AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು.

ರಸ್ತೆ ಅಗಲೀಕರಣದಲ್ಲಿ ನಾಶವಾಗಲಿದೆ ಅಮಿತಾಭ್​ ಬಂಗಲೆಯ ಒಂದು ಭಾಗ
ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on: Jul 04, 2021 | 8:05 PM

Share

ಬಾಲಿವುಡ್​ ನಟ ಅಮಿತಾಭ್​ ಬಚ್ಚನ್​ ಮುಂಬೈನಲ್ಲಿ ಮೊಟ್ಟ ಮೊದಲ ಬಾರಿಗೆ ಖರೀದಿಸಿದ ಮನೆ ಎಂದರೆ ಅದು ಪ್ರತೀಕ್ಷಾ. ಜುಹು ಏರಿಯಾದಲ್ಲಿರುವ ಈ ಬಂಗಲೆ ಕಂಡರೆ ಅಮಿತಾಭ್​ಗೆ ಎಲ್ಲಿಲ್ಲದ ಪ್ರೀತಿ. ಆದರೆ, ಈಗ ಬೃಹತ್​​ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)​ ಶನಿವಾರ ಅಮಿತಾಭ್​ಗೆ ಎರಡನೇ ನೋಟಿಸ್​ ನೀಡಿದೆ. ಈ ಬಂಗಲೆಯ ಒಂದು ಭಾಗ ನಾಶ ಮಾಡಲಾಗುತ್ತಿದೆ ಎಂದು ನೋಟಿಸ್​ನಲ್ಲಿ ತಿಳಿಸಿದೆ.

ಸಂತ ಜ್ಞಾನೇಶ್ವರ ಮಾರ್ಗ್​​ ರಸ್ತೆಯಲ್ಲಿ ಅಮಿತಾಭ್​ ಮನೆ ಇದೆ. ಈಗ ಈ ರಸ್ತೆಯನ್ನು ಅಗಲೀಕರಣ ಮಾಡುವ ಕಾರ್ಯ ಆರಂಭವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ಬಿಎಂಸಿ ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಈಗ ರಸ್ತೆ ಅಗಲೀಕರಣಕ್ಕೆ ಬಿಎಂಸಿ ಮುಂದಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

‘ಅಮಿತಾಭ್​ಗೆ 2017ರಲ್ಲೇ ನೋಟಿಸ್​ ನೀಡಲಾಗಿತ್ತು. ಆದರೆ, ರಸ್ತೆ ಅಗಲೀಕರಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ, ಬಿಎಂಸಿಗೆ ನಾನು ಪತ್ರ ಬರೆದು ಈ ಬಗ್ಗೆ ಉತ್ತರಿಸುವಂತೆ ಕೇಳಿದ್ದೆ. ಅಮಿತಾಭ್​ ಮನೆ ಇದೆ ಎನ್ನುವ ಕಾರಣಕ್ಕೆ ಈ ಪ್ರಾಜೆಕ್ಟ್​ ನಿಲ್ಲಿಸಲಾಗಿತ್ತು’ ಎಂದು ಅಡ್ವೋಕೆಟ್​ ಒಬ್ಬರು ದೂರಿದ್ದಾರೆ. ಇದಾದ ನಂತರದಲ್ಲಿ ಬಿಎಂಸಿ ಎಚ್ಚೆತ್ತುಕೊಂಡಿದೆ.

ಅಮಿತಾಭ್​ ಜತೆಗೆ ರಾಜ್​ಕುಮಾರ್​ ಹಿರಾನಿ, ಪಂಕಜ್​ ಬಾಲಾಜಿ ಸೇರಿ ಸಾಕಷ್ಟು ಸೆಲೆಬ್ರಿಟಿಗಳಿಗೆ ನೋಟಿಸ್​ ಜಾರಿ ಆಗಿತ್ತು ಎನ್ನಲಾಗಿದೆ. ಈಗ ಅವರುಗಳಿಗೂ ಎರಡನೇ ನೋಟಿಸ್​ ನೀಡಲಾಗಿದೆ. ಶೀಘ್ರವೇ ಇವರ ಮನೆಯ ಒಂದು ಭಾಗ ರಸ್ತೆ ಅಗಲೀಕರಣ ಕಾರ್ಯಕ್ಕೆ ಬಳಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ಇತ್ತೀಚೆಗೆ ಅಮಿತಾಭ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ