AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿರುವ ದಿಗ್ಗಜರು: ರಜಿನಿ-ಬಚ್ಚನ್ ಒಂದು ಮಾಡುತ್ತಿರುವುದು ಯಾರು?

Rajinikanth-Bachchan: ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ರಜನೀಕಾಂತ್ ಹಾಗೂ ಅಮಿತಾಬ್ ಬಚ್ಚನ್ 32 ವರ್ಷಗಳ ಬಳಿಕ ಒಟ್ಟಿಗೆ ನಟಿಸಿದ್ದಾರೆ. ಈ ಇಬ್ಬರು ದಿಗ್ಗಜರನ್ನು ಒಟ್ಟಿಗೆ ತರುತ್ತಿರುವವರು ಯಾರು?

32 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿರುವ ದಿಗ್ಗಜರು: ರಜಿನಿ-ಬಚ್ಚನ್ ಒಂದು ಮಾಡುತ್ತಿರುವುದು ಯಾರು?
ರಜನೀಕಾಂತ್-ಬಚ್ಚನ್
ಮಂಜುನಾಥ ಸಿ.
|

Updated on:Jun 10, 2023 | 4:42 PM

Share

ದುಬಾರಿ ಸಿನಿಮಾ ಬಜೆಟ್​ ಕಾಲದಲ್ಲಿ ಮಲ್ಟಿಸ್ಟಾರರ್ (Multistarrer) ಸಿನಿಮಾಗಳೆಂದರೆ ನಿರ್ಮಾಪಕರು (Producer) ಬೆಚ್ಚಿ ಬೀಳುವಂತಾಗಿದೆ. ಅದರಲ್ಲಿಯೂ ಇಬ್ಬರು ಸೂಪರ್ ಸ್ಟಾರ್​ಗಳನ್ನು ಒಟ್ಟಿಗೆ ಸೇರಿಸುವುದಕ್ಕೆ ಎಂಟು ಗುಂಡಿಗೆಯ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಮಾತ್ರವೇ ಸಾಧ್ಯ. ಅಂಥಹಾ ಸಾಹಸವೊಂದಕ್ಕೆ ಭಾರತೀಯ ಚಿತ್ರರಂಗ ಸಾಕ್ಷಿಯಾಗುತ್ತಿದೆ. ಭಾರತೀಯ ಚಿತ್ರರಂಗದ ದಿಗ್ಗಜರಾದ ಅಮಿತಾಬ್ ಬಚ್ಚನ್ (Amitabh Bachchan) ಹಾಗೂ ರಜನೀಕಾಂತ್ (Rajinikath) ಅವರುಗಳು ಒಟ್ಟಿಗೆ ನಟಿಸುತ್ತಿದ್ದಾರೆ. ಅದೂ 32 ವರ್ಷಗಳ ನಂತರ.

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಹೂಡುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ಇಬ್ಬರೂ ಭಾರತೀಯ ಚಿತ್ರರಂಗದ ಅತಿ ದೊಡ್ಡ ಸ್ಟಾರ್ ನಟರು. ಈ ಇಬ್ಬರು ತಾರೆಯರು ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಅಂದಾ ಕಾನೂನ್, ಗಿರಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಂಡಿದೆ. ದಶಕಗಳಷ್ಟು ಹಿಂದಿನ ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ, ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

ಇದನ್ನೂ ಓದಿ:Rajinikanth: ಆ ಸಿನಿಮಾ ಬಳಿಕ ರಜನೀಕಾಂತ್ ನಟನೆಯಿಂದ ನಿವೃತ್ತಿ?

ರಜನಿ-ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಸಿನಿಮಾ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

ರಜನೀಕಾಂತ್ ಪ್ರಸ್ತುತ ಜೈಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದಲ್ಲಿ ಶಿವರಾಜ್ ಕುಮಾರ್, ಜಾಕಿ ಶ್ರಾಫ್, ಮೋಹನ್​ಲಾಲ್, ತೆಲುಗಿನ ಸುನಿಲ್ ಇನ್ನೂ ಕೆಲವು ದೊಡ್ಡ ನಟರು ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಅದಾದ ಬಳಿಕ ಬಚ್ಚನ್-ರಜನೀ ಸಿನಿಮಾ ಸೆಟ್ಟೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Sat, 10 June 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು