AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ
ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on: Jul 04, 2021 | 8:05 PM

Share

ಬಾಲಿವುಡ್​ ನಟ ಅಮಿತಾಭ್​ ಬಚ್ಚನ್​ ಮುಂಬೈನಲ್ಲಿ ಮೊಟ್ಟ ಮೊದಲ ಬಾರಿಗೆ ಖರೀದಿಸಿದ ಮನೆ ಎಂದರೆ ಅದು ಪ್ರತೀಕ್ಷಾ. ಜುಹು ಏರಿಯಾದಲ್ಲಿರುವ ಈ ಬಂಗಲೆ ಕಂಡರೆ ಅಮಿತಾಭ್​ಗೆ ಎಲ್ಲಿಲ್ಲದ ಪ್ರೀತಿ. ಆದರೆ, ಈಗ ಬೃಹತ್​​ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)​ ಶನಿವಾರ ಅಮಿತಾಭ್​ಗೆ ಎರಡನೇ ನೋಟಿಸ್​ ನೀಡಿದೆ. ಈ ಬಂಗಲೆಯ ಒಂದು ಭಾಗ ನಾಶ ಮಾಡಲಾಗುತ್ತಿದೆ ಎಂದು ನೋಟಿಸ್​ನಲ್ಲಿ ತಿಳಿಸಿದೆ.

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ಬಿಎಂಸಿ ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ರಸ್ತೆ ಅಗಲೀಕರಣಕ್ಕೆ ಬಿಎಂಸಿ ಮುಂದಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

‘ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ರಸ್ತೆ ಅಗಲೀಕರಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ, ಬಿಎಂಸಿಗೆ ನಾನು ಪತ್ರ ಬರೆದು ಈ ಬಗ್ಗೆ ಉತ್ತರಿಸುವಂತೆ ಕೇಳಿದ್ದೆ. ಅಮಿತಾಭ್​ ಮನೆ ಇದೆ ಎನ್ನುವ ಕಾರಣಕ್ಕೆ ಈ ಪ್ರಾಜೆಕ್ಟ್​ ನಿಲ್ಲಿಸಲಾಗಿತ್ತು’ ಎಂದು ಅಡ್ವೋಕೆಟ್​ ಒಬ್ಬರು ದೂರಿದ್ದಾರೆ. ಇದಾದ ನಂತರದಲ್ಲಿ ಬಿಎಂಸಿ ಎಚ್ಚೆತ್ತುಕೊಂಡಿದೆ.

ಅಮಿತಾಭ್​ ಜತೆಗೆ ರಾಜ್​ಕುಮಾರ್​ ಹಿರಾನಿ, ಪಂಕಜ್​ ಬಾಲಾಜಿ ಸೇರಿ ಸಾಕಷ್ಟು ಸೆಲೆಬ್ರಿಟಿಗಳಿಗೆ ನೋಟಿಸ್​ ಜಾರಿ ಆಗಿತ್ತು ಎನ್ನಲಾಗಿದೆ. ಈಗ ಅವರುಗಳಿಗೂ ಎರಡನೇ ನೋಟಿಸ್​ ನೀಡಲಾಗಿದೆ. ಶೀಘ್ರವೇ ಇವರ ಮನೆಯ ಒಂದು ಭಾಗ ರಸ್ತೆ ಅಗಲೀಕರಣ ಕಾರ್ಯಕ್ಕೆ ಬಳಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ಇತ್ತೀಚೆಗೆ ಅಮಿತಾಭ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ