಿಗೆ ಸಿನಿಮಾದ ಮೋಜನ್ನು ಹೆಚ್ಚಿಸಲಿದೆ. ಈ ವಿಶೇಷ ಆಫರ್‌ಗಳು ಬಹುನಿರೀಕ್ಷಿತ ಚಿತ್ರಗಳಾದ ‘ಲವ್ ಮಾಕ್ಟೇಲ್ 3’, ‘ಧುರಂಧರ್ 2’ (Dhurandhar 2) ಮತ್ತು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಗಳಿಗೆ ಅನ್ವಯವಾಗಲಿವೆ. ಏನಿದು ಆಫರ್? ಮುಂದೆ ಓದಿ..

ಎಎಂಬಿ ಸಿನಿಮಾಸ್​​ನಲ್ಲಿ ಬೆಳಗಿನ ಪ್ರದರ್ಶನಗಳಿಗೆ ಆಫರ್ ನೀಡಲಾಗುತ್ತಿದೆ. ಬೆಳಿಗ್ಗೆ 11 ಗಂಟೆಯೊಳಗಿನ ಪ್ರದರ್ಶನಗಳಿಗೆ ಟಿಕೆಟ್ ಕಾಯ್ದಿರಿಸುವ ಪ್ರೇಕ್ಷಕರಿಗೆ ಉಚಿತ ಪಾಪ್‌ಕಾರ್ನ್ ಮತ್ತು ಉಡುಗೊರೆಗಳನ್ನು ನೀಡಲಾಗುವುದು. ಈ ಕೊಡುಗೆಯು ಮಾರ್ಚ್ 19ರಿಂದ ಮಾರ್ಚ್ 26ರವರೆಗೆ ಮಾತ್ರ ಲಭ್ಯವಿರುತ್ತದೆ. ‘ಬುಕ್ ಮೈ ಶೋ’ ಮೂಲಕ ಟಿಕೆಟ್ ಕಾಯ್ದಿರಿಸುವ ಗ್ರಾಹಕರು ‘AMB100’ ಕೋಡ್ ಬಳಸುವ ಮೂಲಕ 100 ರೂಪಾಯಿ ರಿಯಾಯಿತಿ ಪಡೆಯಬಹುದು.

ಕರ್ನಾಟಕದಲ್ಲಿ ಮೊಟ್ಟಮೊದಲ ‘ಡಾಲ್ಬಿ ಸಿನಿಮಾ’ ತಂತ್ರಜ್ಞಾನವನ್ನು ಪರಿಚಯಿಸಿದ ಮಲ್ಟಿಪ್ಲೆಕ್ಸ್ ಎಂಬ ಖ್ಯಾತಿ ‘ಎಎಂಬಿ ಸಿನಿಮಾಸ್’ಗಿದೆ. ಇದು ಅತ್ಯಂತ ಸ್ಪಷ್ಟವಾದ ದೃಶ್ಯ ವೈಭವ, ಅದ್ಭುತ ಕಾಂಟ್ರಾಸ್ಟ್ ಮತ್ತು ತಲ್ಲೀನಗೊಳಿಸುವ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ. ಪ್ರೇಕ್ಷಕರ ಸಿನಿಮಾ ವೀಕ್ಷಣೆಯ ಅನುಭವವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತದೆ.

View this post on Instagram

A post shared by AMB Cinemas (@amb_cinemas)

ಎಎಂಬಿ ಸಿನಿಮಾಸ್ ಅತ್ಯಾಧುನಿಕ ಪ್ರೊಜೆಕ್ಷನ್ ತಂತ್ರಜ್ಞಾನ, ಸುಧಾರಿತ ಸೌಂಡ್ ವ್ಯವಸ್ಥೆ ಮತ್ತು ಐಷಾರಾಮಿ ಆಸನಗಳನ್ನು ಹೊಂದಿದೆ. 7 ಸ್ಟಾರ್ ಅನುಭವ ನೀಡುವ ಐಷಾರಾಮಿ ಸೌಲಭ್ಯವಿದ್ದರೂ ಇಲ್ಲಿನ ಟಿಕೆಟ್ ದರಗಳು ಸಾಮಾನ್ಯ ಜನರಿಗೆ ಕೈಗೆಟುಕುವಂತಿದೆ ಎಂಬುದು ವಿಶೇಷ. ಅವುಗಳ ಜೊತೆಗೆ ಸಿನಿಪ್ರಿಯರಿಗೆ ‘ಎಎಂಬಿ ಸಿನಿಮಾಸ್’ ಕಡೆಯಿಂದ ಯುಗಾದಿ ಆಫರ್ ಸಿಗುತ್ತಿರುವುದು ವಿಶೇಷ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ಯುಗಾದಿ ಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ಸಿನಿಮಾಗಳಾದ ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’, ‘ಲವ್ ಮಾಕ್ಟೇಲ್ 3’ ಬಿಡುಗಡೆ ಆಗುತ್ತಿವೆ. ಎಎಂಬಿ ಸಿನಿಮಾಸ್​​ನ ಬೆಳಗಿನ ಪ್ರದರ್ಶನಗಳಲ್ಲಿ ಈ ಸಿನಿಮಾಗಳನ್ನು ಕಣ್ತುಂಬಿಕೊಳ್ಳುವ ಪ್ರೇಕ್ಷಕರಿಗೆ ಉಚಿತ ಪಾಪ್‌ಕಾರ್ನ್ ಆಫರ್ ಸಿಗಲಿದೆ. ಇದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಉತ್ತೇಜನ ಸಿಕ್ಕಂತೆ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ