AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ ಎಂದಿದ್ದಾರೆ.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ
ಅಂಬಿಲಿ ದೇವಿ
Follow us
ರಾಜೇಶ್ ದುಗ್ಗುಮನೆ
|

Updated on: Apr 22, 2021 | 8:47 PM

ಮಲಯಾಳಂ ಸ್ಟಾರ್​ ನಟಿ ಅಂಬಿಲಿ ದೇವಿ 2009ರಲ್ಲಿ ಕ್ಯಾಮೆರಾಮೆನ್​ ಲೋವಲ್​ ಅವರನ್ನು ಮದುವೆ ಆಗಿದ್ದರು. 2018ರಲ್ಲಿ ಇಬ್ಬರ ವಿವಾಹ ಡಿವೊರ್ಸ್​ ಮೂಲಕ ಕೊನೆಗೊಂಡಿತ್ತು. ಇದಾದ ಬೆನ್ನಲ್ಲೇ 2019ರಲ್ಲಿ ಅಂಬಿಲಿ ದೇವಿ ಆದಿತ್ಯನ್​ ಜಯನ್​ ಜತೆ ಎರಡನೇ ಮದುವೆ ಆಗಿದ್ದರು. ಆದರೆ, ಎರಡನೇ ಗಂಡನಿಂದ ಇವರಿಗೆ ಮೋಸ ಆಗಿರುವ ವಿಚಾರ ತಿಳಿದು ಬಂದಿದೆ. ಈ ವಿಚಾರ ಕೇಳಿ ನಟಿ ಕಣ್ಣೀರಿಟ್ಟಿದ್ದಾರೆ.

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ. ಎರಡನೇ ಬಾರಿಗೆ ಮದುವೆ ಆಗಲು ನಾವಿಬ್ಬರೂ ಸಾಕಷ್ಟು ಕಷ್ಟಗಳನ್ನು ದಾಟಿ ಬಂದಿದ್ದೇವೆ. ಆದರೆ, ನಾವು ಬಾಡಿಗೆ ನೀಡಿದ ಮನೆಯಲ್ಲಿ ವಾಸವಾಗಿರುವ ಮಹಿಳೆ ಜತೆ ಆದಿತ್ಯನ್​ ಅನೈತಿಕ ಸಂಬಂಧ ಹೊಂದಿದ್ದಾರೆ. ಆಕೆಗೆ 13 ವರ್ಷದ ಮಗ ಇದ್ದಾನೆ. ನಾನು ಪ್ರೆಗ್ನೆಂಟ್​ ಆದ ನಂತರ ನಟನೆ ಇಂದ ಬ್ರೇಕ್​ ತೆಗೆದುಕೊಂಡೆ. ಕಳೆದ ಏಪ್ರಿಲ್​​ನಲ್ಲಿ ಮಗು ಜನಿಸಿತ್ತು. ಆಗ ನನ್ನ ಗಂಡ ಒಂದೆರಡು ಬಾರಿ ನೋಡೋಕೆ ಬಂದಿದ್ದರು. ಕೇಳಿದರೆ, ತ್ರಿಶೂರ್​ನಲ್ಲಿ ಕೆಲಸ ಇದೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು ಎಂದು ನಿಜವಿಚಾರ ಬಿಚ್ಚಿಟ್ಟಿದ್ದಾರೆ.

ನನಗೆ ಅವರ ಅನೈತಿಕ ಸಂಬಂಧದ ಬಗ್ಗೆ ಗೊತ್ತಾಗಿದೆ. ಆದಿತ್ಯ ಹಾಗೂ ಮಹಿಳೆ ಡಿವೋರ್ಸ್​ ನೀಡುವಂತೆ ಕೇಳುತ್ತಿದ್ದಾರೆ. ನಾನು ಏನು ತಪ್ಪು ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತಿಲ್ಲ. ನಾನು ಹೊಂದಾಣಿಕೆ ಮಾಡೋಕೆ ಪ್ರಯತ್ನಿಸಿದೆ. ಆದರೆ, ಸಾಧ್ಯವೇ ಆಗಿಲ್ಲ. ಅನೈತಿಕ ಸಂಬಂಧ ಹೊಂದಿರುವ ಮಹಿಳೆಗೆ ಈಗಾಗಲೇ ಮದುವೆ ಆಗಿದೆ. ಒಂದು ಮಗು ಕೂಡ ಇದೆ. ಆದಾಗ್ಯೂ ಆಕೆ ಹೀಗೆ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ