AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ

Amit Shah Meets Jr NTR: ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಭೇಟಿ ಆಗಿದ್ದಾರೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ
ಅಮಿತ್ ಶಾ - ಜ್ಯೂ. ಎನ್​ಟಿಆರ್​
TV9 Web
| Updated By: ಮದನ್​ ಕುಮಾರ್​|

Updated on:Aug 22, 2022 | 10:49 AM

Share

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ (Jr NTR) ಅಭಿಮಾನಿಗಳಿಗೂ ಹಾಗೆಯೇ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು (Amit Shah Jr NTR Photos) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಮಿತ್​ ಶಾ (Amit Shah) ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಫ್ಯಾನ್ಸ್​ ಭೇಷ್​ ಎನ್ನುತ್ತಿದ್ದಾರೆ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Jr NTR: ಪತ್ನಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ನಟ ಜ್ಯೂನಿಯರ್ ಎನ್​ಟಿಆರ್​
Image
Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Image
Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು, ಖುಷಿ ನೀಡಿದೆ’ ಎಂದು ಅಮಿತ್​ ಶಾ ಬರೆದುಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ 14 ಸಾವಿರಕ್ಕೂ ಅಧಿಕ ಜನರು ಇದನ್ನು ರೀ-ಟ್ವೀಟ್​ ಮಾಡಿಕೊಂಡಿದ್ದಾರೆ. ‘ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಮಾಡಿ ಮಾತನಾಡಿದ್ದಕ್ಕೆ ಖುಷಿ ಆಯಿತು’  ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಜ್ಯೂ. ಎನ್​ಟಿಆರ್​ ಅವರಿಗೆ ಭರ್ಜರಿ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಈ ವರ್ಷ ತೆರೆಕಂಡ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೆಚ್ಚಾಗಿದೆ. ಹಿಂದಿ ಪ್ರೇಕ್ಷಕರು ವಲಯದಲ್ಲಿ ಅವರಿಗೆ ಅಭಿಮಾನಿಗಳ ಸಂಖ್ಯೆ ವೃದ್ಧಿಸಿದೆ. ಅವರು ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಯಾವ ಕಾರಣಕ್ಕೆ ಭೇಟಿ ಆಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Mon, 22 August 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ