AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಕೀಯ ಸೇರಿ’: ಜ್ಯೂ.ಎನ್​ಟಿಆರ್​ಗೆ ಆಫರ್ ನೀಡಿ ಬಂದ ಅಮಿತ್​ ಶಾ; ಹೊರ ಬಿತ್ತು ಅಸಲಿ ವಿಚಾರ

ಭಾನುವಾರ (ಆಗಸ್ಟ್ 21) ಜ್ಯೂ.ಎನ್​ಟಿಆರ್ ಮನೆಗೆ ಅಮಿತ್ ಶಾ ಭೇಟಿ ನೀಡಿದ್ದಾರೆ. ಬಿಜೆಪಿಯ ಚಾಣಾಕ್ಯ ಎಂದೇ ಫೇಮಸ್ ಆದ ಅಮಿತ್ ಶಾ ಸ್ಟಾರ್ ನಟನನ್ನು ಭೇಟಿ ಮಾಡುತ್ತಾರೆ ಎಂದರೆ ಅದರ ಹಿಂದೆ ರಾಜಕೀಯ ಕಾರಣ ಇದೆ ಎಂದೇ ಹೇಳಲಾಗುತ್ತಿದೆ. ‘

‘ರಾಜಕೀಯ ಸೇರಿ’: ಜ್ಯೂ.ಎನ್​ಟಿಆರ್​ಗೆ ಆಫರ್ ನೀಡಿ ಬಂದ ಅಮಿತ್​ ಶಾ; ಹೊರ ಬಿತ್ತು ಅಸಲಿ ವಿಚಾರ
ಅಮಿತ್ ಶಾ-ಜ್ಯೂ.ಎನ್​ಟಿಆರ್
TV9 Web
| Edited By: |

Updated on:Aug 22, 2022 | 9:47 PM

Share

ಟಾಲಿವುಡ್ ನಟ ಜ್ಯೂ.ಎನ್​ಟಿಆರ್ (JR. Ntr) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಕಷ್ಟು ಕುತೂಹಲ ಮೂಡಿಸಿತ್ತು. ರಾಜಕೀಯ ಉದ್ದೇಶದಿಂದಲೇ ಇವರ ಭೇಟಿ ನಡೆದಿದೆ ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಬಿಜೆಪಿ ಮೂಲಗಳು ಖಚಿತಪಡಿಸಿವೆ. ಇವರಿಬ್ಬರ ಭೇಟಿ ರಾಜಕೀಯ ಉದ್ದೇಶವನ್ನೇ ಹೊಂದಿದೆ ಎಂಬುದನ್ನು ಮೂಲಗಳು ಒತ್ತಿ ಹೇಳಿವೆ.   ಭಾನುವಾರ (ಆಗಸ್ಟ್ 21) ಜ್ಯೂ.ಎನ್​ಟಿಆರ್ ಮನೆಗೆ ಅಮಿತ್ ಶಾ (Amit Shah) ಭೇಟಿ ನೀಡಿದ್ದಾರೆ. ಬಿಜೆಪಿಯ ಚಾಣಾಕ್ಯ ಎಂದೇ ಫೇಮಸ್ ಆದ ಅಮಿತ್ ಶಾ ಸ್ಟಾರ್ ನಟನನ್ನು ಭೇಟಿ ಮಾಡುತ್ತಾರೆ ಎಂದರೆ ಅದರ ಹಿಂದೆ ರಾಜಕೀಯ ಕಾರಣ ಇದೆ ಎಂದೇ ಹೇಳಲಾಗುತ್ತಿದೆ. ‘ರಾಜಕೀಯಕ್ಕೆ ಬನ್ನಿ. ಆ ನಿರ್ಧಾರದ ಬಗ್ಗೆ ಯೋಚಿಸಿ’ ಎಂಬುದನ್ನು ಅಮಿತ್ ಶಾ ಅವರು ಜ್ಯೂ.ಎನ್​ಟಿಆರ್​ಗೆ ಹೇಳಿದ್ದಾರೆ ಎಂದು ವರದಿ ಆಗಿದೆ.

ಹಲವು ರಾಜ್ಯಗಳಲ್ಲಿ ಸಿನಿಮಾ ರಂಗದ ಅನೇಕರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಜ್ಯೂ.ಎನ್​ಟಿಆರ್ ತಂದೆ ನಂದಮೂರಿ ಹರಿಕೃಷ್ಣ ಅವರು ಸಂಸದರಾಗಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಜ್ಯೂ.ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ರಾಜಕೀಯಕ್ಕೆ ಸೇರಿದರೆ ಆ ಫ್ಯಾನ್​ಬೇಸ್​ ಮತವಾಗಿ ಮಾರ್ಪಾಡಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಈ ಕಾರಣಕ್ಕೆ ಅಮಿತ್ ಶಾ ಅವರು ಸ್ಟಾರ್ ನಟನಿಗೆ ಈ ಆಫರ್ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
Jr NTR: ಪತ್ನಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ನಟ ಜ್ಯೂನಿಯರ್ ಎನ್​ಟಿಆರ್​
Image
Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Image
Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

ಜ್ಯೂ.ಎನ್​ಟಿಆರ್ ಅವರು ಟಿಡಿಪಿಯಲ್ಲಿ ಆ್ಯಕ್ಟೀವ್ ಆಗಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಅವರು ರಾಜಕೀಯಕ್ಕೆ ಬಂದ ನಂತರದಲ್ಲಿ ಜ್ಯೂ.ಎನ್​ಟಿಆರ್ ಅವರು ಹೊರಗುಳಿದರು. ನಂತರ ಜ್ಯೂ.ಎನ್​ಟಿಆರ್ ಮತ್ತೆ ರಾಜಕೀಯದತ್ತ ಮುಖ ಮಾಡಿಲ್ಲ. ಈಗ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ.

‘ಜ್ಯೂ.ಎನ್​ಟಿಆರ್ ಅವರಿಗೆ ರಾಜಕೀಯದ ಬಗ್ಗೆ ಆಸಕ್ತಿ ಇದೆ. ಈ ಮೊದಲು ಟಿಡಿಪಿಯಲ್ಲಿ ಆ್ಯಕ್ಟೀವ್ ಆಗಿದ್ದರು. ಅವರು ಅದ್ಭುತ ಮಾತುಗಾರ. ಅವರ ಫ್ಯಾನ್​ಬೇಸ್ ಕೂಡ ದೊಡ್ಡದಿದೆ. ಹೀಗಾಗಿ, ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಕರೆತರಲು ಪ್ರಯತ್ನಿಸುತ್ತಿದೆ’ ಎಂದು ಬಿಜೆಪಿ ಮೂಲಗಳು ಹೇಳಿವೆ.

ಇದನ್ನೂ ಓದಿ: Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ. ಈ ಕಾರಣಕ್ಕೆ ಜ್ಯೂ.ಎನ್​ಟಿಆರ್​ ಅವರನ್ನು ಅಮಿತ್ ಶಾ ಟ್ರಂಪ್ ಕಾರ್ಡ್​ ಆಗಿ ಬಳಕೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. 20 ನಿಮಿಷಗಳ ಭೇಟಿಯಲ್ಲಿ ರಾಜಕೀಯದ ವಿಚಾರ ಹೆಚ್ಚು ಚರ್ಚೆ ಆಗಿದೆ ಎಂದು ವರದಿ ಆಗಿದೆ.

ಈ ಸುದ್ದಿಯನ್ನು ಇಂಗ್ಲಿಷನ್​ಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Mon, 22 August 22

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ