AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ

Amit Shah Meets Jr NTR: ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಭೇಟಿ ಆಗಿದ್ದಾರೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ
ಅಮಿತ್ ಶಾ - ಜ್ಯೂ. ಎನ್​ಟಿಆರ್​
TV9 Web
| Edited By: |

Updated on:Aug 22, 2022 | 10:49 AM

Share

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ (Jr NTR) ಅಭಿಮಾನಿಗಳಿಗೂ ಹಾಗೆಯೇ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು (Amit Shah Jr NTR Photos) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಮಿತ್​ ಶಾ (Amit Shah) ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಫ್ಯಾನ್ಸ್​ ಭೇಷ್​ ಎನ್ನುತ್ತಿದ್ದಾರೆ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Jr NTR: ಪತ್ನಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ನಟ ಜ್ಯೂನಿಯರ್ ಎನ್​ಟಿಆರ್​
Image
Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Image
Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು, ಖುಷಿ ನೀಡಿದೆ’ ಎಂದು ಅಮಿತ್​ ಶಾ ಬರೆದುಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ 14 ಸಾವಿರಕ್ಕೂ ಅಧಿಕ ಜನರು ಇದನ್ನು ರೀ-ಟ್ವೀಟ್​ ಮಾಡಿಕೊಂಡಿದ್ದಾರೆ. ‘ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಮಾಡಿ ಮಾತನಾಡಿದ್ದಕ್ಕೆ ಖುಷಿ ಆಯಿತು’  ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಜ್ಯೂ. ಎನ್​ಟಿಆರ್​ ಅವರಿಗೆ ಭರ್ಜರಿ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಈ ವರ್ಷ ತೆರೆಕಂಡ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೆಚ್ಚಾಗಿದೆ. ಹಿಂದಿ ಪ್ರೇಕ್ಷಕರು ವಲಯದಲ್ಲಿ ಅವರಿಗೆ ಅಭಿಮಾನಿಗಳ ಸಂಖ್ಯೆ ವೃದ್ಧಿಸಿದೆ. ಅವರು ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಯಾವ ಕಾರಣಕ್ಕೆ ಭೇಟಿ ಆಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Mon, 22 August 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ