AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ
ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on: Jul 04, 2021 | 8:05 PM

Share

ಬಾಲಿವುಡ್​ ನಟ ಅಮಿತಾಭ್​ ಬಚ್ಚನ್​ ಮುಂಬೈನಲ್ಲಿ ಮೊಟ್ಟ ಮೊದಲ ಬಾರಿಗೆ ಖರೀದಿಸಿದ ಮನೆ ಎಂದರೆ ಅದು ಪ್ರತೀಕ್ಷಾ. ಜುಹು ಏರಿಯಾದಲ್ಲಿರುವ ಈ ಬಂಗಲೆ ಕಂಡರೆ ಅಮಿತಾಭ್​ಗೆ ಎಲ್ಲಿಲ್ಲದ ಪ್ರೀತಿ. ಆದರೆ, ಈಗ ಬೃಹತ್​​ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)​ ಶನಿವಾರ ಅಮಿತಾಭ್​ಗೆ ಎರಡನೇ ನೋಟಿಸ್​ ನೀಡಿದೆ. ಈ ಬಂಗಲೆಯ ಒಂದು ಭಾಗ ನಾಶ ಮಾಡಲಾಗುತ್ತಿದೆ ಎಂದು ನೋಟಿಸ್​ನಲ್ಲಿ ತಿಳಿಸಿದೆ.

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ಬಿಎಂಸಿ ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ರಸ್ತೆ ಅಗಲೀಕರಣಕ್ಕೆ ಬಿಎಂಸಿ ಮುಂದಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

‘ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ರಸ್ತೆ ಅಗಲೀಕರಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ, ಬಿಎಂಸಿಗೆ ನಾನು ಪತ್ರ ಬರೆದು ಈ ಬಗ್ಗೆ ಉತ್ತರಿಸುವಂತೆ ಕೇಳಿದ್ದೆ. ಅಮಿತಾಭ್​ ಮನೆ ಇದೆ ಎನ್ನುವ ಕಾರಣಕ್ಕೆ ಈ ಪ್ರಾಜೆಕ್ಟ್​ ನಿಲ್ಲಿಸಲಾಗಿತ್ತು’ ಎಂದು ಅಡ್ವೋಕೆಟ್​ ಒಬ್ಬರು ದೂರಿದ್ದಾರೆ. ಇದಾದ ನಂತರದಲ್ಲಿ ಬಿಎಂಸಿ ಎಚ್ಚೆತ್ತುಕೊಂಡಿದೆ.

ಅಮಿತಾಭ್​ ಜತೆಗೆ ರಾಜ್​ಕುಮಾರ್​ ಹಿರಾನಿ, ಪಂಕಜ್​ ಬಾಲಾಜಿ ಸೇರಿ ಸಾಕಷ್ಟು ಸೆಲೆಬ್ರಿಟಿಗಳಿಗೆ ನೋಟಿಸ್​ ಜಾರಿ ಆಗಿತ್ತು ಎನ್ನಲಾಗಿದೆ. ಈಗ ಅವರುಗಳಿಗೂ ಎರಡನೇ ನೋಟಿಸ್​ ನೀಡಲಾಗಿದೆ. ಶೀಘ್ರವೇ ಇವರ ಮನೆಯ ಒಂದು ಭಾಗ ರಸ್ತೆ ಅಗಲೀಕರಣ ಕಾರ್ಯಕ್ಕೆ ಬಳಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ಇತ್ತೀಚೆಗೆ ಅಮಿತಾಭ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ

Follow Us
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!