AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ ಎಂದಿದ್ದಾರೆ.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ
ಅಂಬಿಲಿ ದೇವಿ
ರಾಜೇಶ್ ದುಗ್ಗುಮನೆ
|

Updated on: Apr 22, 2021 | 8:47 PM

Share

ಮಲಯಾಳಂ ಸ್ಟಾರ್​ ನಟಿ ಅಂಬಿಲಿ ದೇವಿ 2009ರಲ್ಲಿ ಕ್ಯಾಮೆರಾಮೆನ್​ ಲೋವಲ್​ ಅವರನ್ನು ಮದುವೆ ಆಗಿದ್ದರು. 2018ರಲ್ಲಿ ಇಬ್ಬರ ವಿವಾಹ ಡಿವೊರ್ಸ್​ ಮೂಲಕ ಕೊನೆಗೊಂಡಿತ್ತು. ಇದಾದ ಬೆನ್ನಲ್ಲೇ 2019ರಲ್ಲಿ ಅಂಬಿಲಿ ದೇವಿ ಆದಿತ್ಯನ್​ ಜಯನ್​ ಜತೆ ಎರಡನೇ ಮದುವೆ ಆಗಿದ್ದರು. ಆದರೆ, ಎರಡನೇ ಗಂಡನಿಂದ ಇವರಿಗೆ ಮೋಸ ಆಗಿರುವ ವಿಚಾರ ತಿಳಿದು ಬಂದಿದೆ. ಈ ವಿಚಾರ ಕೇಳಿ ನಟಿ ಕಣ್ಣೀರಿಟ್ಟಿದ್ದಾರೆ.

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ. ಎರಡನೇ ಬಾರಿಗೆ ಮದುವೆ ಆಗಲು ನಾವಿಬ್ಬರೂ ಸಾಕಷ್ಟು ಕಷ್ಟಗಳನ್ನು ದಾಟಿ ಬಂದಿದ್ದೇವೆ. ಆದರೆ, ನಾವು ಬಾಡಿಗೆ ನೀಡಿದ ಮನೆಯಲ್ಲಿ ವಾಸವಾಗಿರುವ ಮಹಿಳೆ ಜತೆ ಆದಿತ್ಯನ್​ ಅನೈತಿಕ ಸಂಬಂಧ ಹೊಂದಿದ್ದಾರೆ. ಆಕೆಗೆ 13 ವರ್ಷದ ಮಗ ಇದ್ದಾನೆ. ನಾನು ಪ್ರೆಗ್ನೆಂಟ್​ ಆದ ನಂತರ ನಟನೆ ಇಂದ ಬ್ರೇಕ್​ ತೆಗೆದುಕೊಂಡೆ. ಕಳೆದ ಏಪ್ರಿಲ್​​ನಲ್ಲಿ ಮಗು ಜನಿಸಿತ್ತು. ಆಗ ನನ್ನ ಗಂಡ ಒಂದೆರಡು ಬಾರಿ ನೋಡೋಕೆ ಬಂದಿದ್ದರು. ಕೇಳಿದರೆ, ತ್ರಿಶೂರ್​ನಲ್ಲಿ ಕೆಲಸ ಇದೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು ಎಂದು ನಿಜವಿಚಾರ ಬಿಚ್ಚಿಟ್ಟಿದ್ದಾರೆ.

ನನಗೆ ಅವರ ಅನೈತಿಕ ಸಂಬಂಧದ ಬಗ್ಗೆ ಗೊತ್ತಾಗಿದೆ. ಆದಿತ್ಯ ಹಾಗೂ ಮಹಿಳೆ ಡಿವೋರ್ಸ್​ ನೀಡುವಂತೆ ಕೇಳುತ್ತಿದ್ದಾರೆ. ನಾನು ಏನು ತಪ್ಪು ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತಿಲ್ಲ. ನಾನು ಹೊಂದಾಣಿಕೆ ಮಾಡೋಕೆ ಪ್ರಯತ್ನಿಸಿದೆ. ಆದರೆ, ಸಾಧ್ಯವೇ ಆಗಿಲ್ಲ. ಅನೈತಿಕ ಸಂಬಂಧ ಹೊಂದಿರುವ ಮಹಿಳೆಗೆ ಈಗಾಗಲೇ ಮದುವೆ ಆಗಿದೆ. ಒಂದು ಮಗು ಕೂಡ ಇದೆ. ಆದಾಗ್ಯೂ ಆಕೆ ಹೀಗೆ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?