AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್-ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ? ವೈರಲ್ ಪೋಸ್ಟ್​ ಇದಕ್ಕೆ ಸಾಕ್ಷಿ

‘ಕಜರಾ ರೇ..’ ಸಾಂಗ್ ಸೂಪರ್ ಹಿಟ್ ಆಗಿತ್ತು. ಇದರಲ್ಲಿ ಅಭಿಷೇಕ್ ಬಚ್ಚನ್, ಅಮಿತಾಭ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಇದ್ದರು. ಈ ಹಾಡಿನಲ್ಲಿ ಸಾಕಷ್ಟು ಎನರ್ಜಿಯೊಂದಿಗೆ ಈ ಮೂವರು ಡ್ಯಾನ್ಸ್ ಮಾಡಿದ್ದರು. ಈ ಹಾಡಿನ ಬಗ್ಗೆ ಮಾತನಾಡುವಾಗ ಅಮಿತಾಭ್ ಅವರು ಮಗನ ಹೊಗಳಿದ್ದಾರೆ. ಸೊಸೆಯನ್ನು ಉಲ್ಲೇಖವೇ ಮಾಡಿಲ್ಲ.

ಅಮಿತಾಭ್-ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ? ವೈರಲ್ ಪೋಸ್ಟ್​ ಇದಕ್ಕೆ ಸಾಕ್ಷಿ
ಅಮಿತಾಭ್-ಐಶ್ವರ್ಯಾ ಮಧ್ಯೆ ಯಾವುದೂ ಸರಿ ಇಲ್ಲ? ವೈರಲ್ ಪೋಸ್ಟ್​ ಇದಕ್ಕೆ ಸಾಕ್ಷಿ
ರಾಜೇಶ್ ದುಗ್ಗುಮನೆ
|

Updated on: May 30, 2024 | 7:35 AM

Share

ಅಮಿತಾಭ್ ಬಚ್ಚನ (Amitabh Bachchan) ಕುಟುಂಬದ ಸುದ್ದಿ ಆಗಾಗ ಬೀದಿಗಳಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಅಮಿತಾಭ್ ಹಾಗೂ ಅವರ ಸೊಸೆ ಐಶ್ವರ್ಯಾ ರೈ ಬಚ್ಚನ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿತ್ತು. ಈ ಕಾರಣಕ್ಕೆ ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯುತ್ತಾರೆ ಎನ್ನಲಾಗಿತ್ತು. ಆದರೆ, ಕುಟುಂಬದವರು ಹಲವು ಬಾರಿ ಒಟ್ಟಾಗಿ ಕಾಣಿಸಿಕೊಂಡ ಬಳಿಕ ಈ ಸುದ್ದಿ ತಣ್ಣಗಾಯಿತು. ಈಗ ಮತ್ತೆ ಇದೇ ಚರ್ಚೆ ಶುರುವಾಗಿದೆ. ಇದಕ್ಕೆ ಕಾರಣವಾಗಿತ್ತು ಅಮಿತಾಭ್ ಅವರ ಪೋಸ್ಟ್.

‘ಕಜರಾ ರೇ..’ ಸಾಂಗ್ ಸೂಪರ್ ಹಿಟ್ ಆಗಿತ್ತು. ಇದರಲ್ಲಿ ಅಭಿಷೇಕ್ ಬಚ್ಚನ್, ಅಮಿತಾಭ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಇದ್ದರು. ಈ ಹಾಡಿನಲ್ಲಿ ಸಾಕಷ್ಟು ಎನರ್ಜಿಯೊಂದಿಗೆ ಈ ಮೂವರು ಡ್ಯಾನ್ಸ್ ಮಾಡಿದ್ದರು. ಇದು ‘ಬಂಟಿ ಔರ್ ಬಬ್ಲಿ’ ಚಿತ್ರದ ಹಾಡು. ಈ ಸಿನಿಮಾ 2005ರ ಮೇ 27ರಂದು ರಿಲೀಸ್ ಆಗಿತ್ತು. ಈ ಚಿತ್ರ ಬಿಡುಗಡೆ ಆಗಿ 19 ವರ್ಷ ಕಳೆದ ಹಿನ್ನೆಲೆಯಲ್ಲಿ ಫ್ಯಾನ್ಸ್ ಈ ಚಿತ್ರವನ್ನು, ಸಿನಿಮಾದ ಹಾಡನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಈ ಟ್ವೀಟ್​ನ ಅಮಿತಾಭ್ ರೀಟ್ವೀಟ್ ಮಾಡಿದ್ದಾರೆ. ‘ಈ ಹಾಡು ಎಷ್ಟು ಜನಪ್ರಿಯವಾಯಿತು ಎಂದರೆ ಅದು ಇನ್ನೂ ಜನರಿಂದ ಮೆಚ್ಚುಗೆ ಹಾಗೂ ಪ್ರೀತಿ ಪಡೆಯುತ್ತಿದೆ. ಮಗನ ಜೊತೆ ಡ್ಯಾನ್ಸ್ ಮಾಡಿದ್ದು ಅತ್ಯುತ್ತಮ ಕ್ಷಣ’ ಎಂದು ಅಮಿತಾಭ್ ಟ್ವೀಟ್ ಮಾಡಿದ್ದಾರೆ. ಆದರೆ, ಈ ಪೋಸ್ಟ್​ನಲ್ಲಿ ಅವರು ಐಶ್ವರ್ಯಾ ಅವರನ್ನು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

‘ಕಜರಾರೇ ಹಾಡಿನಲ್ಲಿ ಐಶ್ವರ್ಯಾ ಕೂಡ ಇದ್ದರು. ಈ ಹಾಡಿನಲ್ಲಿ ಐಶ್ವರ್ಯಾ ಮುಖ್ಯಪಾತ್ರಧಾರಿ. ನೀವಿಬ್ಬರು (ಅಭಿಷೇಕ್-ಅಮಿತಾಭ್) ಸಪೋರ್ಟಿಂಗ್ ಡ್ಯಾನ್ಸರ್​ಗಳು ಅಷ್ಟೇ’ ಎಂದು ಕೆಲವರು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ‘ಐಶ್ವರ್ಯಾ-ಅಮಿತಾಭ್ ಮಧ್ಯೆ ಯಾವುದೂ ಸರಿ ಇಲ್ಲ. ಎಲ್ಲವೂ ತೋರಿಕೆಗೆ’ ಎಂದಿದ್ದಾರೆ ಕೆಲವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?