AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ

‘ಆರ್​ಆರ್​ಆರ್’ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಬಾರಿ ಆಸ್ಕರ್​ ರೇಸ್​ಗೆ ಈ ಸಿನಿಮಾ ಕೂಡ ಆಯ್ಕೆ ಆಗುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ತಂಡಕ್ಕೆ ಅಭಿನಂದನೆ ತಿಳಿಸುವ ಆಲೋಚನೆ ಅಮಿತ್ ಶಾ ಅವರಿಗೆ ಇತ್ತು ಎನ್ನಲಾಗಿದೆ.

ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
ರಾಜಮೌಳಿ-ಅಮಿತ್ ಶಾ-ಜ್ಯೂ.ಎನ್​ಟಿಆರ್
TV9 Web
| Edited By: |

Updated on: Aug 23, 2022 | 4:26 PM

Share

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಟಾಲಿವುಡ್ ಸ್ಟಾರ್ ನಟ ಜ್ಯೂ.ಎನ್​ಟಿಆರ್ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇವರಿಬ್ಬರೂ ಭೇಟಿ ಆಗಿದ್ದು ಏಕೆ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಈ ಭೇಟಿ ಬೆನ್ನಲ್ಲೇ ಅಚ್ಚರಿಯ ವಿಚಾರಗಳು ಹೊರ ಬೀಳುತ್ತಿವೆ. ಅಮಿತ್ ಶಾ ಅವರು ‘ಆರ್​ಆರ್​ಆರ್’ ಚಿತ್ರದ (RRR Movie) ಮುಖ್ಯ ಸ್ಥಂಭಗಳಾದ ಜ್ಯೂ.ಎನ್​ಟಿಆರ್​, ರಾಮ್ ಚರಣ್ (Ram Charan) ಹಾಗೂ ಎಸ್​​.ಎಸ್​. ರಾಜಮೌಳಿ ಅವರನ್ನು ಭೇಟಿ ಮಾಡಲು ಆಲೋಚಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಜ್ಯೂ.ಎನ್​ಟಿಆರ್​​ ಅವರನ್ನು ಮಾತ್ರ ಭೇಟಿಯಾಗಿದ್ದಾರೆ.

‘ಆರ್​ಆರ್​ಆರ್’ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಬಾರಿ ಆಸ್ಕರ್​ ರೇಸ್​ಗೆ ಈ ಸಿನಿಮಾ ಕೂಡ ಆಯ್ಕೆ ಆಗುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ತಂಡಕ್ಕೆ ಅಭಿನಂದನೆ ತಿಳಿಸುವ ಆಲೋಚನೆ ಅಮಿತ್ ಶಾ ಅವರಿಗೆ ಇತ್ತು ಎನ್ನಲಾಗಿದೆ. ಆದರೆ, ರಾಮ್ ಚರಣ್ ಅವರು ಆ ಸಂದರ್ಭದಲ್ಲಿ ಗೋವಾಗೆ ತೆರಳಿದ್ದರು. ತಂದೆಯ ಹುಟ್ಟುಹಬ್ಬ ಆಚರಿಸುವ ಉದ್ದೇಶದಿಂದ ಅವರು ಗೋವಾದಲ್ಲಿದ್ದರು. ಈ ಕಾರಣಕ್ಕೆ ಅಮಿತ್ ಶಾ ಭೇಟಿ ಆಗಲು ಅವರಿಗೆ ಸಾಧ್ಯವಾಗಿಲ್ಲ.

ಜ್ಯೂ.ಎನ್​ಟಿಆರ್ ಹಾಗೂ ರಾಜಮೌಳಿ ಜತೆಗಿನ ಅಮಿತ್ ಶಾ ಭೇಟಿಯನ್ನು ಖಾಸಗಿ ಹೋಟೆಲ್​ನಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ, ರಾಜಮೌಳಿ ಅವರು ಕೊನೇ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಅವರು ಅಮಿತ್ ಶಾ ಭೇಟಿ ಮಾಡುವುದಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ಇದಕ್ಕೆ ಈಗ ಕಾರಣ ಏನು ಎಂಬುದು ಕೂಡ ಹೊರ ಬಿದ್ದಿದೆ.

ಇದನ್ನೂ ಓದಿ
Image
‘ರಾಜಕೀಯ ಸೇರಿ’: ಜ್ಯೂ.ಎನ್​ಟಿಆರ್​ಗೆ ಆಫರ್ ನೀಡಿ ಬಂದ ಅಮಿತ್​ ಶಾ; ಹೊರ ಬಿತ್ತು ಅಸಲಿ ವಿಚಾರ
Image
Jr NTR: ಪತ್ನಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ನಟ ಜ್ಯೂನಿಯರ್ ಎನ್​ಟಿಆರ್​
Image
Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು

ರಾಜಮೌಳಿ ತಂದೆ ವಿವಿ ವಿಜಯೇಂದ್ರ ಪ್ರಸಾದ್ ಅವರಿಗೆ ಇತ್ತೀಚೆಗೆ ಬಿಜೆಪಿ ರಾಜ್ಯಸಭಾ ಸೀಟ್ ನೀಡಿತ್ತು. ಇಂತಹ ಸಂದರ್ಭದಲ್ಲಿ ರಾಜಮೌಳಿ ಹಾಗೂ ಅಮಿತ್ ಶಾ ಭೇಟಿ ಆದರೆ ಅದು ಬೇರೆಯದೇ ರೀತಿಯಲ್ಲಿ ಚರ್ಚೆ ಆಗಲಿದೆ. ಇದು ಸ್ಟಾರ್ ನಿರ್ದೇಶಕನಿಗೆ ಇಷ್ಟವಿಲ್ಲ. ಈ ಕಾರಣದಿಂದ ಅವರು ಈ ಭೇಟಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ

ಅಮಿತ್ ಶಾ ಹಾಗೂ ಜ್ಯೂ.ಎನ್​ಟಿಆರ್ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ರಾಜಕೀಯಕ್ಕೆ ಬರುವಂತೆ ಅಮಿತ್ ಶಾ ಅವರು ಜ್ಯೂ.ಎನ್​ಟಿಆರ್​ಗೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಯಾರೊಬ್ಬರೂ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ